Thursday, March 19, 2026
Thursday, March 19, 2026

Mullayanagiri Peak ಕಾಡ್ಗಿಚ್ಚಿಗೆ ಆಹುತಿಯಾದ ಮುಳ್ಳಯ್ಯನಗಿರಿಯ ನೂರಾರು ಎಕರೆ ಅರಣ್ಯ

Date:

Mullayanagiri Peak ಚಿಕ್ಕಮಗಳೂರು ತಾಲೂಕಿನ ವಿಶ್ವ ಪ್ರಸಿದ್ಧ ಮುಳ್ಳಯ್ಯನಗಿರಿ ಗುಡ್ಡದಲ್ಲಿ ಕಾಡ್ಗಿಚ್ಚುಹೊತ್ತಿಕೊಂಡ ಪರಿಣಾಮ ನೂರಾರು ಎಕರೆ ಪ್ರದೇಶದಲ್ಲಿದ್ದ ಅಪರೂಪದ ಸಸ್ಯ ಸಂಪತ್ತು ಸುಟ್ಟು ಭಸ್ಮವಾಗಿರುವಂತಹ ಘಟನೆ ನಡೆದಿದೆ.
ಮುಳ್ಳಯ್ಯನಗಿರಿ ಸಮೀಪದ ಬೈರೇಗುಡ್ಡ ಎಂಬಲ್ಲಿ ಕಾಡಿಗೆ ಬೆಂಕಿ ಬಿದ್ದಿದ್ದು, ನೂರಾರು ಎಕರೆ ಅರಣ್ಯ ಸುಟ್ಟು ಬೂದಿಯಾಗಿದೆ. ಬೈರೇಗುಡ್ಡ ಸಮೀಪ ಹೊತ್ತಿದ ಕಾಡ್ಗಿಚ್ಚು ಕವಿಕಲ್ ಗಂಡಿ ಅರಣ್ಯದವರೆಗೂ ಗುಡ್ಡದಿಂದ ಗುಡ್ಡಕ್ಕೆ ವ್ಯಾಪಿಸಿದೆ. ಕಾಡ್ಗಿಚ್ಚಿನ ಸ್ಥಳಕ್ಕೆ ಹೋಗಲಾರದೇ ಅರಣ್ಯಾಧಿಕಾರಿಗಳು ಪರದಾಡುವಂತಾಗಿದೆ.

ಬೈರೇಗುಡ್ಡ ಅತ್ಯಂತ ಎತ್ತರ, ಅರಣ್ಯ ಹಾಗೂ ಇಳಿಜಾರಿನ ಪ್ರದೇಶವಾಗಿದೆ. ಮುಳ್ಳಯ್ಯನಗಿರಿಯಲ್ಲಿ ಬೀಸುವ ಭಾರೀ ಗಾಳಿಗೆ ಬೆಂಕಿಯ ಕೆನ್ನಾಲಿಗೆ ಹೆಚ್ಚಿದ್ದರಿಂದ ಅರಣ್ಯ ಪ್ರದೇಶ ಸುಟ್ಟು ಕರಕಲಾಗಿದೆ.

Mullayanagiri Peak ಅರಣ್ಯಾಧಿಕಾರಿಗಳು ಸ್ಥಳದಲ್ಲೇ ಇದ್ದರೂ ಕೂಡ ಬೆಂಕಿಯನ್ನ ನಂದಿಸಲು ಸಾಧ್ಯವಾಗಿಲ್ಲ. ಅತ್ಯಂತ ಎತ್ತರ ಹಾಗೂ ಇಳಿಜಾರಿನ ಪ್ರದೇಶದ ಬೈರೇಗುಡ್ಡದ ಬಳಿ ಹೋಗಲು ಕಷ್ಟಸಾಧ್ಯ. ಬಿಸಿಲ ಝಳಕ್ಕೆ ಸಂಪೂರ್ಣ ಒಣಗಿ ನಿಂತಿರುವ ಅರಣ್ಯ ಯಾವ ಪ್ರಮಾಣದಲ್ಲಿ ಹೊತ್ತಿ ಉರಿಯುತ್ತದೆ ಎಂದು ಊಹಿಸುವುದು ಕಷ್ಟವಾಗಿದೆ. ಹಾಗಾಗಿ, ಅರಣ್ಯಾಧಿಕಾರಿಗಳು ಕೂಡ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಅರಣ್ಯಕ್ಕೆ ಸ್ಥಳೀಯರೇ ಬೆಂಕಿ ಕೊಟ್ಟಿರಬಹುದು ಎಂದೂ ಶಂಕಿಸಲಾಗಿದೆ.
ಬೇಸಿಗೆಯ ವೇಳೆ ಬಂಡೀಪುರ ಅರಣ್ಯ ಪ್ರದೇಶ, ಮುಳ್ಳಯ್ಯನಗಿರಿ ಗುಡ್ಡಗಾಡು ಪ್ರದೇಶ ಸೇರಿ ರಾಜ್ಯದ ಹಲವೆಡೆ ಕಾಡ್ಗಿಚ್ಚು, ಅಗ್ನಿ ದುರಂತಗಳು ಸಂಭವಿಸುತ್ತವೆ. ಆದರೆ, ಬೇಸಿಗೆ ಆರಂಭಕ್ಕೂ ಮೊದಲೇ ಕಾಡ್ಗಿಚ್ಚು ಆವರಿಸಿರುವುದು ಆತಂಕ ಹೆಚ್ಚಾಗುವಂತೆ ಮಾಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...