Wednesday, May 6, 2026
Wednesday, May 6, 2026

Agri News ಕಬ್ಬಿಗೆ ಹೆಚ್ಚುವರಿ ₹100 ಬಾಕಿ ನೀಡದಿದ್ದರೆ ಲೋಕಾಸಭಾ ಚುನಾವಣೆ ಬಹಿಷ್ಕಾರ- ಎಚ್.ಎನ್.ದೇವಕುಮಾರ್

Date:

Agri News ಎಂಪಿಎಂ ಕಾರ್ಖಾನೆಗೆ2010-11 ಸಾಲಿನಲ್ಲಿ ಸರಬರಾಜು ಮಾಡಿದ ಕಬ್ಬಿನ ಬಾಕಿ ೧೦೦ ಸರಕಾರ ಕೊಡದಿದ್ದಲ್ಲಿ ಲೋಕಸಭಾ ಚುನಾವಣೆ ಬಹಿಷ್ಕಾರ ಹಾಕಲಾಗುವುದೆಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಮತ್ತು ಕಬ್ಬು ಬೆಳೆಗಾರರ ಸಂಘದ ಸಂಚಾಲಕ ಹೆಚ್.ಎನ್.ದೇವಕುಮಾರ್ ಹೇಳಿದರು.


ಅವರು ಪತ್ರಿಕಾ ಗೋಷ್ಟಿಯಲ್ಲಿ ಮಾತನಾಡಿ ರೈತರು ಬೆವರು ಸುರಿಸಿ ಬೆಳೆದ ಕಬ್ಬಿಗೆ ಕೊಡಬೇಕಾದ ನ್ಯಾಯಯುತ ಬೆಲೆ ನೀಡದೆ ಸತಾವಣೆ ಮಾಡುವುದು ಒಳಿತಲ್ಲ. 2010-11ರಲ್ಲಿ ಸರಕಾರ ಮತ್ತು ಎಂಪಿಎಂ ಆಡಳಿತವು ಸರಬರಾಜು ಮಾಡಿದ ಕಬ್ಬಿಗೆ ಪ್ರತಿ ಟನ್1800ರೂ ಘೋಷಣೆ ಮಾಡಿತ್ತು. ಆದರೆ ಕಬ್ಬು ಬೆಳೆಗಾರರು ಮಾಡಿದ ಹೋರಾಟದ ಫಲವಾಗಿ ಹೆಚ್ಚುವರಿಯಾಗಿ 100ರೂ ನೀಡುವುದಾಗಿ ಹೇಳಲಾಗಿತ್ತು. 10 ವರ್ಷ ಗತಿಸಿದ್ದರೂ ಹಣ ಪಾವತಿಸದೆ ನಿರ್ಲಕ್ಷ ತಾಳಲಾಗಿದೆ. ಅಂದಿನ ಮುಖ್ಯಮಂತ್ರಿ ಸದಾನಂದಗೌಡರು ರೈತರ ಬಾಕಿ ನೂರು ರೂ ಪಾವತಿಸುವಂತೆಯೂ ಆದೇಶ ಮಾಡಿದ್ದಾರೆ. ಮಂಡ್ಯ ಮೈಶುಗರ್ ಕಾರ್ಖಾನೆ ಕಬ್ಬು ಬೆಳೆಗಾರರಿಗೆ ಹಣ ಪಾವತಿಯಾಗಿದೆ.
ಆದರೆ ಎಂಪಿಎಂನ ಒಟ್ಟು 4825 ಕಬ್ಬು ಬೆಳೆಗಾರರಿಗೆ 2.94ಕೋಟಿ ರೂ ಬಾಕಿ ಹಣ ವಿತರಣೆಯಾಗಬೇಕಿದೆ. ನಿರಂತರವಾಗಿ ಹೋರಾಟ ಮಾಡಿ ಮನವಿಗಳು ನೀಡುತ್ತಿದ್ದರೂ ಪ್ರಯೋಜನವಾಗಿಲ್ಲ. ನಂತರದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೆಚ್.ಡಿ.ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ ಅವರಿಗೂ ಮನವಿ ನೀಡಿದರೂ ಪ್ರಯೋಜನವಾಗಿಲ್ಲ ಎಂದು ವಿಷಾಧ ವ್ಯಕ್ತ ಪಡಿಸಿದರು. ಸಂಸದ ಬಿ.ವೈ.ರಾಘವೇಂದ್ರ, ಜಿಲ್ಲಾ ಸಚಿವ ಮಧು ಬಂಗಾರಪ್ಪ ಅವರಿಗೂ ಮನವಿ ನೀಡಲಾಗಿದೆ. ರಾಜ್ಯ ಸರಕಾರಕ್ಕೆ ರೈತರ ಬಗ್ಗೆ ನಿಜವಾದ ಕಾಳಜಿ ಇದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಕೂಡಲೆ ಹಣ ಬಿಡುಗಡೆ ಮಾಡಬೇಕು. ಇಲ್ಲದಿದ್ದಲ್ಲಿ ಲೋಕಸಭಾ ಚುನಾವಣೆ ಬಹಿಷ್ಕಾರ ಹಾಕುತ್ತೇವಲ್ಲದೆ ಹಲವು ಬಗೆಯ ಹೋರಾಟಗಳನ್ನೂ ಮಾಡುತ್ತೇವೆಂದರು.
ಪ್ರಧಾನ ಕಾರ್ಯದರ್ಶಿ ಸಣ್ಣಯ್ಯ ಮಾತನಾಡಿ ನಾವು ನಮಗೆ ಬರಬೇಕಿರುವ ಬೆವರಿನ ಹಣ ಕೇಳುತ್ತಿದ್ದೇವೆ ವಿನಹಾ ಭಕ್ಷೆ ಬೇಡುತ್ತಿಲ್ಲವೆಂದು ಆಕ್ರೋಶ ವ್ಯಕ್ತ ಪಡಿಸಿ, ಕಬ್ಬು ಬೆಳೆಗಾರರಿಂದ ಕಾರ್ಖಾನೆ ಲಾಭ ಮಾಡಿಕೊಂಡಿರುವುದರಿಂದ ನಮ್ಮ ಕಬ್ಬಿನ Agri News ಹೆಚ್ಚುವರಿ ಹಣ ಕೇಳುತ್ತಿದ್ದೇವೆಂದರು.
ಪತ್ರಿಕಾ ಗೋಷ್ಟಿಯಲ್ಲಿ ಜಿಲ್ಲಾಧ್ಯಕ್ಷ ಈರಣ್ಣ, ಪದಾಧಿಕಾರಿಗಳಾದ ಪ್ರಸನ್ನಕುಮಾರ್, ಶಿವರಾಂ, ಪುಟ್ಟಸ್ವಾಮಿಗೌಡ, ಸುಂದರರಾಜ್, ನಾಗರಾಜ್, ಶಂಕರ್ ಮುಂತಾದವರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಹತ್ತು ಚಿನ್ನದ ಪದಕ ಮುಡಿಗೇರಿಸಿದ ಕುವೆಂಪು ವಿವಿಗೇ ಪ್ರಥಮ ವಿದ್ಯಾರ್ಥಿಎಂ.ಎ.(ಕನ್ನಡ) ವಿಭಾಗದ ಪ್ರತಿಭೆ, ಹೆಚ್.ಎಂ.ಅಭಿಷೇಕ್.

