Monday, May 4, 2026
Monday, May 4, 2026

DC Shivamogga ಸಿನಿಮಾ/ಟೀವಿ ಧಾರಾವಾಹಿಗಳ ಪಾತ್ರಗಳಿಗೆ ಮಕ್ಕಳನ್ನ ಬಳಸಿಕೊಳ್ಳುವ ನಿರ್ಮಾಪಕರಿಗೆ ಜಿಲ್ಲಾಧಿಕಾರಿಗಳ ಅನುಮತಿ ಕಡ್ಡಾಯ

Date:

DC Shivamogga ಸಿನಿಮಾ ಇಲ್ಲವೇ ಧಾರವಾಹಿಗಳಲ್ಲಿ ಬಾಲ ನಟರು / ನಟಿಯರ ಪಾತ್ರಕ್ಕಾಗಿ ಮಕ್ಕಳನ್ನು ಬಳಸಿಕೊಳ್ಳಲು ಇಚ್ಛಿಸುವ ಸಿನಿಮಾ ನಿರ್ದೇಶಕರು, ನಿರ್ಮಾಪಕರು, ಆಯೋಜಕರು ಜಿಲ್ಲಾಧಿಕಾರಿಗಳಿಂದ ಅನುಮತಿ ಪತ್ರ ಪಡೆಯುವುದು ಕಡ್ಡಾಯವಾಗಿದೆ.

ಈ ಕುರಿತಂತೆ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಪ್ರಕಟಣೆ ಬಿಡುಗಡೆ ಮಾಡಿದೆ. ಬಾಲ ಹಾಗೂ ಕಿಶೋರಾ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ರ ಕರ್ನಾಟಕ ನಿಯಮಗಳ 2 ಸಿ ರಲ್ಲಿ ಮಗು (1) ಕಲಂ 3 ರ ನಿಬಂಧನೆಗಳ ನಿಯಮಾನುಸಾರ, ಸಿನಿಮಾ ಇಲ್ಲವೇ ಧಾರವಾಹಿಗಳಲ್ಲಿ ಬಾಲ ನಟ – ನಟಿಯರ ಪಾತ್ರಕ್ಕೆ ಮಕ್ಕಳನ್ನು ಬಳಸಿಕೊಳ್ಳಲು ಅನುಮತಿ ಕಡ್ಡಾಯವಾಗಿದೆ ಎಂದು ತಿಳಿಸಿದೆ.

ನಿಯಮ ಪಾಲನೆ ಕಡ್ಡಾಯ :
ಯಾವುದೇ ಮಗುವನ್ನು ಒಂದು ದಿನದಲ್ಲಿ 5 ಗಂಟೆಗಳಿಗಿಂತ ಹೆಚ್ಚಿನ ಅವಧಿಗೆ ನಟನಾ ಕೆಲಸಕ್ಕೆ ನಿಯೋಜಿಸುವಂತಿಲ್ಲ ಮತ್ತು ವಿಶ್ರಾಂತಿ ಇಲ್ಲದೆ 3 ಗಂಟೆಗಳಿಗಿಂತ ಹೆಚ್ಚು ಕೆಲಸ ಮಾಡಿಸುವಂತಿಲ್ಲ. ಶಿಕ್ಷಣಕ್ಕೆ ಸಂಬಂಧಿಸಿದ ನಿಬಂಧನೆಗಳನ್ನು ಸುರಕ್ಷತೆ ಮತ್ತು ಮಕ್ಕಳ ದುರುಪಯೋಗ ತಡೆ ಕುರಿತಾದ ಮಾನ್ಯತೆ ಪಡೆದ ಮಾರ್ಗಸೂಚಿಯನ್ವಯ ಮುಚ್ಚಳಿಕೆಯನ್ನು ಯೋಜಕರು ನೀಡಬೇಕು.

DC Shivamogga ಈ ರೀತಿಯ ಮಕ್ಕಳನ್ನು 27 ದಿನಗಳಿಗಿಂತ ಹೆಚ್ಚಿನ ದಿನಗಳು ನಟನಾ ಕೆಲಸದಲ್ಲಿ ತೊಡಗಲು ಅವಕಾಶ ಇರುವುದಿಲ್ಲ. ಮಗುವಿನ ರಕ್ಷಣೆಗೆ ಪ್ರತಿ 5 ಮಕ್ಕಳಿಗೆ ಓರ್ವರಂತೆ ಜವಾಬ್ದಾರಿ ವ್ಯಕ್ತಿಯನ್ನು ನೇಮಿಸುವುದು ಹಾಗೂ ಕಾರ್ಯಕ್ರಮದಿಂದ ಬರುವ ಆದಾಯದಲ್ಲಿ ಕನಿಷ್ಠ ಶೇ.20% ರಷ್ಟು ಮಗುವಿನ ಹೆಸರಿಗೆ ನಿಶ್ಚಿತ ಠೇವಣಿ ಇಡಬೇಕು.
ಜಿಲ್ಲಾಧಿಕಾರಿಗಳ ಅನುಮತಿ ಇಲ್ಲದೇ ಮಕ್ಕಳನ್ನು ಬಳಸಿಕೊಂಡಲ್ಲಿ ಕಾನೂನು ಉಲ್ಲಂಘಿಸುವ ಸಿನಿಮಾ ಹಾಗೂ ಧಾರವಾಹಿ ಆಯೋಜಕರು / ನಿರ್ಮಾಪಕರು ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಶಿವಮೊಗ್ಗ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಕಾರ್ಮಿಕ ಅಧಿಕಾರಿಗಳು ಹಾಗೂ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...