Saturday, December 6, 2025
Saturday, December 6, 2025

Death News ಮಡಿಕೇರಿಯ ಸನಿಹದ ನಿಶಾನಿ ಬೆಟ್ಟದಲ್ಲಿ ಮನೆಗೆ ವಾಪಸಾಗುತ್ತಿದ್ದ ವ್ಯಕ್ತಿಯನ್ನ ತುಳಿದ ಕಾಡಾನೆ

Date:

Death News ಕೆಲಸ ಮುಗಿಸಿ ಮನೆಗೆ ಬರುತ್ತಿದ್ದ ವ್ಯಕ್ತಿಯೊಬ್ಬರು ಕಾಡಾನೆ ತುಳಿದು ಮೃತಪಟ್ಟಿರುವ ಘಟನೆ ಕೊಡಗಿನಲ್ಲಿ ನಡೆದಿದೆ.

ಮಡಿಕೇರಿ ನಗರದಿಂದ ಸ್ವಲ್ಪವೇ ದೂರವಿರುವ ನಿಶಾನಿ ಬೆಟ್ಟದ ಸಮೀಪದಲ್ಲಿ ಘಟನೆ ನಡೆದಿದೆ. ಮೃತರನ್ನು ಗಾಳಿಬೀಡು ಗ್ರಾಮದ ವರಡ ನಿವಾಸಿ ಅಪ್ಪಚ್ಚ( 60) ಎಂದು ಗುರುತಿಸಲಾಗಿದೆ. ಕೊಡಗಿನಲ್ಲಿ ಕಾಡಾನೆ ಹಾವಳಿಯಿಂದ ಜನ ಜೀವ ಕಳೆದುಕೊಳ್ಳುತ್ತಿರುವ ಪ್ರಕರಣಗಳು ಆಗಾಗ ವರದಿಯಾಗುತ್ತಲೇ ಇವೆ. ಈಗ ಮತ್ತೆ ಪ್ರಕರಣ ಮರುಕಳಿಸಿದೆ.

ಕೆಲಸಕ್ಕೆಂದು ಹೋಗಿದ್ದ ಅಪ್ಪಚ್ಚ ಮನೆಗೆ ಬಂದಿರಲಿಲ್ಲ. ಇದರಿಂದ ಅನುಮಾನಗೊಂಡ ಕುಟುಂಬದವರು ಹುಡುಕಾಟ ನಡೆಸಿದ್ದರು. ಆದರೂ ಪತ್ತೆಯಾಗದ ಹಿನ್ನೆಲೆಯಲ್ಲಿ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೊಲೀಸರೂ ಕೂಡ ಪತ್ತೆಗೆ ಕ್ರಮ ವಹಿಸಿದ್ದರು.

ಈ ನಡುವೆ ಗಾಳಿ ಬೀಡು ಸಮೀಪದ ನಿಶಾನಿ ಬೆಟ್ಟದ ಬಳಿ ವ್ಯಕ್ತಿಯೊಬ್ಬ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದನ್ನು ಟ್ರಕ್ಕಿಂಗ್‌ಗೆ ತೆರಳಿದವರು ಗಮನಿಸಿದ್ದರು. ಇದನ್ನು ಅವರು ಸ್ಥಳೀಯರ ಗಮನಕ್ಕೆ ತಂದಿದ್ದರು. ಆನಂತರ ಪೊಲೀಸರಿಗೆ ಮಾಹಿತಿ ತಿಳಿದು ಬಂದು ತಪಾಸಣೆ ನಡೆಸಿದಾಗ ಆನೆ ದಾಳಿಯಿಂದ ವ್ಯಕ್ತಿ ಮೃತಪಟ್ಟಿರುವುದು ಕಂಡು ಬಂದಿತ್ತು. ಅಪ್ಪಚ್ಚ ಅವರ ಕುಟುಂಬದವರೂ ಗುರುತಿಸಿದ್ದರು. ಆನಂತರ ಮರಣೋತ್ತರ ಪರೀಕ್ಷೆ ಬಳಿಕ ಶವವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿತ್ತು.

Death News ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆನೆ ದಾಳಿ ಮಾಡಿರುವ ಕುರಿತಾಗಿಯೂ ವಿವರಗಳನ್ನು ಸಂಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...