Saturday, December 6, 2025
Saturday, December 6, 2025

Karnataka Defense Forum ಮಾರ್ಚ್ 5 ರಂದು ಕನ್ನಡ ನಾಮಫಲಕ ಜಾಗೃತಿ, ಕರವೇ ಮೆರವಣಿಗೆ

Date:

Karnataka Defense Forum ಶಿವಮೊಗ್ಗದ ಎಲ್ಲಾ ಅಂಗಡಿ ಮುಗ್ಗಟ್ಟುಗಳಲ್ಲಿ ನಾಮಫಲಕ ಕಡ್ಡಾಯವಾಗಿ 60% ಕನ್ನಡವೇ ಆಗಿರಬೇಕೆಂಬ ಬೇಡಿಕೆ ಮುಂದಿಟ್ಟು ಮಾ.5ರ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಘಟಕದವರು ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಿದ್ದಾರೆ.

ಕರವೇ ರಾಜ್ಯಾಧ್ಯಕ್ಷ ಟಿ ಏ ನಾರಾಯಣಗೌಡ ಆದೇಶದ ಮೇರೆಗೆ ಕಡ್ಡಾಯ ಕನ್ನಡ ನಾಮಫಲಕದ ಎರಡನೇ ಹಂತದ ಹೋರಾಟ ಇದಾಗಿದೆ. ಶಿವಮೊಗ್ಗದ ಶಿವಪ್ಪ ನಾಯಕ ಸರ್ಕಲ್ ನಿಂದ ಜಿಲ್ಲಾಧಿಕಾರಿ ಕಚೇರಿಯವರಿಗೆ ಬೃಹತ್ ಮೆರವಣಿಗೆ ಹೋರಾಟ ನಡೆಯಲಿದೆ. ಎಲ್ಲಾ ಅಂಗಡಿ- ಮುಂಗಟ್ಟು, ಮಾಲ್‌ಗಳಲ್ಲಿ ಜಾಗೃತಿ ಮತ್ತು ಜಾಸ್ತಿ ಇರುವ ಬೇರೆ ಭಾಷೆಯ ನಾಮಫಲಕಗಳಿಗೆ ಮಸಿ ಬಳಿಯುವ ಹರಿದು ಹಾಕುವ ಮೂಲಕ ಹೋರಾಟ ನಡೆಸಲಾಗುವುದು.

Karnataka Defense Forum ಕರವೇ ಜಿಲ್ಲಾ ಮಹಿಳಾ ಅಧ್ಯಕ್ಷೆ ಜ್ಯೋತಿ ಸೋಮಶೇಖರ್ ಮತ್ತು ಜಿಲ್ಲಾ ಅಧ್ಯಕ್ಷ ಮಂಜುನಾಥ್ ಹೆಚ್ ಹಾಗೂ ಶಿವಮೊಗ್ಗ ತಾಲೂಕ ಅಧ್ಯಕ್ಷ ಪ್ರಶಾಂತ್ ಕೆ ಎನ್ ಹಾಗೂ ಎಲ್ಲಾ ತಾಲೂಕು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಹೋರಾಟದಲ್ಲಿ ಭಾಗವಹಿಸಲಿದ್ದಾರೆ ಎಂದು ಜ್ಯೋತಿ ಸೋಮಶೇಖರ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...