Sunday, August 2, 2026
Sunday, August 2, 2026

Dombi-bomb explosion ಪರಿಹಾರಕ್ಕೆ ಅರ್ಹನಾದ ವ್ಯಕ್ತಿ ವಿಳಾಸದಲ್ಲಿ ಪತ್ತೆಯಿಲ್ಲ. ವಾರಸುದಾರರಿಗೆ ಪರಿಹಾರ ಪಡೆಯಲು ಪ್ರಕಟಣೆ

Date:

Dombi-bomb explosion ಮುಂಬೈನಲ್ಲಿ ನಡೆದ ದೊಂಬಿ-ಬಾಂಬ್ ಸ್ಪೋಟದಲ್ಲಿ ಗಾಯಗೊಂಡ/ಮೃತಪಟ್ಟ ವ್ಯಕ್ತಿಗಳ ವಾರಸುದಾರರಿಗೆ ಪರಿಹಾರ ಪಾವತಿಸಲು ಸರ್ವೋಚ್ಚ ನ್ಯಾಯಾಲಯದ ಆದೇಶವಾಗಿದ್ದು, ಚಿಕ್ಕಲ್ ಗ್ರಾಮದ ಮುಕ್ತಾರ್ ಬಾನೋ ಬಾದ್ ಷಾ ಶೇಕ್ ಎಂಬುವರು ಪರಿಹಾರಕ್ಕೆ ಅರ್ಹರಾಗಿರುತ್ತಾರೆ. ಆದರೆ ಸದರಿ ವಿಳಾಸದಲ್ಲಿ ಅವರು ಪತ್ತೆ ಆಗಿರುವುದಿಲ್ಲ.

ಮಾನ್ಯ ಸರ್ವೋಚ್ಚ ನ್ಯಾಯಾಲಯವರು ಸಿವಿಲ್ ರಿಟ್ ಪಿಟಿಶನ್ ಸಂಖ್ಯೆ: 182/2001 ರಲ್ಲಿ 1992/93ನೇ ಸಾಲಿನಲ್ಲಿ ಮುಂಬೈನಲ್ಲಿ ನಡೆದ ದೊಂಬಿ ಬಾಂಬ್ ಬ್ಲಾಸ್ಟ್‍ನಲ್ಲಿ ಗಾಯಗೊಂಡ/ಮೃತಪಟ್ಟ ವ್ಯಕ್ತಿಗಳ ವಾರಸುದಾರರಿಗೆ ಪರಿಹಾರವನ್ನು ಪಾವತಿಸುವಂತೆ ಆದೇಶ ಮಾಡಿರುತ್ತದೆ.

ಈ ಸಂಬಂಧ ಸಕ್ಷಮ ಪ್ರಾಧಿಕಾರವು ಸದರಿ ಘಟನೆಯಲ್ಲಿ ಗಾಯಗೊಂಡ/ಮೃತಪಟ್ಟ ವ್ಯಕ್ತಿಗಳನ್ನು ಗುರುತಿಸಿರುತ್ತಾರೆ. ಆ ಪೈಕಿ ಮುಕ್ತಾರ್ ಬಾನೋ ಬಾದ್ ಷಾ ಶೇಕ್, ಚಿಕ್ಕಲ್ ಗ್ರಾಮದ ವಾಸಿ ಇವರು ಕೂಡ ಪರಿಹಾರಕ್ಕೆ ಅರ್ಹರೆಂದು ಗುರುತಿಸಲಾಗಿದ್ದು ಈಗ ಅವರು ಈ ವಿಳಾಸದಲ್ಲಿ ಪತ್ತೆ ಆಗಿರುವುದಿಲ್ಲ. ಆದ್ದರಿಂದ ಅವರ ವಾರಸುದಾರರು ಈ ಕೂಡಲೇ ಪರಿಹಾರ ಪಡೆಯುವ ಸಲುವಾಗಿ ಮಹಾರಾಷ್ಟ್ರದ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವನ್ನು ಸಂಪರ್ಕಿಸುವುದು.

Dombi-bomb explosion ಹೆಚ್ಚಿನ ಮಾಹಿತಿಗಾಗಿ ಹಾಗೂ ಸಹಾಯಕ್ಕಾಗಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಅಥವಾ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಶಿವಮೊಗ್ಗ ಇವರನ್ನು ಸಂಪರ್ಕಿಸಬಹುದೆಂದು ಹಿರಿಯ ವ್ಯವಹಾರ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎನ್.ಚಂದನ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...