Sunday, December 14, 2025
Sunday, December 14, 2025

ಮಹಾ‌ಮೇಳಾವ್ ಯತ್ನ: ಎಂಇಎಸ್ ಪೋಲಿಸ್ ಚಕಮಕಿ.

Date:

ವಿಧಾನ ಮಂಡಲ ಅಧಿವೇಶನದ ಮೊದಲ ದಿನ, ಮಹಾರಾಷ್ಟ್ರ ಏಕೀಕರಣ ಸಮಿತಿ ಪುಂಡಾಟಿಕೆ ಮೆರೆದು ನಾಡ ದ್ರೋಹದ ವರ್ತನೆ ತೋರಿಸಿದೆ. ಪರವಾನಗಿ ಇಲ್ಲದೇ ಇದ್ದರೂ ವ್ಯಾಕ್ಸಿನ್ ಡಿಪೋ ಬಳಿ ಮಹಾ ಮೇಳಾವ ನಡೆಸಲು ಯತ್ನಿಸಿದ ಎಂ ಇ ಎಸ್ ಕಾರ್ಯಕರ್ತರು ಪೊಲೀಸರೊಂದಿಗೆ ವಾದ ವಿವಾದ ನಡೆಸಿದರು.

ಮಹಾ ಮೇಳಾವದ ವೇದಿಕೆಯನ್ನು ರಸ್ತೆ ಮೇಲೆ ನಿರ್ಮಿಸಿದ್ದರು. ಈ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ಅಧಿಕಾರಿಗಳು ವೇದಿಕೆ ತೆರವುಗೊಳಿಸುವಂತೆ ಸೂಚಿಸಿದ್ದಾರೆ. ಆದರೆ, ಎಂಇಎಸ್ ಕಾರ್ಯಕರ್ತರು, ಬಲವಂತವಾಗಿ ವೇದಿಕೆಯಿಂದ ಕೆಳಗಿಳಿಸುವ ಪ್ರಯತ್ನ ನಡೆಯಿತು. ಈ ಸಂದರ್ಭದಲ್ಲಿ ಎಂಇಎಸ್ ಕಾರ್ಯಕರ್ತರು ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದಾರೆ. ಹಠ ಹಿಡಿದು ಕುರ್ಚಿ ಗಳಿಲ್ಲದೇ ವೇದಿಕೆಯ ಮೇಲೆ ಕುಳಿತ ಘೋಷಣೆಯನ್ನು ಕೂಗಿದರು. ಮಹಾನಗರ ಪಾಲಿಕೆ ಸಿಬ್ಬಂದಿಗಳು, ವೇದಿಕೆಯನ್ನು ತೆರವುಗೊಳಿಸಲಾಗಿದೆ ಅಸಹಾಯಕರಾಗಿ ನಿಂತಿದ್ದರು. ಈ ಸಂದರ್ಭದಲ್ಲಿ ಕನ್ನಡಪರ ಸಂಘಟನೆಯ ಕಾರ್ಯಕರ್ತರು, ಎಂಇಎಸ್ ಮುಖಂಡ ದೀಪಕ್ ದಳವಿ ಅವರ ಮುಖಕ್ಕೆ ಕಪ್ಪು ಮಸಿ ಬಳಿದಿದ್ದಾರೆ. ನಂತರ ಮಸಿ ಬಳೆದ ಕನ್ನಡಪರ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...