Bharat Jodo Nyaya Yatra: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮುನ್ನಡೆಸುತ್ತಿರುವ ‘ಭಾರತ್ ಜೋಡೋ ನ್ಯಾಯ ಯಾತ್ರೆ (ಮಾ.2) ಮಧ್ಯಾಹ್ನ ರಾಜಸ್ಥಾನದ ಧೋಲ್ಪುರ್ ಜಿಲ್ಲೆಯಿಂದ ಪುನರಾರಂಭಗೊಂಡಿದೆ.
ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುಖಜಿಂದರ್ ರಾಂಧವಾ ಮತ್ತು ಇತರ ನಾಯಕರು ಹಾಗೂ ಭಾರೀ ಸಂಖ್ಯೆಯ ಕಾರ್ಯಕರ್ತರ ಸಮ್ಮುಖದಲ್ಲಿ ರಾಹುಲ್ ಯಾತ್ರೆಯನ್ನು ಪುನರಾರಂಭಿಸಿದ್ದಾರೆ.
ತೆರದ ವಾಹನದಲ್ಲಿ ಪಕ್ಷದ ಧ್ವಜ ಬೀಸಿ ರಾಹುಲ್ ಗಾಂಧಿ ಯಾತ್ರೆಗೆ ಚಾಲನೆ ಕೊಟ್ಟರು. ಸಾವಿರಾರು ಮಂದಿ ಕಾರ್ಯಕರ್ತರು ಅವರಿಗೆ ಸಾಥ್ ನೀಡಿದರು.
ಐದು ದಿನಗಳ ವಿರಾಮದ ನಂತರ ಇಂದು ಮಧ್ಯಾಹ್ನ ರಾಜಸ್ಥಾನದ ದೋಲ್ಪುರ ಜಿಲ್ಲೆಯಲ್ಲಿ ಪುನರಾರಂಭಗೊಂಡ ಯಾತ್ರೆಯು, ಸಂಜೆಯ ಹೊತ್ತಿಗೆ ಮಧ್ಯಪ್ರದೇಶದ ಮೊರೆನಾ ಜಿಲ್ಲೆಗೆ ಪ್ರವೇಶಿಸಿದೆ. ಇಂದು ರಾತ್ರಿ ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ರಾಹುಲ್ ಗಾಂಧಿ ವಾಸ್ತವ್ಯ ಹೂಡಲಿದ್ದಾರೆ.
Bharat Jodo Nyaya Yatra: ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ಎರಡು ವಿಶೇಷ ಉಪನ್ಯಾಸಗಳನ್ನು ನೀಡಲು ಮತ್ತು ನವದೆಹಲಿಯಲ್ಲಿ ಪ್ರಮುಖ ಸಭೆಗಳಲ್ಲಿ ಭಾಗವಹಿಸಲು ರಾಹುಲ್ ಗಾಂಧಿ ತೆರಳಿದ್ದ ಕಾರಣ ಭಾರತ್ ಜೋಡೋ ನ್ಯಾಯ ಯಾತ್ರೆಯು ಫೆಬ್ರವರಿ 26 ರಿಂದ ಮಾರ್ಚ್ 1 ರವರೆಗೆ ಸ್ಥಗಿತಗೊಂಡಿತ್ತು.
