Friday, February 6, 2026
Friday, February 6, 2026

ವಿಜಯ್ ಹಜಾರೆ ಟ್ರೋಫಿ : ಬರೋಡಾ ವಿರುದ್ಧ ಕರ್ನಾಟಕ ಜಯ

Date:

ವಿಜಯ್ ಹಜಾರೆ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯ 4 ನೇ ಪಂದ್ಯವು ಕರ್ನಾಟಕ ಮತ್ತು ಬರೋಡಾ ತಂಡಗಳ ನಡುವೆ ಪಂದ್ಯ ನಡೆಯಿತು. ಬರೋಡ ತಂಡದ ವಿರುದ್ಧ ಜಯ ಸಾಧಿಸಿದೆ. ಪ್ರಸ್ತುತ ವಿಜಯ್ ಹಜಾರೆ ಟ್ರೋಫಿ ಪಂದ್ಯಾವಳಿಯಲ್ಲಿ
ಕರ್ನಾಟಕ ಸತತ ಮೂರನೇ ಜಯ ಸಾಧಿಸಿದಂತಾಗಿದೆ.
ತಿರುವನಂತಪುರದ ಮಂಗಳಾಪುರ ಕ್ರೀಡಾಂಗಣದಲ್ಲಿ ನಡೆದ “ಬಿ” ಗುಂಪಿನ ಪಂದ್ಯದಲ್ಲಿ ಟಾಸ್ ಗೆದ್ದ ಕರ್ನಾಟಕ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಎದುರಾಳಿ ತಂಡಕ್ಕೆ ಮೊದಲು ಬ್ಯಾಟಿಂಗ್ ಆಡಲು ಅವಕಾಶ ಮಾಡಿಕೊಟ್ಟಿತು.
ಮೊದಲಿಗೆ ಬ್ಯಾಟಿಂಗ್ ಮಾಡಿದ ಬರೋಡಾ ತಂಡ 48.3 ಓವರ್ ಗಳಲ್ಲಿ 176 ರನ್ ಗಳಿಸಿತು.ಹೆಚ್ಚು ರನ್ ಗಳಿಸಲು ಕರ್ನಾಟಕದ ಬೌಲರ್ ಗಳು ಬಿಟ್ಟು ಕೊಡಲಿಲ್ಲ.
ಬರೋಡಾ ತಂಡದಲ್ಲಿ ಮೊದಲು ಬ್ಯಾಟಿಂಗ್ ಹಂತದಲ್ಲಿ ಅಂಕಣಕ್ಕೆ ಇಳಿದು ಆಡಿದ ಆರಂಭಿಕ ಜೋಡಿ ಕೇದಾರ್ ದೇವದಾರ್ ಮತ್ತು ಆದಿತ್ಯ ವಾಘಮೊಡೆ 59 ರನ್ ಗಳ ಜೊತೆಯಾಟದ ಮೂಲಕ ಭರವಸೆ ಮೂಡಿಸಿದರು. ಇವರಿಬ್ಬರ ವಿಕೆಟ್ ಕೌಶಿಕ್ ಉರುಳಿಸಿದರು.ಹಿಂದಿನ ಪಂದ್ಯದ ಹೀರೋ ಪ್ರವೀಣ್ ದುಬೆ ಅವರು ಅಭಿಮನ್ಯು ಸಿಂಗ್ ರಜಪೂತ್ ವಿಕೆಟ್ ಪಡೆದರು.ನಂತರ ಕೃಣಲ್ ಪಾಂಡ್ಯ ತಾಳ್ಮೆಯ ಆಟದ ಮೂಲಕ ರನ್ ಸೇರಿಸಿದರು.
ಕೆ. ಸಿ ಕಾರ್ಯಪ್ಪ ಅವರ LBW ಬಲೆಗೆ ಬಿದ್ದ ನಂತರ ತಂಡದ ವಿಕೆಟ್ ಗಳು ಬೇಗನೆ ಉರುಳತೊಡಗಿದವು. 5 ಬ್ಯಾಟರ್ ಗಳು ಎರಡoಕಿ ಮೊತ್ತ ದಾಟಲಾಗದೆ ಮರಳಿದರು.
ನಂತರ ಅಂಕಣಕ್ಕೆ ಇಳಿದ ಭಾನು ಪತ್ಯ ಏಕಾಂಗಿ ಹೋರಾಟದ ಮೂಲಕ ತಂಡದ ಇನ್ನಿಂಗ್ಸ್ ನ 2 ಸಿಕ್ಸರ್ ಗಳು ಅವರ ಬ್ಯಾಟಿಂಗ್ ನಿಂದ ಬಂದವು. ತಂಡವು 176 ರನ್ ಗಳಿಸುವಲ್ಲಿ ಆಸರೆಯಾದರು.
