Thursday, March 19, 2026
Thursday, March 19, 2026

ICICI Prudential Life Insurance ಸೇವಾ ನ್ಯೂನತೆ ಪರಿಹಾರ ನೀಡಲು ಖಾಸಗಿ ವಿಮಾ ಕಂಪನಿಗೆ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಸೂಚನೆ

Date:

ICICI Prudential Life Insurance ಕೆ.ಎಸ್.ಬದ್ರೀಶ್ ಎಂಬುವವರು ಎದುರುದಾರ ಐಸಿಐಸಿಐ ಪ್ರೂಡೆನ್ಶಿಯಲ್ ಲೈಫ್ ಇನ್ಶೂರೆನ್ಸ್ ಕಂ.ಲಿ ಮುಖ್ಯ ಕಚೇರಿ ಮುಂಬೈ ಹಾಗೂ ಶಾಖಾ ಕಚೇರಿ ದಾವಣಗೆರೆ ವಿರುದ್ದ ಸೇವಾ ನ್ಯೂನ್ಯತೆ ಬಗ್ಗೆ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ಪರಿಹಾರ ಕೋರಿ ದಾಖಲಿಸಿದ್ದ ಪ್ರಕರಣದಲ್ಲಿ ಆಯೋಗವು ಎದುರುದಾರ ಕಂಪನಿಯು ಅರ್ಜಿದಾರರಿಗೆ ಪರಿಹಾರ ನೀಡುವಂತೆ ಆದೇಶಿಸಿದೆ.
ಅರ್ಜಿದಾರ ಕೆ.ಎಸ್. ಬದ್ರೀಶ್‍ರವರು ಎದುರುದಾರಲ್ಲಿ ಫ್ಯೂಚರ್ ಪರ್ಫೆಕ್ಟ್ ವಿಮಾ ಪಾಲಿಸಿ ಪಡೆದಿರುತ್ತಾರೆ. ಪಾಲಿಸಿ ಕಂತು ರೂ.1,56,750 ಗಳಾಗಿದ್ದು, 2020 ರಿಂದ 22 ರವರೆಎ ಐದು ಕಂತು ಮೊತ್ತ ರೂ.7,75,400 ನ್ನು ಪಾವತಿಸಿರುತ್ತಾರೆ. ಆದರೆ ಕೋವಿಡ್ 19 ಸಂಕಷ್ಟದಿಂದ ನಂತರದ ವಿಮಾ ಕಂತುಗಳನ್ನು ಕಟ್ಟಲು ಸಾಧ್ಯವಾಗದ ಕಾರಣ ವಿಮಾ ಪಾಲಿಸಿ ರದ್ದುಗೊಳಿಸಿ ಈವರೆಗೆ ಪಾವತಿಸಿದ ಕಂತುಗಳನ್ನು ಪಾಲಿಸಿ ಪ್ರಯೋಜನದೊಂದಿಗೆ ಮರುಪಾವತಿಸುವಂತೆ ಕೋರಿರುತ್ತಾರೆ. ವಿಮಾ ಕಂಪೆನಿ ಪಾಲಿಸಿ ನಿಬಂಧನೆ ಪ್ರಕಾರ ವಿಮಾ ಕಂತು ಪಾವತಿಸಿಲ್ಲದ ಕಾರಣ ಪ್ರಯೋಜನ ಪಡೆಯಲು ಅನರ್ಹವೆಂದು ತಿಳಿಸಿರುತ್ತಾರೆ.
ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು ಈ ಪ್ರಕರಣವನ್ನು ಕೂಲುಂಕಷವಾಗಿ ಪರಿಶೀಲಿಸಿ, ವಿಮಾ ಪಾಲಿಸಿ ಷರತ್ತು ನಿಬಂಧನೆಗಳನ್ನು ಅವಲೋಕಿಸಿ ಅರ್ಜಿದಾರರು ಎರಡು ವರ್ಷಗಳ ಕಾಲ ವಿಮಾ ಕಂತನ್ನು ಪಾವತಿಸಿರುವುದರಿಂದ ಪಾಲಿಸಿಯ ಪ್ರಯೋಜನಗಳನ್ನು ಸರಂಡರ್ ಮೊತ್ತದೊಂದಿಗೆ ಪಡೆಯಲು ಅರ್ಹರಿರುತ್ತಾರೆಂದು ತೀರ್ಮಾನಿಸಿ ಪ್ರಕರಣವನ್ನು ಭಾಗಶಃ ಪುರಸ್ಕರಿಸಿರುತ್ತದೆ.
ICICI Prudential Life Insurance ಎದುರುದಾರರು ಪಾಲಿಸಿ ಸರಂಡರ್ ಮೊತ್ತವನ್ನು ಶೇ.9 ಬಡ್ಡಿ ಸಮೇತ ಹಾಗೂ ರೂ.30,000 ಗಳನ್ನು ಮಾನಸಿಕ ಹಿಂಸೆ, ಹಾನಿಗೆ ಸಂಬಂಧಿಸಿದಂತೆ ಮತ್ತು ರೂ.10,000 ಗಳನ್ನು ವ್ಯಾಜ್ಯದ ಖರ್ಚು ವೆಚ್ಚಗಳ ಮೊತ್ತವೆಂದು ಅರ್ಜಿದಾರರಿಗೆ ಪಾವತಿಸಬೇಕೆಂದು ಆಯೋಗದ ಅಧ್ಯಕ್ಷರಾದ ಟಿ.ಶಿವಣ್ಣ, ಸದಸ್ಯರಾದ ಸವಿತಾ ಬಿ ಪಟ್ಟಣಶೆಟ್ಟಿ, ಬಿ.ಡಿ.ಯೋಗಾನಂದ ಭಾಂಡ್ಯ ಇವರ ಪೀಠವು ಫೆ.09 ರಂದು ಆದೇಶಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...