Thursday, April 30, 2026
Thursday, April 30, 2026

Agri News ಹತ್ತಿ & ಜೋಳ ಕುಲಾಂತರಿ ತಳಿಗಳ ಪ್ರಯೋಗಕ್ಕೆ ರಾಜ್ಯ ಸರ್ಕಾರದಿಂದ ನಿರಾಕ್ಷೇಪಣಾ ಪತ್ರ ನೀಡಿಕೆ ಬೇಡ-ಕೆ.ಟಿ.ಗಂಗಾಧರ್

Date:

Agri News ಕುಲಾಂತರಿ ತಳಿಗಳನ್ನು ಪ್ರಯೋಗ ನಡೆಸುವ ಕುರಿತು ರಾಜ್ಯದ ಜೈವಿಕ ತಂತ್ರಜ್ಞಾನ ಸಮನ್ವಯ ಸಮಿತಿಯು ಧಾರವಾಡ ಮತ್ತು ರಾಯಚೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಕುಲಾಂತರಿ ಹತ್ತಿ ಮತ್ತು ಜೋಳ ತಳಿ ಪ್ರಯೋಗ ನಡೆಸಲು ರಾಲೀಸ್ ಇಂಡಿಯಾ ಲಿಮಿಟೆಡ್ ಗೆ ರಾಜ್ಯ ಸರ್ಕಾರವು ನಿರಾಕ್ಷೇಪಣಾ ಪತ್ರವನ್ನು (NOC) ನೀಡಿರುವುದನ್ನು ರಾಜ್ಯ ರೈತ ಸಂಘದ ಮುಖಂ‌ಡ ಕೆ ಟಿ ಗಂಗಾಧರ ಖಂಡಿಸಿದ್ದಾರೆ.


ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,
2024-26 ರ ಅವಧಿಯಲ್ಲಿ ಕುಲಾಂತರಿ ತಳಿಗಳಾದ ಎಂಎಲ್‌ಎಸ್‌ 4301, ಎಂಎಲ್‌ಎಸ್‌ 2531 ಎರಡು ತಳಿಗಳ ಪ್ರಯೋಗ ನಡೆಸಲು ಸಭೆಯು ತೀರ್ಮಾನಿಸಿರುವುದು ಗೊತ್ತಾಗಿದೆ.
ಈ ಎರಡು ಹೊಸ ತಳಿಗಳು ಕಳೆನಾಶಕ ಮತ್ತು ಕ್ರಿಮಿನಾಶಕ ನಿರೋಧಕ ಗುಣಗಳನ್ನು ಹೊಂದಿದ್ದು ಇಳುವರಿಯನ್ನು ಶೇಕಡ 30 ರಿಂದ 70ರಷ್ಟು ಹೆಚ್ಚಿಸಲಿದೆ ಎಂದು ಹೇಳಲಾಗಿದೆ ಎಂದರು.
ಜೈವಿಕ ತಂತ್ರಜ್ಞಾನದ ಬಗ್ಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ವೈಜ್ಞಾನಿಕ ಸಮುದಾಯದೊಳಗೇ ಸಮಾನ ಅಭಿಪ್ರಾಕ್ಕೆ ಬರಲು ಸಾಧ್ಯವಾಗಿಲ್ಲ. ಕೃಷಿಯಲ್ಲಿ ಜೈವಿಕ ತಂತ್ರಜ್ಞಾನ ಅಥವಾ ಬಿ.ಟಿ. ತಂತ್ರಜ್ಞಾನವನ್ನು ಬಳಸುವುದರಿಂದ ಪರಿಸರ, ಪ್ರಾಣಿ, ಪಕ್ಷಿ ಮತ್ತು ಮನುಷ್ಯರ ಆರೋಗ್ಯದ ಮೇಲೆ ಸರಿಪಡಿಸಲಾಗದಂತಹ ದುಷ್ಪರಿಣಾಮಗಳು ಬೀರಲಿವೆ ಎಂಬ ಆತಂಕವನ್ನು ಅಂತರಾಷ್ಟ್ರೀಯ ವಿಜ್ಞಾನಿಗಳು ಕಳೆದ ಇಪ್ಪತ್ತೈದು ವರ್ಷಗಳಿಂದ ಹೇಳುತ್ತಲೇ ಬಂದಿದ್ದಾರೆ ಎಂದರು.


Agri News ರೈತರ ಬೀಜ ಸ್ವಾತಂತ್ರ್ಯದ ಹರಣ ಕಳೆದ 22 ವರ್ಷಗಳಿಂದ ಹತ್ತಿ ಬೆಳೆಯುವ ಪ್ರದೇಶಗಳಲ್ಲಿ ಬಿ.ಟಿ. ಹತ್ತಿಯು ತನ್ನ ಏಕಸ್ವಾಮ್ಯವನ್ನು ಸ್ಥಾಪಿಸಿದ್ದು ನಮ್ಮ ಸ್ಥಳೀಯ ಅನೇಕ ಹತ್ತಿ ತಳಿಗಳು ಸಂಪೂರ್ಣವಾಗಿ ಮಾಯವಾಗಿದೆ. ರೈತರು ಬಿತ್ತನೆ ಬೀಜಕ್ಕಾಗಿ ಪ್ರತಿವರ್ಷ ಕಂಪನಿಗಳ ಮೊರೆಹೋಗುವ ಸ್ಥಿತಿ ಎದುರಾಗಿದೆ. ಇದರಿಂದ ರೈತರು ಬೀಜದ ಸ್ವಾತಂತ್ರವನ್ನು ಸಂಪೂರ್ಣವಾಗಿ ಕಳೆದುಕೊಂಡಿದ್ದಾರೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Nalanda Chess Academy ನಳಂದಾಚೆಸ್ ಅಕಾಡೆಮಿಯಿಂದ ಚೆಸ್ ಬೇಸಿಕ್ ಸಮ್ಮರ್ ಕ್ಯಾಂಪ್

Nalanda Chess Academy ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯಲ್ಲಿರುವ ನಳಂದಾ ಚೆಸ್...

Government Industrial Training Institute ತೀರ್ಥಹಳ್ಳಿ ಐಟಿಐ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

Government Industrial Training Institute ತೀರ್ಥಹಳ್ಳಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯು...

Madhu Bangarappa ಹುಲಿಕಲ್ ಘಾಟ್ ಕುಸಿತ ಪ್ರಕರಣ: ಸಮಗ್ರ ವಿವರ ಪಡೆದು ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ- ಮಧು ಬಂಗಾರಪ್ಪ

Madhu Bangarappa ಮಲೆನಾಡು ಮತ್ತು ಕರಾವಳಿಯನ್ನು ಸಂಪರ್ಕಿಸುವ ಪ್ರಮುಖ ಕೊಂಡಿಯಾಗಿರುವ ಹೊಸನಗರ...

ಏಪ್ರಿಲ್ 30. ಮಾಚೇನಹಳ್ಳಿ ಜಯಂತಿ ಗ್ರಾಮ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ, ಮೆಸ್ಕಾಂ ಪ್ರಕಟಣೆ

ಶಿವಮೊಗ್ಗ ಮಾಚೇನಹಳ್ಳಿ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರ ಮಾರ್ಗಗಳಲ್ಲಿ ರಸ್ತೆ ಅಗಲೀಕರಣ...