176 ರನ್ ಗಳ ಗೆಲುವಿನ ಗುರಿ ಬೆನ್ನತ್ತಿದ ಕರ್ನಾಟಕ ತಂಡ ಬರೋಡಾ ಇನ್ನಿಂಗ್ಸ್ ಮುಗಿದ ಕೂಡಲೇ ಮಳೆ ಸುರಿದು ಪಂದ್ಯ ಸ್ಥಗಿತಗೊಂಡಿತು. ನಂತರ ಮತ್ತೆ ಆರಂಭ ಗೊಂಡಾಗ 42 ಓವರ್ ಗಳಲ್ಲಿ 147 ರನ್ ಗಳ ಗುರಿಯನ್ನು ನೀಡಲಾಯಿತು.
ಆರಂಭಿಕ ಜೋಡಿ R. ಸಮರ್ಥ್ ಮತ್ತು ರೋಹನ್ ಕದಂ 44 ರನ್ ಸೇರಿಸಿದರು.ಅಷ್ಟರಲ್ಲಿ ರೋಹನ್ ವಿಕೆಟ್ ಕಳೆದುಕೊಂಡರೂ.
ನಂತರ ಸಿದ್ದಾರ್ಥ್ ಆಟ ರಂಗೇರಿತು. 25 ರನ್ ಗಳ ಜೊತೆಯಾಟವಾಡಿ ಸಮರ್ಥ್ ಔಟಾದರೆ, ಕರುಣ್ ನಾಯರ್ ಕೂಡ ರನ್ ಔಟ್ ಆಗಿ ವಾಪಸಾದರು.
ಕ್ರೀಸ್ ನಲ್ಲಿ ಸಿದ್ದಾರ್ಥ್ ಜೊತೆ 5 ನೇ ವಿಕೆಟ್ ಹಂತಕ್ಕೆ ಕೀಪರ್ ಶರತ್ ಜೊತೆಗೂಡಿ 47 ರನ್ ಗಳನ್ನ ತಂಡಕ್ಕೆ ಸೇರಿಸಿದರು.ಒಟ್ಟು 150 ರನ್ ಗಳಿಸುವಂತೆ ಮಾಡಿ 38.4 ಓವರ್ ಗಳಲ್ಲಿ ಜಯ ತಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Ambedkar Bhavan Shivamogga ಫೆಬ್ರವರಿ 14. ” ಹ್ಯಾಪಿ ಫೀಟ್- 2026″ ವಿಶೇಷ ನೃತ್ಯ ಪ್ರದರ್ಶನ

Ambedkar Bhavan Shivamogga ನೃತ್ಯಸಿರಿ ಡ್ಯಾನ್ಸ್ ಸ್ಟುಡಿಯೋ ವತಿಯಿಂದ “ಹ್ಯಾಪಿ ಫೀಟ್-2026”...

Dharmasthala Rural Development Project ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ವಾತ್ಸಲ್ಯ ಕಿಟ್ ವಿತರಣೆ

Dharmasthala Rural Development Project ಶಿವಮೊಗ್ಗ ತಾಲೂಕಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ...

ಕರವೇ ಜನಮನ ರಾಜ್ಯ ಸಂಘಟನೆಯ ಪದಾಧಿಕಾರಿಗಳ ಪ್ರಮಾಣವಚನ ಸ್ವೀಕಾರ

ಕನ್ನಡ ರಕ್ಷಣಾ ವೇದಿಕೆ ಜನಮನ ರಾಜ್ಯ ಸಂಘಟನೆಯ ಪದಾಧಿಕಾರಿಗಳ ಅಧಿಕಾರದ ಪ್ರಮಾಣ...