Monday, March 23, 2026
Monday, March 23, 2026

Radio Shivamogga ಓದು & ಓದಿಗೆ ಉತ್ತೇಜನಗಳ ಬಗ್ಗೆ ವಿದ್ಯಾರ್ಥಿ ಮತ್ತು ಪೋಷಕರಿಗೆ ಕಾರ್ಯಾಗಾರ

Date:

Radio Shivamogga ರೇಡಿಯೋ ಶಿವಮೊಗ್ಗ, ಪರಿಸರ ಅಧ್ಯಯನ ಕೇಂದ್ರ, ರಾಷ್ಟ್ರೀಯ ಶಿಕ್ಷಣ ಸಮಿತಿ ಹಾಗೂ ಸುಬ್ಬಯ್ಯ ಮೆಡಿಕಲ್ ಕಾಲೇಜು ಆಸ್ಪತ್ರೆ ಸಹಯೋಗದಲ್ಲಿ ಹತ್ತನೆಯ ತರಗತಿ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪಾಲಕರಿಗೆ ವಿಶೇಷ ಕಾರ್ಯಾಗಾರ ಶಿವಮೊಗ್ಗದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಚಂದನ ಸಭಾಂಗಣದಲ್ಲಿ ನಡೆಯಿತು.

ಪರೀಕ್ಷಾ ಸಮಯದಲ್ಲಿ ಪಾಲಕರು ಹೇಗಿರಬೇಕು ಎಂಬ ಕಾರ್ಯಾಗಾರ ಇದಾಗಿತ್ತು. ಇದರಲ್ಲಿ ಮನೋವಿಜ್ಞಾನಿ, ಶಿವಮೊಗ್ಗದ ಸುಬ್ಬಯ್ಯ ಮೆಡಿಕಲ್ ಕಾಲೇಜು ಆಸ್ಪತ್ರೆಯ ಮನೋವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ದಯಾನಂದ ಸಾಗರ್, ಆಹಾರ ತಜ್ಞರಾದ ನಿರಾಲಿ ಹಾಗೂ ಅರ್ಪಿತಾ ಶೆಟ್ಟಿ ಭಾಗವಹಿಸಿದ್ದರು.

ಸಂವಾದ ರೂಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲಕರು ತಮ್ಮ ಅನೇಕ ಸಂದೇಹ, ಗೊಂದಲಗಳಿಗೆ ಉತ್ತರ ಕಂಡುಕೊಂಡರು.

ಮನೋವಿಜ್ಞಾನಿ, ಶಿವಮೊಗ್ಗದ ಸುಬ್ಬಯ್ಯ ಮೆಡಿಕಲ್ ಕಾಲೇಜು ಆಸ್ಪತ್ರೆಯ ಮನೋವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ದಯಾನಂದ ಸಾಗರ್ ಜೊತೆಗೆ ನಡೆದ ಸಂವಾದದಲ್ಲಿ ಒತ್ತಡಗಳನ್ನು ನಿರ್ವಹಿಸುವ ಬಗೆಯನ್ನು ತಿಳಿದುಕೊಂಡರು. ಪಾಲಕರು ಹಾಗೂ ಮಕ್ಕಳ ನಡುವೆ ಬಾಂಧವ್ಯ ಹೇಗಿರಬೇಕು, ಮಕ್ಕಳಿಗೆ ನಿರ್ಣಾಯಕ ಘಟ್ಟದ ಪರೀಕ್ಷೆಗಳ ಸಂದರ್ಭದಲ್ಲಿ, ಅವರಿಗೆ ಹೇಗೆ ಆತ್ಮವಿಶ್ವಾಸ ತುಂಬಿಸಿ, ಮುನ್ನಡೆಸಬೇಕು ಇತ್ಯಾದಿ ಮಾಹಿತಿಗಳನ್ನು ಪಡೆದುಕೊಂಡರು.

ಆಹಾರ ತಜ್ಞರಾದ ನಿರಾಲಿ ಹಾಗೂ ಅರ್ಪಿತಾ ಶೆಟ್ಟಿ ಮಾತನಾಡಿ ಪರೀಕ್ಷಾ ಸಮಯದಲ್ಲಿ ಆಹಾರ ಹೇಗಿರಬೇಕು, ಪೌಷ್ಟಿಕಾಂಶಯುಕ್ತ ಆಹಾರಗಳೆಂದರೆ ಯಾವುವು, ಅದನ್ನು ಯಾವ ಸಮಯದಲ್ಲಿ, ಯಾವ ಪ್ರಮಾಣದಲ್ಲಿ ನೀಡಬೇಕು ಎಂಬುದರ ಬಗ್ಗೆ ಮಾಹಿತಿ ನೀಡಿದರು.

Radio Shivamogga ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಎನ್ ಎಸ್ ಎಸ್ ಯೋಜನಾಧಿಕಾರಿ ನಾಗರಾಜ್, ಕಾಲೇಜಿನ ಉಪ ಪ್ರಾಂಶುಪಾಲ ಜಗದೀಶ್, ರೇಡಿಯೋ ಶಿವಮೊಗ್ಗದ ಸಂಯೋಜಕ ಗುರುಪ್ರಸಾದ್ ಬಾಲಕೃಷ್ಣ, ಕಾರ್ಯಕ್ರಮ ಸಂಯೋಜಕ ಅಜೇಯ ಸಿಂಹ, ಆರ್ ಜೆ ಗಳಾದ ಮಹಾಲಕ್ಷ್ಮೀ, ರಕ್ಷಿತಾ ಹೊಳ್ಳ, ಅಶ್ವಿನಿ ಇನ್ನಿತರರು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

N. Chaluvaraya Swamy ಎಲ್ಲಾ ಹುದ್ದೆಗಳ ನೇಮಕಾತಿ ಕೆಇಎ ಮೂಲಕ ನಡೆಸಲು ಸರ್ಕಾರದ ನಿರ್ಧಾರ- ಸಚಿವ ಎನ್.ಚಲುವರಾಯ ಸ್ವಾಮಿ

N. Chaluvaraya Swamy ನಮ್ಮ ರಾಜ್ಯದ ಸಾವಿರಾರು ನಿರುದ್ಯೋಗಿ ಯುವಜನತೆಯ ಹಾಗೂ...

University of Agricultural 2047 ರ ಹೊತ್ತಿಗೆ ನಮ್ಮ ದೇಶ ಆಹಾರ ವ್ಯವಸ್ಥೆಯಲ್ಲಿ ಜಾಗತಿಕ ಶಕ್ತಿಯಾಗಿ ಹೊಮ್ಮಲಿದೆ- ಡಾ.ಎಸ್.ಕೆ.ಮಲ್ಹೋತ್ರಾ

University of Agricultural ಅತ್ಯುತ್ತಮ ಪರಿಸರ ಸೇವೆ ನೀಡುತ್ತಿರುವ ಅಲಂಕಾರಿಕ ತೋಟಗಾರಿಕೆ...

CM Siddaramaiah ಮೌಢ್ಯತೆ ವಿರುದ್ಧ ಸಿಡಿದೆದ್ದುಸಮಸಮಾಜದ ಕನಸು ಬಿತ್ತಿದ ಶರಣ ದೇವರ ದಾಸಿಂಯ್ಯ- ಸಿದ್ಧರಾಮಯ್ಯ

CM Siddaramaiah ಮೌಢ್ಯ, ಕಂದಾಚಾರಗಳ‌ ಹೆಸರಿನಲ್ಲಿ ತಳ ಸಮುದಾಯಗಳ ಜನರನ್ನು...