Monday, February 2, 2026
Monday, February 2, 2026

Nitin Gadkari ರಸ್ತೆ ಅಗಲೀಕರಣ ಕಡಿತಲೆ ಮರಗಳ ಬದಲಿಗೆ ಸಸಿ ಬೆಳೆಸುವ ವೆಚ್ಚವನ್ನೂ ರಸ್ತೆ ನಿರ್ಮಾಣ ಬಜೆಟ್ ಗೆ ಸೇರಿಸಲು ಮನವಿ

Date:

Nitin Gadkari ಶಿವಮೊಗ್ಗ ಜಿಲ್ಲೆ ಸೇರಿದಂತೆ ವಿವಿಧೆಡೆ ಹೆದ್ದಾರಿ ಅಗಲೀಕರಣ ವೇಳೆಯಲ್ಲಿ ಅನಿವಾರ್ಯವಾಗಿ ತೆರವುಗೊಳಿಸುವ ಮರಗಳಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸೂಚಿಸಿರುವ ಪರ್ಯಾಯ ಯೋಜನೆಗಳು ಪರಿಣಾಮಕಾರಿಯಾಗಿ ಜಾರಿಯಾಗುತ್ತಿಲ್ಲ ಎಂಬುದು ನಮ್ಮ ಗಮನಕ್ಕೆ ಬಂದಿದೆ. ತೆರವುಗೊಳಿಸುವ ಮರಗಳ ಬದಲಿಗೆ ನಿಗದಿತ ಸಂಖ್ಯೆಗಳ ಗಿಡಗಳನ್ನು ನೆಟ್ಟು ಅವುಗಳನ್ನು ಐದು ವರ್ಷಗಳ ಕಾಲ ಆರೈಕೆ ನಿರ್ವಹಣೆ ಜವಾಬ್ದಾರಿ ಕಾರ್ಯವನ್ನು ರಸ್ತೆ ಅಗಲೀಕರಣ ಮೂಲ ಯೋಜನೆ ವೆಚ್ಚದಲ್ಲಿ ಸೇರಿಸಿ ಕಾರ್ಯಗತ ಮಾಡಬೇಕು.
ಈ ವಿಚಾರದಲ್ಲಿ ಸಂಬಂಧ ಪಟ್ಟ ಇಲಾಖೆಗಳ ನಡುವೆ ಸಮನ್ವಯ ಕೊರತೆ ಇರದಂತೆ ನೋಡಿಕೊಳ್ಳಬೇಕು ಎಂದು ಪರಿಸರ ಪ್ರೇಮಿಗಳು ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಕೇಂದ್ರ ಸಚಿವ ಶ್ರೀ ನಿತಿನ್ ಗಡ್ಕರಿಯವರಿಗೆ ಮನವಿ ಸಲ್ಲಿಸಿದರು.

ಶಿವಮೊಗ್ಗ ಜಿಲ್ಲೆ ಸೇರಿದಂತೆ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಅನೇಕ ರಸ್ತೆಗಳ ಅಗಲೀಕರಣ ಕಾರ್ಯ ಯೋಜನೆ ಇರುವ ಬಗ್ಗೆ ತಿಳಿದುಬಂದಿದ್ದು, ಪಶ್ಚಿಮ ಘಟ್ಟದ ಅಪರೂಪದ ಸಸ್ಯ ಸಂಕುಲಗಳ ಸಂರಕ್ಷಣೆ ಅತ್ಯಗತ್ಯವಾಗಿದೆ. ಬದಲಿ ಗಿಡಗಳ ನೆಡುವಿಕೆಯಲ್ಲಿ ಇಂತಹ ಸ್ಥಳೀಯ ಜಾತಿಯ ಗಿಡಗಳನ್ನೇ ಬೆಳೆಸಬೇಕು. ಮಲೆನಾಡಿನ ಎಲ್ಲಾ ಹೆದ್ದಾರಿಗಳನ್ನು ಹಸಿರು ರಾಜಮಾರ್ಗವಾಗಿ ಪರಿಗಣಿಸಲು ಮತ್ತು ರಸ್ತೆ ನಿರ್ಮಿಸುವಾಗ ನದಿ ದಡ, ಕೆರೆ, ದಟ್ಟ ಅರಣ್ಯ, ನೀರಿನ ಮೂಲಗಳನ್ನು ಸಂರಕ್ಷಿಸುವಂತೆ ವಿನಂತಿಸಲಾಯಿತು.

Nitin Gadkari ಸಚಿವರ ಇಂದಿನ ಭೇಟಿ ವೇಳೆ ಪರಿಸರ ಕಾರ್ಯಕರ್ತರಾದ ಎಂ. ಶಂಕರ್, ಡಾ. ಶ್ರೀಪತಿ ಎಲ್.ಕೆ., ಬಾಲಕೃಷ್ಣ ನಾಯ್ಡು, ದಿನೇಶ್ ಶೇಟ್, ಅಜೇಯ್ ಕುಮಾರ ಶರ್ಮ, ಶ್ರವಣ್, ನವ್ಯಶ್ರೀ ನಾಗೇಶ್, ತ್ಯಾಗರಾಜ ಮಿತ್ಯಾಂತ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...