Friday, March 20, 2026
Friday, March 20, 2026

Anant Ambani-Radhika Merchant ಪ್ರಾಣಿಪ್ರಿಯ ಅನಂತ್ ಅಂಬಾನಿ ಮದುವೆ ಪೂರ್ವ ಅದ್ಧೂರಿ ಸಮಾರಂಭ

Date:

Anant Ambani-Radhika Merchant: ವಿಶ್ವದ ಟಾಪ್ ಟೆನ್ ಶ್ರೀಮಂತರ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಹಾಗೂ ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಮತ್ತು ನೀತಾ ಅಂಬಾನಿ ದಂಪತಿ ಮಗ ಅನಂತ್ ಅಂಬಾನಿ-ರಾಧಿಕಾ ಮರ್ಚೆಂಟ್ ವಿವಾಹ ಪೂರ್ವ ಕಾರ್ಯಕ್ರಮಕ್ಕೆ ಅದ್ಧೂರಿ ತಯಾರಿ ನಡೆಯುತ್ತಿದೆ.
ಸ್ವತಃ ನೀತಾ ಅಂಬಾನಿ ಅವರು ಈ ಸಿದ್ಧತೆಯ ಉಸ್ತುವಾರಿಗಳನ್ನು ನೋಡಿಕೊಳ್ಳುತ್ತಿದ್ದಾರೆ. ಅಂಬಾನಿ ಕುಟುಂಬದಿಂದ ಗುಜರಾತ್‌ನ ಜಾಮ್ ನಗರದಲ್ಲಿ ಹದಿನಾಲ್ಕು ಹೊಸ ದೇಗುಲಗಳ ಸಮುಚ್ಚಯದ ನಿರ್ಮಾಣವನ್ನೇ ಮಾಡಲಾಗಿದೆ. ಸೊಗಸಾಗಿ ಕೆತ್ತನೆ ಮಾಡಿದ ಸ್ಥಂಭಗಳು, ಕಲಾಕೃತಿಗಳು, ದೇವ- ದೇವತೆಗಳ ಚಿತ್ರಗಳು, ಮನಮೋಹಕವಾದ ಶಿಲ್ಪಗಳು, ವಾಸ್ತುಶಿಲ್ಪದಿಂದ ಪ್ರೇರಿತವಾದ ಪಾರಂಪರಿಕ ಚಿತ್ರಗಳನ್ನು ಇಲ್ಲಿ ಕಾಣಬಹುದಾಗಿದೆ.
ಭಾರತದ ಶ್ರೀಮಂತ ಸಾಂಸ್ಕೃತಿಕ ಹಾಗೂ ಆಧ್ಯಾತ್ಮಿಕ ಅಸ್ಮಿತೆಯನ್ನು ಈ ದೇವಾಲಯ ಸಮುಚ್ಚಯದ ಎಲ್ಲ ಕಡೆಗಳಲ್ಲಿ ಕಾಣಬಹುದಾಗಿದೆ. ಪರಿಣತರಾದ

Anant Ambani-Radhika Merchant: ಕುಶಲಕರ್ಮಿಗಳು, ಕಲಾವಿದರು ಇದಕ್ಕಾಗಿ ಶ್ರಮಿಸಿದ್ದಾರೆ, ಶ್ರಮಿಸುತ್ತಿದ್ದಾರೆ. ದೇವಾಲಯದ ಕಲಾತ್ಮಕತೆಯನ್ನು ಇನ್ನಷ್ಟು ಸೊಬಗುಗೊಳಿಸುವ ಉದ್ದೇಶದಿಂದ ಸಾಂಪ್ರದಾಯಿಕ ಹಾಗೂ ಹಳೆಯ ತಂತ್ರಗಳನ್ನು ಬಳಸಲಾಗಿದೆ. ಸ್ಥಳೀಯ ಕಲಾವಿದರ ಅದ್ಭುತ ಕೌಶಲ, ಪ್ರತಿಭೆಯನ್ನು ಈ ದೇವಾಲಯ ಸಮುಚ್ಚಯದಲ್ಲಿನ ಕಲಾ ಶ್ರೀಮಂತಿಕೆ ಪ್ರತಿಬಿಂಬಿಸುತ್ತದೆ. ಅದು ಈಗಾಗಲೇ ಗೊತ್ತಿರುವಂತೆ, ರಿಲಯನ್ಸ್ ಫೌಂಡೇಷನ್ ಸಂಸ್ಥಾಪಕ ಅಧ್ಯಕ್ಷೆಯೂ ಆಗಿರುವ ನೀತಾ ಅಂಬಾನಿ ಅವರ ದೃಷ್ಟಿಕೋನವೇ ಸ್ಥಳೀಯ ಕಲಾವಿದರಿಗೆ ಉತ್ತೇಜನ, ಪ್ರೋತ್ಸಾಹ ಹಾಗೂ ಅವರ ಜೀವನೋಪಾಯಕ್ಕೆ ಸೂಕ್ತ ಅನುಕೂಲ ಮಾಡಿಕೊಡುವುದಾಗಿದೆ. ಅದರ ಜತೆಗೆ ಭಾರತೀಯ ಪರಂಪರೆ, ಸಂಪ್ರದಾಯ ಹಾಗೂ ಸಂಸ್ಕೃತಿಯನ್ನು ಕಾಪಾಡುವುದು ಹಾಗೂ ಪ್ರಚಾರಮಾಡುವುದು ಇದರ ಉದ್ದೇಶವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...