Wednesday, February 4, 2026
Wednesday, February 4, 2026

Karnataka Defense Forum ಮಾರ್ಚ್ 5 ರಂದು ಕನ್ನಡ ನಾಮಫಲಕ ಜಾಗೃತಿ, ಕರವೇ ಮೆರವಣಿಗೆ

Date:

Karnataka Defense Forum ಶಿವಮೊಗ್ಗದ ಎಲ್ಲಾ ಅಂಗಡಿ ಮುಗ್ಗಟ್ಟುಗಳಲ್ಲಿ ನಾಮಫಲಕ ಕಡ್ಡಾಯವಾಗಿ 60% ಕನ್ನಡವೇ ಆಗಿರಬೇಕೆಂಬ ಬೇಡಿಕೆ ಮುಂದಿಟ್ಟು ಮಾ.5ರ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಘಟಕದವರು ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಿದ್ದಾರೆ.

ಕರವೇ ರಾಜ್ಯಾಧ್ಯಕ್ಷ ಟಿ ಏ ನಾರಾಯಣಗೌಡ ಆದೇಶದ ಮೇರೆಗೆ ಕಡ್ಡಾಯ ಕನ್ನಡ ನಾಮಫಲಕದ ಎರಡನೇ ಹಂತದ ಹೋರಾಟ ಇದಾಗಿದೆ. ಶಿವಮೊಗ್ಗದ ಶಿವಪ್ಪ ನಾಯಕ ಸರ್ಕಲ್ ನಿಂದ ಜಿಲ್ಲಾಧಿಕಾರಿ ಕಚೇರಿಯವರಿಗೆ ಬೃಹತ್ ಮೆರವಣಿಗೆ ಹೋರಾಟ ನಡೆಯಲಿದೆ. ಎಲ್ಲಾ ಅಂಗಡಿ- ಮುಂಗಟ್ಟು, ಮಾಲ್‌ಗಳಲ್ಲಿ ಜಾಗೃತಿ ಮತ್ತು ಜಾಸ್ತಿ ಇರುವ ಬೇರೆ ಭಾಷೆಯ ನಾಮಫಲಕಗಳಿಗೆ ಮಸಿ ಬಳಿಯುವ ಹರಿದು ಹಾಕುವ ಮೂಲಕ ಹೋರಾಟ ನಡೆಸಲಾಗುವುದು.

Karnataka Defense Forum ಕರವೇ ಜಿಲ್ಲಾ ಮಹಿಳಾ ಅಧ್ಯಕ್ಷೆ ಜ್ಯೋತಿ ಸೋಮಶೇಖರ್ ಮತ್ತು ಜಿಲ್ಲಾ ಅಧ್ಯಕ್ಷ ಮಂಜುನಾಥ್ ಹೆಚ್ ಹಾಗೂ ಶಿವಮೊಗ್ಗ ತಾಲೂಕ ಅಧ್ಯಕ್ಷ ಪ್ರಶಾಂತ್ ಕೆ ಎನ್ ಹಾಗೂ ಎಲ್ಲಾ ತಾಲೂಕು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಹೋರಾಟದಲ್ಲಿ ಭಾಗವಹಿಸಲಿದ್ದಾರೆ ಎಂದು ಜ್ಯೋತಿ ಸೋಮಶೇಖರ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...