Friday, March 20, 2026
Friday, March 20, 2026

Amrit Bharat Station scheme ಅಮೃತ ಭಾರತ್ ರೈಲ್ವೆ ಸ್ಟೇಷನ್ ಯೋಜನೆಯಡಿ ಶಿವಮೊಗ್ಗ,ಸಾಗರ,ತಾಳಗುಪ್ಪ & ಅರಸಾಳು ರಸ್ತೆ ಮೇಲ್ಸೇತುವೆ ಕಾಮಗಾರಿಗಳಿಗೆ ಪ್ರಧಾನಿ ಮೋದಿ ಅವರಿಂದ ವರ್ಚುವಲ್ ಮೂಲಕ ಚಾಲನೆ

Date:

Amrit Bharat Station scheme ಆಧುನೀಕರಿಸಿದ ಮತ್ತು ವೇಗವಾದ ರೈಲ್ವೆ ಮೋದಿ ಸರ್ಕಾರದ ಗ್ಯಾರಂಟಿ ಅಮೃತ ಭಾರತ ಸ್ಟೇಷನ್ ಯೋಜನೆಯಡಿಯಲ್ಲಿ ರೂ. 41,000 ಕೋಟಿ ವೆಚ್ಚದಲ್ಲಿ 554 ರೈಲ್ವೆ ನಿಲ್ದಾಣಗಳ ಪುನರಾಭಿವೃದ್ಧಿ ಮತ್ತು 1500 ರಸ್ತೆಯ ಮೇಲ್ ಸೇತುವೆ / ಕೆಳಸೇತುವೆಗಳ ಶಿಲಾನ್ಯಾಸ / ಉದ್ಘಾಟನೆ / ರಾಷ್ಟ್ರಕ್ಕೆ ಸಮರ್ಪಣೆ,31 ರೈಲ್ವೆ ನಿಲ್ದಾಣಗಳ ಪುನರಾಭಿವೃದ್ಧಿ,
ಕರ್ನಾಟಕದಾದ್ಯಂತ 24 ರಸ್ತೆ ಮೇಲ್ಸೇತುವೆ / ಕೆಳ ಸೇತುವೆಗಳ ನಿರ್ಮಾಣ ಕಾಮಗಾರಿಗೆ, ರೈಲ್ವೆ ನಿಲ್ದಾಣ ಅಭಿವೃದ್ಧಿ ಕಾಮಗಾರಿಗೆ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು ವರ್ಚುಯಲ್ ಮೂಲಕ ನೇರವೇರಿಸಿದರು.

ಶಿವಮೊಗ್ಗ ರೈಲ್ವೇ ನಿಲ್ದಾಣ ಅಭಿವೃದ್ಧಿಗೆ 24.37ಕೋಟಿ, ಸಾಗರ ರೈಲ್ವೆ ನಿಲ್ದಾಣ ಅಭಿವೃದ್ಧಿಗೆ 26.44 ಕೋಟಿ, ತಾಳಗುಪ್ಪ ರೈಲ್ವೆ ನಿಲ್ದಾಣ ಅಭಿವೃದ್ಧಿಗೆ 27.86 ಕೋಟಿ, ಅರಸಾಳು ರಸ್ತೆ ಮೇಲ್ ಸೇತುವೆ ಅಭಿವೃದ್ಧಿಗೆ 2.17 ಕೋಟಿ ಅನುದಾನ ನೀಡಿದೆ. ವಿಧಾನ ಪರಿಷತ್ ಶಾಸಕರು ಮತ್ತು ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ ಶ್ರೀ ಡಿ ಎಸ್ ಅರುಣ್ ಅವರು ಅರಸಾಳು ರೈಲ್ವೇ ನಿಲ್ದಾಣದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದರು.

Amrit Bharat Station scheme ಮುಖಂಡರಾದ ಅರ್ ಟಿ ಗೋಪಾಲ್, ನಾಗಾರ್ಜುನ ಸ್ವಾಮಿ, ರಾಜು, ದೇವರಾಜ್, ರಿಪ್ಪನಪೇಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಅರಸಾಳು ಗ್ರಾಮ ಪಂಚಾಯಿತಿ ಅಧ್ಯಕ್ಷರು ,ಸದಸ್ಯರು ಕೆಂಚನಾಲ ಗ್ರಾಮ ಪಂಚಾಯಿತಿ ಅಧ್ಯಕ್ಷರು ಸದಸ್ಯರು, ಸ್ಥಳಿಯರು ಗ್ರಾಮಸ್ಥರು, ರೈಲ್ವೆ ಅಧಿಕಾರಿಗಳು, ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...