Tuesday, April 21, 2026
Tuesday, April 21, 2026

Thirthahalli Maarikamba Jathre ಮಾರ್ಚ್ 12 ರಿಂದ ತೀರ್ಥಹಳ್ಳಿ ಶ್ರೀಮಾರಿಕಾಂಬ ಜಾತ್ರೆ

Date:

Thirthahalli Maarikamba Jathre ತೀರ್ಥಹಳ್ಳಿ ಪಟ್ಟಣದ ಮಾರಿಕಾಂಬಾ ಜಾತ್ರೆ ಮಾರ್ಚ್ 12 ರಿಂದ 20 ರ ವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ,ಕ್ರೀಡಾ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ನಾಗರಾಜ ಶೆಟ್ಟಿ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಈ ಸಲದ ಜಾತ್ರೆಯ ವಿಶೇಷವೆಂದರೆ ತೀರ್ಥಹಳ್ಳಿಯ ಏಕಲವ್ಯ ಸ್ಪೋರ್ಟ್ಸ್ ಕ್ಲಬ್ ಸಹಯೋಗದೊಂದಿಗೆ ಮಾರ್ಚ್ 14 ರಿಂದ 17 ರ ವರೆಗೆ ಹೊನಲು ಬೆಳಕಿನ ಪುರುಷರ ಮತ್ತು ಮಹಿಳೆಯರ ರಾಷ್ಟ್ರೀಯ ಮಟ್ಟದ ಖೋ ಖೋ ಪಂದ್ಯಾವಳಿಯು ಎ.ಪಿ.ಎಂ.ಸಿ. ಪಕ್ಕದಲ್ಲಿ ನಿರ್ಮಿಸಲಾಗಿರುವ ಕ್ರೀಡಾಂಗಣದಲ್ಲಿ ಜರುಗಲಿದೆ ಎಂದರು.

ಮಾರ್ಚ್ 12ರಂದು ಜಾತ್ರೆ ಸಾರುವುದರೊಂದಿಗೆ ಆರಂಭಗೊಳ್ಳಲಿದ್ದು,ಮಾ.13ರಂದು ವಿಶೇಷ ಧಾರ್ಮಿಕ ಕಾರ್ಯಕ್ರಮ ನಡೆಯಲಿದ್ದು ಸಂಜೆ ೬ಕ್ಕೆ ತೀರ್ಥಹಳ್ಳಿ ನೃತ್ಯ ಕಲಾವಿದರಿಂದ ನೃತ್ಯ ಸಂಭ್ರಮ ನಂತರ ಕಲ್ಲಡ್ಕ ವಿಠ್ಠಲ ನಾಯಕ್ ತಂಡದಿಂದ ಗೀತಾ ಸಾಹಿತ್ಯ ಸಂಭ್ರಮ ಆಯೋಜಿಸಲಾಗಿದೆ. ಮಾ.14ರಂದು ಸಂಜೆ 7 ಕ್ಕೆ ಪ್ರೊ.ಕೃಷ್ಣೇಗೌಡ ಮೈಸೂರು ಸಂಗಡಿಗರಿಂದ ನಗೆ ನೈವೇದ್ಯ,ಮಾ.15ರ ಸಂಜೆ 7ಕ್ಕೆ ಮಂಗಳೂರಿನ ಸುಪ್ರೀತ್ ಸಫಲಿಗ ಬಳಗದಿಂದ ಸಂಗೀತ ಸೌರಭ ಕಾರ್ಯಕ್ರಮ, ಮಾ.16ರ ಸಂಜೆ ಅಂತರರಾಷ್ಟ್ರೀಯ ಜನಪದ ಕಲಾವಿದೆ ಸವಿತಾ ಗಣೇಶ್ ಪ್ರಸಾದ್ ಅರ್ಪಿಸುವ ಸವಿತ್ತಕ್ಕನ ಅಳ್ಳಿ ಬ್ಯಾಂಡ್ ತಂಡದ ಸಂಗೀತ ರಸಸಂಜೆ ನಡೆಯಲಿದೆ ಎಂದರು.

