Friday, February 6, 2026
Friday, February 6, 2026

ಶೀಘ್ರದಲ್ಲೇ, ತಾಲೂಕು ಸಮಿತಿಗಳ ಘೋಷಣೆ

Date:

‘ಜಿಲ್ಲೆಯನ್ನು ಸಾಹಿತ್ಯಿಕವಾಗಿ ಹಾಗೂ ಸಾಂಸ್ಕೃತಿಕವಾಗಿ ಬೆಳೆಸಲು ಎಲ್ಲರೂ ಮುಂದಾಗಬೇಕು. ಜಿಲ್ಲೆಯಲ್ಲಿ ನಿರಂತರವಾಗಿ ಕನ್ನಡ ಭಾಷೆ ಬೆಳವಣಿಗೆಗೆ ಪೂರಕವಾದ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ನಾಡು-ನುಡಿ ಬೆಳವಣಿಗೆಗಾಗಿ ಶ್ರಮಿಸಬೇಕು. ಶಾಲೆ ಮತ್ತು ಮನೆಯಂಗಳದಲ್ಲಿ ಸಾಹಿತ್ಯ ಪರಿಷತ್ತು ಚಟುವಟಿಕೆ ನಡೆಸೋಣ ಎಂದು ಶಿವಮೊಗ್ಗ ಜಿಲ್ಲಾ ಕಸಾಪ ಅಧ್ಯಕ್ಷ ಡಿ. ಮಂಜುನಾಥ್ ಅವರು ಹೇಳಿದ್ದಾರೆ.

ಶಿಕಾರಿಪುರದ, ಗುರುಭವನದಲ್ಲಿ ನಡೆದ ಅಭಿನಂದನಾ ಸಮಾರಂಭ ಹಾಗೂ ಆಜೀವ ಸದಸ್ಯರ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.

ತಾಲೂಕು ಮಟ್ಟದಲ್ಲಿ ಸಾಹಿತ್ಯ ಪರಿಷತ್ ಚಟುವಟಿಕೆ ನಡೆಸಲು ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಅಗತ್ಯವಾದ ಸಮಯವನ್ನು ಮೀಸಲಿಡಬೇಕು. ಅಂತವರು ಮಾತ್ರ ನಮ್ಮ ಜೊತೆ ಬರಬೇಕು. ಮುಂದಿನ ದಿನಗಳಲ್ಲಿ ಶಿವಮೊಗ್ಗದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನೂತನ ಅಧ್ಯಕ್ಷರ ಹೆಸರು ಘೋಷಣೆ ಮಾಡಲಾಗುತ್ತದೆ ಎಂದು ಕೂಡ ತಿಳಿಸಿದರು.

ಇದೇ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಹಿರಿಯ ಆಜೀವ ಸದಸ್ಯರಾದ ಎಸ್.ಆರ್. ಕೃಷ್ಣಪ್ಪ, ಕಾನೂರು ನಾಗಪ್ಪ, ಚುರ್ಚಿಗುಂಡಿ ಪ್ರೊ. ಬಸವನಗೌಡ್ರು, ಸರ್ವಮಂಗಳಮ್ಮ, ಶಿರಳಕೊಪ್ಪ ಟಿ. ರಾಜಶೇಖರ್ ಮತ್ತು ನಿಜಲಿಂಗಪ್ಪ ಗೌಡ್ರು ಅವರನ್ನು ಸನ್ಮಾನಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Ambedkar Bhavan Shivamogga ಫೆಬ್ರವರಿ 14. ” ಹ್ಯಾಪಿ ಫೀಟ್- 2026″ ವಿಶೇಷ ನೃತ್ಯ ಪ್ರದರ್ಶನ

Ambedkar Bhavan Shivamogga ನೃತ್ಯಸಿರಿ ಡ್ಯಾನ್ಸ್ ಸ್ಟುಡಿಯೋ ವತಿಯಿಂದ “ಹ್ಯಾಪಿ ಫೀಟ್-2026”...

Dharmasthala Rural Development Project ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ವಾತ್ಸಲ್ಯ ಕಿಟ್ ವಿತರಣೆ

Dharmasthala Rural Development Project ಶಿವಮೊಗ್ಗ ತಾಲೂಕಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ...

ಕರವೇ ಜನಮನ ರಾಜ್ಯ ಸಂಘಟನೆಯ ಪದಾಧಿಕಾರಿಗಳ ಪ್ರಮಾಣವಚನ ಸ್ವೀಕಾರ

ಕನ್ನಡ ರಕ್ಷಣಾ ವೇದಿಕೆ ಜನಮನ ರಾಜ್ಯ ಸಂಘಟನೆಯ ಪದಾಧಿಕಾರಿಗಳ ಅಧಿಕಾರದ ಪ್ರಮಾಣ...