Kuvempu University ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಯ ಮೂಲಕ ಗಮನ...

Kuvempu university ಕುವೆಂಪು ವಿವಿಯಿಂದ ಗೌರಗ ಡಾಕ್ಟರೇಟ್ ಪಡೆದ ಮಹನಿಯರ ಮಾಹಿತಿ

Kuvempu university ಕುವೆಂಪು ವಿಶ್ವವಿದ್ಯಾಲಯದ 35ನೇ ವಾರ್ಷಿಕ ಘಟಿಕೋತ್ಸವದಲ್ಲಿ ನಾಡಿನ ಮೂವರು ಗಣ್ಯ...

Kuvempu University ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸಿನ ಎತ್ತರಗಳನ್ನ ಸಾಧಿಸಿ,ದೇಶದವಾಭಿವೃದ್ಧಿಗೆ ಕೊಡುಗೆ ನೀಡಿ- ಗೌ.ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Kuvempu University “ಕೇವಲ ಉದ್ಯೋಗಾಕಾಂಕ್ಷಿಯಾಗಿರದೆ ಅವಕಾಶಗಳ ಸೃಷ್ಟಿಕರ್ತರಾಗಿ. ಸ್ಟಾರ್ಟ್‌ಅಪ್ ಸಂಸ್ಕೃತಿ, ನಾವೀನ್ಯತೆ...

S.N. Channabasappa ಕನ್ನಡ ಸಾಹಿತ್ಯ ಪರಿಷತ್ತಿನ 111 ವರ್ಷಗಳ ಸೇವೆ ಅಪ್ರತಿಮ- ಎಸ್.ಎನ್.ಚನ್ನಬಸಪ್ಪ

S.N. Channabasappa "ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಕಟ್ಟುವಲ್ಲಿ ಕನ್ನಡ...