Monday, February 2, 2026
Monday, February 2, 2026

Delhi Chalo ಇಂದು ರೈತರಿಂದ ದೆಹಲಿ ಚಲೋ ಪಾದಯಾತ್ರೆ ಪುನರಾರಂಭ

Date:

Delhi Chalo ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ದೆಹಲಿ ಚಲೋ’ ಹಮ್ಮಿಕೊಂಡಿರುವ ರೈತರು, ಇಂದು(ಮಾ.6) ತಮ್ಮ ಪಾದಯಾತ್ರೆಯನ್ನು ಪುನರಾರಂಭಿಸಲಿದ್ದಾರೆ.
ಈ ಹಿನ್ನೆಲೆ ಪಂಜಾಬ್-ಹರಿಯಾಣ ಗಡಿಯಲ್ಲಿ ಪೊಲೀಸರು ಭದ್ರತೆ ಹೆಚ್ಚಿಸಿದ್ದಾರೆ.

ದೆಹಲಿ ಚಲೋ ಹೋರಾಟದ ನೇತೃತ್ವ ವಹಿಸಿರುವ ಎರಡು ಸಂಘಟನೆಗಳಾದ ಕಿಸಾನ್ ಮಜ್ದೂರ್ ಮೋರ್ಚಾ ಮತ್ತು ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ದೇಶದಾದ್ಯಂತ ರೈತರಿಗೆ ಇಂದು ರಾಷ್ಟ್ರ ರಾಜಧಾನಿ ದೆಹಲಿ ತಲುಪಲು ಮಾರ್ಚ್‌ 3ರಂದು ಮನವಿ ಮಾಡಿತ್ತು.

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಕಾನೂನು ಖಾತರಿ ನೀಡುವುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮುಂದಿನ ವಾರ ದೇಶದಾದ್ಯಂತ ನಾಲ್ಕು ಗಂಟೆಗಳ ಕಾಲ “ರೈಲು ತಡೆದು ಪ್ರತಿಭಟಿಸಲು” ರೈತ ಸಂಘಟನೆಗಳು ಕರೆ ನೀಡಿವೆ.

ಫೆ.13ರಂದು ದೆಹಲಿ ಚಲೋ ಪ್ರಾರಂಭಿಸಿರುವ ರೈತರನ್ನು ಪಂಜಾಬ್‌-ಹರಿಯಾಣ ರಾಜ್ಯಗಳ ನಡುವಿನ ಶಂಭು ಮತ್ತು ಖನೌರಿ ಗಡಿಯಲ್ಲಿ ಹರಿಯಾಣದ ಬಿಜೆಪಿ ಸರ್ಕಾರದ ಪೊಲೀಸರು ತಡೆದಿದ್ದಾರೆ. ಹರಿಯಾಣ ಪೊಲೀಸರು ರೈತರು ದೆಹಲಿ ಕಡೆ ತೆರಳಲು ಅವಕಾಶ ನೀಡುತ್ತಿಲ್ಲ.

Delhi Chalo ಹಾಗಾಗಿ, ಪಂಜಾಬ್ ಮತ್ತು ಹರಿಯಾಣದ ರೈತರು ಶಂಭು, ಖನೌರಿ ಗಡಿಗಳಲ್ಲಿ ಪ್ರತಿಭಟನೆ ಮುಂದುವರೆಸಿದರೆ, ಇತರ ರಾಜ್ಯಗಳ ರೈತರು ದೆಹಲಿ ತಲುಪುವಂತೆ ರೈತ ನಾಯಕರು ಕರೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...