Monday, May 4, 2026
Monday, May 4, 2026

Snehal Sudhakar Lokhande ಜಂತುಹುಳುವಿನಿಂದ ಮಕ್ಕಳಲ್ಲಿ ಅಪೌಷ್ಠಿಕತೆಯಂತಹ ಆರೋಗ್ಯ ತೊಂದರೆ- ಸ್ನೇಹಿಲ್ ಸುಧಾಕರ್ ಲೋಖಂಡೆ

Date:

Snehal Sudhakar Lokhande ಫೆ.27 ರಂದು ಜಿಲ್ಲೆಯಾದ್ಯಂತ ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು 1 ರಿoದ 19 ವರ್ಷದ ಎಲ್ಲ ಮಕ್ಕಳು ಜಂತು ಹುಳು ನಿವಾರಣಾ ಮಾತ್ರೆ ಆಲ್ಬೆಂಡಜಾಲ್‍ನ್ನು ಉಚಿತವಾಗಿ ಪಡೆದುಕೊಳ್ಳಬೇಕು ಎಂದು ಜಿ.ಪಂ ಸಿಇಓ ತಿಳಿಸಿದರು.
2023-24 ನೇ ಸಾಲಿನಲ್ಲಿ ಜಿಲ್ಲೆಯ ಒಟ್ಟು 4,52, 072 ಮಕ್ಕಳಿಗೆ ಆಲ್ಬೆಂಡಜಾಲ್ ನೀಡುವ ಗುರಿ ಹೊಂದಲಾಗಿದ್ದು, ಎಲ್ಲ ಅರ್ಹ ಮಕ್ಕಳು ಇದರ ಸದುಪಯೋಗ ಪಡೆಯಬೇಕು. ಹಾಗೂ ಶಿಕ್ಷಕರು ತಮ್ಮ ಮುಂದೆಯೇ ಮಕ್ಕಳು ಮಾತ್ರೆ ತೆಗೆದುಕೊಳ್ಳುವಂತೆ ನೋಡಬೇಕು.
ಜಂತುಹುಳುವಿನಿಂದ ಅಪೌಷ್ಟಿಕತೆ ಸೇರಿಂದತೆ ಅನೇಕ ಆರೋಗ್ಯ ಸಮಸ್ಯೆಗಳು ಎದುರಾಗುವುದರಿಂದ ಮಕ್ಕಳಿಗೆ ಶುಚಿತ್ವದ ಬಗ್ಗೆ, ಕೈ ತೊಳೆಯುವ ಕ್ರಮದ ಬಗ್ಗೆ ಶಾಲೆಗಳಲ್ಲಿ ಪ್ರಾತ್ಯಕ್ಷಿಕೆ ಏರ್ಪಡಿಸಬೇಕು. ಶಿಕ್ಷಕರು ಜಂತು ಹುಳು ನಿವಾರಣಾ ಮಾತ್ರೆ ನೀಡುವ ಬಗ್ಗೆ ಮೇಲ್ವಿಚಾರಣೆ ಕೈಗೊಳ್ಳಬೇಕು ಎಂದರು.
ಆರ್‍ಸಿಹೆಚ್ ಅಧಿಕಾರಿ ಡಾ.ನಾಗರಾಜ್ ನಾಯ್ಕ್ ಮಾತನಾಡಿ, ಅಂಗನವಾಡಿ, ಶಾಲೆಗಳು, ಪದವಿಪೂರ್ವ ಕಾಲೇಜು, ಐಟಿಐ, ಟೆಕ್ನಿಕಲ್ ಕೋರ್ಸ್ ಕಾಲೇಜುಗಳು,ಪ್ರಥಮ ಬಿಎ, ಮೆಡಿಕಲ್, ಆಯುರ್ವೇದಿಕ್ ಕಾಲೇಜುಗಳಲ್ಲಿ 1 ರಿಂದ 19 ವರ್ಷದ ಮಕ್ಕಳಿಗೆ ಉಚಿತವಾಗಿ Snehal Sudhakar Lokhande ವಿತರಿಸಲಾಗುತ್ತದೆ. ಅಲ್ಲದೆ ಶಾಲೆ ಬಿಟ್ಟ ಮಕ್ಕಳಿಗೆ ಸಂಬಂಧಪಟ್ಟ ಅಂಗನವಾಡಿಗಳಲ್ಲಿ ನೀಡಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಎಲ್ಲ ಜಿಲ್ಲಾ ಕಾರ್ಯಕ್ರಮ ಅನುಷ್ಟಾನಾಧಿಕಾರಿಗಳು, ತಾಲ್ಲೂಕು ವೈದ್ಯಾಧಿಕಾರಿಗಳು, ಡಿಡಿಪಿಐ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಅಧಿಕಾರಿಗಳು, ಐಎಂಎ, ಸಂಘ ಸಂಸ್ಥೆ ಪದಾಧಿಕಾರಿಗಳು, ಇತರೆ ಅಧಿಕಾರಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...