ಮಾ.17ರಂದು ತೀರ್ಥಹಳ್ಳಿ ಮೂಲದ ಬೆಂಗಳೂರಿನಲ್ಲಿ ನೃತ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಕಲಾವಿದರ ನೃತ್ಯ ವೈಭವ ಹಾಗೂ ಮಾ.18ರಂದು ಸಂಜೆ ಯಕ್ಷ ಕಲಾವಿದ ಪಟ್ಲ ಸತೀಶ್ ಶೆಟ್ಟಿ ಸಾರಥ್ಯದ ಪಾವಂಜೆ ಯಕ್ಷಗಾನ ಮೇಳ ಪ್ರಸ್ತುತ ಪಡಿಸುವ ಪ್ರೊ.ಪವನ್ ಕಿರಣ್ಕೆರೆ ವಿರಚಿತ ಅಯೋಧ್ಯಾ ದೀಪ ಯಕ್ಷಗಾನ ನಡೆಯಲಿದೆ .

ಮಾ.18ರಂದು ರಾತ್ರಿ ಎಣ್ಣೆ ಭಂಡಾರ ಪೂಜೆ,ಮಾ.19ರ ಬೆಳಿಗ್ಗೆ 5ಕ್ಕೆ ಗೊಂಬೆ ಪೂಜೆ ,ಮಧ್ಯಾಹ್ನ 3ರಿಂದ ಅದ್ದೂರಿ ರಾಜಬೀದಿ ಉತ್ಸವದೊಂದಿಗೆ ತುಂಗಾನದಿಯಲ್ಲಿ ಗೊಂಬೆ ವಿಸರ್ಜನೆ ನಡೆಯಲಿದೆ ಎಂದರು.

Thirthahalli Maarikamba Jathre ಸಾಂಸ್ಕೃತಿಕ ಕಾರ್ಯಕ್ರಮಗಳು ದೇವಾಲಯದ ಮುಂಭಾಗದ ವೇದಿಕೆಯಲ್ಲಿ ಹಾಗೂ ಅನ್ನಸಂತರ್ಪಣೆಯು ಸುವರ್ಣ ಸಹಕಾರ ಭವನದಲ್ಲಿ ನಡೆಯಲಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Bharat Scouts and Guides ಕೃಷಿ ಕ್ಷೇತ್ರ ಮಾಹಿತಿಯಿಂದ ವಿದ್ಯಾರ್ಥಿಗಳು ಪರಿಪೂರ್ಣರಾಗಲು ಸಾಧ್ಯ- ಕೆ.ರವಿ

Bharat Scouts and Guides ಕೃಷಿ ಕ್ಷೇತ್ರದಲ್ಲಿ ಆಗುತ್ತಿರುವ ಪ್ರಗತಿಯ ಬಗ್ಗೆ...

Klive special Article “ಶಂಕರಂ ಲೋಕ ಶಂಕರಂ” ಎನ್.ಜಯಭೀಮ್ ಜೊಯ್ಸ್, ಶಿವಮೊಗ್ಗ

Klive special Article ಶ್ರೀಶಂಕರಾಚಾರ್ಯ ಗುರುಗಳು (ಶ್ರೀಶಂಕರಜಯಂತಿಯ ಸಂದರ್ಭದಲ್ಲಿ)ಪ್ರತಿವರ್ಷ ವೈಶಾಖಮಾಸದ...

RM Manjunath Gowda ಹುಲಿಕಲ್ ಘಾಟಿ ಪ್ರಕರಣ.ಇಂಜಿನಿಯರುಗಳೇ ಹೊಣೆ. ಎಫ್ ಐ ಆರ್ ದಾಖಲಿಸಲು ಎಸ್ ಪಿ.ಅವರಿಗೆ ಮನವಿ ಮಾಡುವೆ- ಆರ್.ಎಂ.ಮಂಜುನಾಥ ಗೌಡ.

RM Manjunath Gowda ಹುಲಿಕಲ್ ಘಾಟಿ ಪ್ರಕರಣದಲ್ಲಿ ಎಫ್ಐಆರ್ ದಾಖಲಾದ ಹಿನ್ನೆಲೆಯಲ್ಲಿ ಮಕೆನಾಡು...

Graduation Day ಮ್ಯಾನೇಜ್ಮೆಂಟ್ ಪದವೀಧರರು ಶೈಕ್ಷಣಿಕ ಮತ್ತು ಔದ್ಯಮಿಕ ರಂಗದ ನಡುವಿನ ಸೇತುವೆ- ವಿನಯ್ ಪಾಟೀಲ್.

Graduation Day "ಜ್ಞಾನವು ಕೌಶಲ್ಯವಾಗದಿದ್ದಲ್ಲಿ ನಿರರ್ಥಕ" -ಬಾಪೂಜಿ ಎಂಬಿಎ ಪದವಿ ಪ್ರದಾನದಲ್ಲಿ ವಿನಯ್...