Monday, May 4, 2026
Monday, May 4, 2026

Madhu Bangarappa ಬಿಟ್ಟಿ ಭಾಗ್ಯ ಎನ್ನುವುದೆಷ್ಟು ಸರಿ? ನಿಮ್ಮ ತೆರಿಗೆ ನಿಮ್ಮ ಮಡಿಲಿಗೆ ಹಾಕುತ್ತಿದ್ದೇವೆ- ಮಧು ಬಂಗಾರಪ್ಪ

Date:

Madhu Bangarappa ರಾಜ್ಯ ಕಾಂಗ್ರೆಸ್ ಸರ್ಕಾರ ಮಹತ್ವಾಕಾಂಕ್ಷೆಯ 5 ಗ್ಯಾರಂಟಿ ಯೋಜನೆಗಳನ್ನು ಜನತೆಗೆ ನೀಡುವ ಮೂಲಕ ನಾವು ಕೊಟ್ಟ ಮಾತಿನಂತೆ ನಡೆದುಕೊಂಡು ಮತದಾರರ ವಿಶ್ವಾಸ ಉಳಿಸಿಕೊಂಡಿದ್ದೇವೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಅವರು ಹೇಳಿದ್ದಾರೆ.

ಶಿಕಾರಿಪುರ ಪಟ್ಟಣದಲ್ಲಿ ತಾಲೂಕು ಆಡಳಿತ, ಪುರಸಭೆ ಆಯೋಜಿಸಿದ್ದ ಗ್ಯಾರಂಟಿ ಸಮಾವೇಶಕ್ಕೆ ಚಾಲನೆ ನೀಡಿ ಮಧು ಬಂಗಾರಪ್ಪ ಅವರು ಮಾತನಾಡಿದರು.

ಗ್ಯಾರೆಂಟಿ ಕುರಿತು ಪ್ರತಿಪಕ್ಷದವರು ಕೀಳು ಭಾಷೆ ಬಳಸುತ್ತಿದ್ದಾರೆ. ಬಿಟ್ಟಿ ಭಾಗ್ಯ ಎನ್ನುವುದು ಎಷ್ಟು ಸರಿ. ನಿಮ್ಮ ತೆರಿಗೆ ಹಣ ನಿಮ್ಮ ಮಡಿಲಿಗೆ ಹಾಕುತ್ತಿದ್ದೇವೆ. ಬಿಟ್ಟಿ ಭಾಗ್ಯ ಎನ್ನುವವರಿಗೆ ಸರಿಯಾದ ಪಾಠ ಕಲಿಸಿ ಎಂದು ಹೇಳಿದ್ದಾರೆ.

ಶಿಕಾರಿಪುರಕ್ಕೆ ಆಗಮಿಸಿದ್ದಾಗಲಿಲ್ಲ ನೆಂಟರು , ಬೀಗರ ಮನೆಗೆ ಬಂದ ಸಂತೋಷದ ಅನುಭವ ನೀಡುತ್ತದೆ. ಬರಗಾಲದಲ್ಲಿ ರಾಜ್ಯಕ್ಕೆ ಅನುದಾನ ನೀಡಿ ದವರ ಎದುರು ಬರಗಾಲಕ್ಕೆ ಅಕ್ಕಿ, ಬಿತ್ತನೆ ಬೀಜ ನೀಡಿದ ಬಂಗಾರಪ್ಪ ತೂಕವಾಗಿ ನಿಲ್ಲುತ್ತಾರೆ. ಜಿಲ್ಲೆ ಕೃಷಿ ಸಮೃದ್ಧವಾಗಿದೆ ಎಂದರೆ ಅದಕ್ಕೆ ಬಂಗಾರಪ್ಪ ಅಂದು ಪಂಪ್ ಸೆಟ್ ಗೆ ನೀಡಿದ ಉಚಿತ ವಿದ್ಯುತ್ ಕೊಡುಗೆ ದೊಡ್ಡದು ಎಂದು ಹೇಳಿದ್ದಾರೆ.

ನಾಡಿನ ಮಕ್ಕಳಿಗೆ ಶಿಕ್ಷಣ ನೀಡುವ ಖಾತೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ. ಸರ್ಕಾರಿ ಶಾಲೆಗೆ ತಮ್ಮ ಮಕ್ಕಳನ್ನು ಸೇರಿಸಬೇಕು ಎನ್ನುವಂತಹ ವಾತಾವರಣ ನಿರ್ಮಿಸುತ್ತೇವೆ ಎಂದು ತಿಳಿಸಿದ್ದಾರೆ.

Madhu Bangarappa ಶಿಕಾರಿಪುರ ತಾಲೂಕಿನಲ್ಲಿ492 ಗೃಹಲಕ್ಷ್ಮಿ ಫಲಾನುಭವಿಗಳಿಗೆ ಯೋಜನೆ ತಲುಪಿಲ್ಲ. ಹಾಗೆಯೇ ಉಳಿದ ಯೋಜನೆಗಳು ಎಲ್ಲಾ ಅರ್ಹರಿಗೆ ತಲುಪಬೇಕು. ಇದಕ್ಕಾಗಿ ಇಲ್ಲಿ ತೆರೆದಿರುವ ಕೌಂಟರ್ ನಲ್ಲಿ ತಮ್ಮ ದೂರು ನೋಂದಾಯಿಸಿ. ನಾವು ಎಲ್ಲರಿಗೂ ಯೋಜನೆ ತಲುಪಿಸುತ್ತೇವೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...