Friday, September 27, 2024
Friday, September 27, 2024

Death News ತೀರ್ಥಹಳ್ಳಿ ಮೂಲದ ಯುವ ಕ್ರಿಕೆಟ್ ಸ್ಟಾರ್ ಹೊಯ್ಸಳ ಹಠಾತ್ ಸಾವು

Date:

Death News ಕರ್ನಾಟಕದ ವೇಗದ ಬೌಲರ್ ಕೆ.ಹೊಯ್ಸಳ (35) ಕ್ರಿಕೆಟ್ ಪಂದ್ಯಾವಳಿ ವೇಳೆ ಬೆಂಗಳೂರಿನಲ್ಲಿ ಹೃದಯಾಘಾತದಿಂದ ಈ ಗುರುವಾರ ನಿಧನರಾಗಿದ್ದಾರೆ. ಅವರು ವಿಐಎಸ್​ಎಲ್​ ನಿವೃತ್ತ ಉದ್ಯೋಗಿಯಾಗಿರುವ ಡಾಕಪ್ಪರವರ ಅವರ ಪುತ್ರ. ಕೆ.ಹೊಯ್ಸಳ ಬೆಂಗಳೂರಿನ ಅಕೌಂಟ್​ ಜನರಲ್ ಆಫೀಸ್‌ನಲ್ಲಿ ಆಡಿಟರ್​ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಬೆಂಗಳೂರಿನ .ಎಂ.ಜಿ.ರಸ್ತೆಯ ಆರ್​ಎಸ್​ಐ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ದಕ್ಷಿಣ ವಲಯದ ಪಂದ್ಯಾವಳಿಯಲ್ಲಿ ಕರ್ನಾಟಕ ತಂಡದ ಪರವಾಗಿ ಆಟವಾಡಿ ಗೆದ್ದ ಬಳಿಕ ಹಯ್ಸಳ ಡ್ರೆಸ್ಸಿಂಗ್ ರೂಂನಲ್ಲಿ ಕುಸಿದು ಬಿದ್ದಿದ್ದಾರೆ ಕೂಡಲೇ ಅವರನ್ನು ಬೌರಿಂಗ್ ಆಸ್ಪತ್ರೆಗೆ ಕೊಂಡೊಯ್ದಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಿದೆ ಸಾವನ್ನಪ್ಪಿದ್ದಾರೆ.
ಭದ್ರಾವತಿಯಲ್ಲಿ ಕ್ರಿಕೆಟ್​ ಆಟ ಆರಂಭಿಸಿದ್ದ ಹಯ್ಸಳ ಅಲ್ಲಿಂದ ಚಿಕ್ಕಮಗಳೂರಿಗೆ ಹೈ ಎಜುಕೇಷನ್​ ಓದಲು ತೆರಳುತ್ತಾರೆ. ರಾಣಾಸ್ ಸ್ಫೋಟ್ಸ್​ ಕ್ಲಬ್​ನಲ್ಲಿ ಕ್ರಿಕೆಟ್ ಮುಂದುವರಿಸಿದ ಅವರು, ಶಿವಮೊಗ್ಗ ಜೋನ್​ನಲ್ಲಿ ಕ್ರಿಕೆಟ್ ಆಡಿದ್ದರು. ಅಲ್ಲಿಂದ ಬೆಂಗಳೂರು ತೆರಳಿ ಅಂಡರ್​ 23 ಸ್ಟೇಟಸ್​ನಲ್ಲಿ ಆಟವಾಡಿದ್ದರು. ಕರ್ನಾಟಕದ ಜೂನಿಯರ್ ತಂಡದ ಪರ ಆಡಿದ ಹೊಯ್ಸಳ ಕೆಪಿಎಲ್‌ನಲ್ಲಿ ಶಿವಮೊಗ್ಗ ಬಳ್ಳಾರಿ ತಂಡಗಳನ್ನು ಸಹ ಪ್ರತಿನಿಧಿಸಿದ್ದರು. ಆನಂತರ ಎಜಿಎಸ್​ ಗ್ರೂಪ್ ಸೇರಿಕೊಂಡಿದ್ದರು.
ಕ್ರಿಕೆಟ್​ನಲ್ಲಿ ಉತ್ತಮ ಹೆಸರು ಮಾಡಿದ್ದ ಎಲ್ಲರೊಂದಿಗೂ ಸ್ನೇಹದಿಂದ ಇದ್ದರು, ಅಲ್ಲದೆ ಅವರು ಟೀಂನಲ್ಲಿದ್ದರೇ ಮ್ಯಾಚ್​ ಗೆಲುವು Death News ಪಕ್ಕಾ ಎಂಬಂತ ಮಾತು ಕ್ರಿಕೆಟ್ ಟೀಂವಲಯದಲ್ಲಿತ್ತು. ಮೂಲತಃ ತೀರ್ಥಹಳ್ಳಿ ಆರಗದ ಕಡಗದ್ದೆಯವರಾದ ಹಯ್ಸಳರವರ ಅಂತ್ಯಕ್ರಿಯೆ ಸ್ವಗ್ರಾಮದಲ್ಲಿ ನಡೆದಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Fisheries ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಅರ್ಜಿ ಆಹ್ವಾನ

Department of Fisheries ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ನೇ...

National Open Athletic Championship ಬಿಹಾರದ ಓಪನ್ ಅಥ್ಲೇಟಿಕ್‌ನಲ್ಲಿ ಶಿವಮೊಗ್ಗ ಜಿಲ್ಲೆಯ ಕ್ರೀಡಾಪಟು

National Open Athletic Championship ಬಿಹಾರದ ಪಾಟ್ನದಲ್ಲಿ ಸೆ. 28 ರಿಂದ...

Bhadravati Police ಅನಾಮಧೇಯ ಗಂಡಸ್ಸಿನ ಶವ ಪತ್ತೆ

Bhadravati Police ಭದ್ರಾವತಿ ಶಿವಪುರ ಗ್ರಾಮದಲ್ಲಿ ಭದ್ರಾ ಬಲದಂಡೆ ನಾಲೆಯಲ್ಲಿ ಸುಮಾರು...

Chamber Of Commerce Shivamogga ರೈಲ್ವೆ ಸೌಕರ್ಯಗಳನ್ನು ಒದಗಿಸುವಂತೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮನವಿ

Chamber Of Commerce Shivamogga ಶಿವಮೊಗ್ಗ ಜಿಲ್ಲೆಯ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ...