Friday, August 14, 2026
Friday, August 14, 2026

ಗೋಸಂರಕ್ಷಣೆಗೆ 1962 ಕರೆ ಮಾಡಿ

Date:

ರಾಜ್ಯದಲ್ಲಿ ಗೋಕಳ್ಳರ ಉಪಟಳ ಹೆಚ್ಚಾಗಿದೆ. ಈ ನಡುವೆ ಬಿಜೆಪಿ ಸರ್ಕಾರ ಗೋವುಗಳ ರಕ್ಷಣೆಗೆ ಒಟ್ಟು 275 ಆಂಬುಲೆನ್ಸ್ ವ್ಯವಸ್ಥೆಯನ್ನು ಪ್ರಾರಂಭಿಸಿದೆ.

ಅನಾರೋಗ್ಯ ಪೀಡಿತ ಅಥವಾ ಅಪಘಾತಕ್ಕೆ ಸಿಲುಕಿ ಗಾಯಗೊಂಡ ಗೋವುಗಳಿಗೆ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಪ್ರತಿ ತಾಲೂಕಿಗೊಂದರಂತೆ 275 ಸುಸಜ್ಜಿತ ಪಶು ಸಂಜೀವಿನಿ ಆಂಬುಲೆನ್ಸ್ ಸೇವೆ ನೀಡುತ್ತವೆ ಎಂದು ಪಶುಸಂಗೋಪನೆ ಸಚಿವ ಪ್ರಭು.ಬಿ.ಚವ್ಹಾಣ್ ಹೇಳಿದ್ದಾರೆ.

“ಪಶು ಸಂಜೀವಿನಿ ಆಂಬುಲೆನ್ಸ್ ಗೆ ಟೆಂಡರ್ ಪ್ರಕ್ರಿಯೆ ಮುಗಿದಿದೆ. ರಾಜ್ಯಕ್ಕೆ 275 ಆಂಬುಲೆನ್ಸ್ ನೀಡುತ್ತೇವೆ. ಪಶು ಸಂಜೀವಿನಿ ಆಂಬುಲೆನ್ಸ್ ಗಾಗಿ 1962 ದೂರವಾಣಿ ಸಂಖ್ಯೆಗೆ ಕರೆ ಮಾಡಿದರೆ ಸ್ಥಳಕ್ಕೆ ಬರುತ್ತದೆ” ಎಂದು ಸಚಿವ ತಿಳಿಸಿದ್ದಾರೆ.

ಪ್ರಥಮ ಬಾರಿಗೆ ಪ್ರಾಣಿ ಸಹಾಯವಾಣಿ ಕೇಂದ್ರವನ್ನು ರಾಜ್ಯ ಸರ್ಕಾರ ತೆರೆದಿದೆ. ಪಶುಸಂಗೋಪನಾ ಇಲಾಖೆಗೆ ಸಂಬಂಧಿಸಿದ ಮಾಹಿತಿ, ಇಲಾಖೆ ಅಧಿಕಾರಿಗಳು, ವೈದ್ಯರ ಬಗ್ಗೆ ದೂರು ಸೇರಿದಂತೆ ಹಲವು ಮಾಹಿತಿಯನ್ನು ಕರೆ ಮಾಡಿ ತಿಳಿಸಬಹುದು. ಕಳೆದ 3 ತಿಂಗಳಿನಲ್ಲಿ 30 ಸಾವಿರ ಫೋನ್ ಕರೆಗಳು ಬಂದಿವೆ. ಶೇ.75ರಷ್ಟು ಸಮಸ್ಯೆಗಳಿಗೆ ಸ್ಪಂದಿಸಿದ್ದೇವೆ ಎಂದು ಸಚಿವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...