Friday, March 20, 2026
Friday, March 20, 2026

Kuvempu University ಸಂವಿಧಾನದ ಆಶಯ ತಲುಪಿಸಲು ಜನ ಜಾಗೃತಿ ಚಾರಣ-ಡಾ.ಶುಭಾ ಮರವಂತೆ

Date:

Kuvempu University ಸಂವಿಧಾನದ ರಕ್ಷಣೆ ನಮ್ಮೆಲ್ಲರ ಹೊಣೆ’ ಈ ಅರಿವು ನಮಗೆಲ್ಲರಿಗೂ ಇರಬೇಕಾದ್ದು ಅತ್ಯಂತ ಅವಶ್ಯ, ಪ್ರತಿಯೊಬ್ಬ ವ್ಯಕ್ತಿಯೂ ಸಂವಿಧಾನದ ಅಡಿಯಲ್ಲಿ ನೆಮ್ಮದಿಯ ಜೀವನವನ್ನು ನಡೆಸುವ ಹಕ್ಕನ್ನು ಪಡೆದಿದ್ದಾನೆ. ಸಂವಿಧಾನದ ಆಶಯಗಳು ಜನಸಾಮಾನ್ಯರಿಗೆ ತಲುಪುವ ಉದ್ದೇಶಕ್ಕಾಗಿ ಈ ಜಾಗೃತಿ ಚಾರಣವನ್ನು ಹಮ್ಮಿಕೊಳ್ಳಲಾಗಿದೆ. ಅಂತಯೇ ಜಾಗೃತ ಮತದಾರರಿಂದ ಮಾತ್ರ ದೇಶದ ಬದಲಾವಣೆ ಸಾಧ್ಯ ಎಂದು ಕುವೆಂಪು ವಿವಿ ಎನ್ನೆಸ್ಸೆಸ್ ಸಂಯೋಜನಾಧಿಕಾರಿ ಡಾ ಶುಭಾ ಮರವಂತೆ ಹೇಳಿದರು.

ಸಂವಿಧಾನ ಮತ್ತು ಮತದಾನ ಜಾಗೃತಿ ಅಂಗವಾಗಿ ಕೊಡಚಾದ್ರಿ ಬೆಟ್ಟದಲ್ಲಿ ಹಮ್ಮಿಕೊಳ್ಳಲಾಗಿದ್ದ ಒಂದು ದಿನದ ಚಾರಣ ತರಬೇತಿ ಮತ್ತು ಸಾಹಸ ಕ್ರೀಡೆ ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯ ಮಟ್ಟದ ಮತದಾನದ ತರಬೇತುದಾರರಾದ ನವೀದ್ ಅಹಮದ್ ಮಾತನಾಡಿ, ಪ್ರತಿಯೊಬ್ಬ ಸಾಮಾನ್ಯ ವ್ಯಕ್ತಿಯೂ ಮತದಾನದ ಮಹತ್ವವನ್ನು ಅರ್ಥಮಾಡಿಕೊಳ್ಳಬೇಕಾಗಿದೆ. ಒಬ್ಬ ಪ್ರಜ್ಞಾವಂತ ಮತದಾರರಿಂದ ದೇಶದ ಭವಿಷ್ಯವನ್ನು ನಿರ್ಧರಿಸಬಹುದು. ಯುವಕರಲ್ಲಿ ಮತದಾನಕ್ಕೆ ಸಂಬಂಧಿಸಿದ ತಿಳುವಳಿಕೆ ಮೂಡಿಸಿದರೆ ಸಮಾಜವು ಹೆಚ್ಚು ಸುಸ್ಥಿರವಾಗುವುದು” ಎಂದು ನುಡಿದರು.

Kuvempu University ವಿಶ್ವವಿದ್ಯಾಲಯದ ವಿವಿಧ ಕಾಲೇಜುಗಳಿಂದ ಆಗಮಿಸಿದ್ದ ಎನ್.ಎಸ್.ಎಸ್. ಸ್ವಯಂ ಸೇವಕ, ಸೇವಕಿಯರು, ವಿದ್ಯಾರ್ಥಿಗಳು ಮತ್ತು ಡಾ ರಾಜು ನಾಯ್ಕ್ ಎಸ್, ಕಾರ್ಯಕ್ರಮಮಾಧಿಕಾರಿಗಳು, ಸರ್ಕಾರಿ ಪ್ರ ದ ಕಾಲೇಜು, ಹೊಳೆಹನ್ನೂರು ಹಾಗೂ ಅರಸಯ್ಯ, ಕಾರ್ಯಕ್ರಮಮಾಧಿಕಾರಿಗಳು, ಸರ್ ಎಂ ವಿ ವಿಜ್ಞಾನ ಕಾಲೇಜು, ಭದ್ರಾವತಿ ಇವರು ತಂಡದ ಜೊತೆಗಿದ್ದರು. ಯುವ ಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ ಸ್ವಾಮಿ ಇವರು ತಮ್ಮ ವಿಧ್ಯಾರ್ಥಿಗಳೊಂದಿಗೆ ಸಾಹಸ ಕ್ರೀಡೆ ಮತ್ತು ಚಾರಣ ತರಬೇತಿಯ ಮುಂದಾಳತ್ವ ವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...