Tuesday, February 3, 2026
Tuesday, February 3, 2026

Siddaramaiah ಹಿರಿಯ ಸಿನಿಮಾ ನಿರ್ದೇಶಕ ಎಂ.ಎಸ್.ಸತ್ಯು ಗೆ ಜೀವಮಾನ ಸಾಧನೆ ಪ್ರಶಸ್ತಿ;ಅಭಿನಂದಿಸಿದ ಸಿದ್ಧರಾಮಯ್ಯ

Date:

Siddaramaiah ಅಂತಾರಾಷ್ಟ್ರೀಯ ಖ್ಯಾತಿಯ ಚಲನಚಿತ್ರ ನಿರ್ದೇಶಕ, ಹಿರಿಯ ರಂಗಕರ್ಮಿ ಹಾಗೂ ಕಲಾ ನಿರ್ದೇಶಕರಾದ ಮೈಸೂರು ಶ್ರೀನಿವಾಸ ಸತ್ಯು (ಎಂ.ಎಸ್.ಸತ್ಯು) ಅವರು ಕಲಾಜಗತ್ತಿಗೆ ಸಲ್ಲಿಸಿರುವ ಅನನ್ಯ ಸೇವೆಯನ್ನು ಗುರುತಿಸಿ “15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ”ದ “ಜೀವಮಾನ ಸಾಧನೆ ಪ್ರಶಸ್ತಿ”ಗೆ ಆಯ್ಕೆ ಮಾಡಲಾಗಿದೆ.

ಅವರ ನಿರ್ದೇಶನದ ಹಿಂದಿ ಚಿತ್ರ ಗರಂ ಹವಾ ಹಲವಾರು ರಾಷ್ಟ್ರೀಯ – ಅಂತಾರಾಷ್ಟ್ರೀಯ ಪ್ರಶಸ್ತಿ ಗಳಿಸಿದ್ದರೆ, ಕನ್ನಡದ ‘ಬರ’ ರಾಜ್ಯ ಮತ್ತು ರಾಷ್ಟ್ರಮಟ್ಟದ ಪ್ರಶಸ್ತಿಗಳನ್ನು ಪಡೆದಿತ್ತು.
ಕಲಾ ನಿರ್ದೇಶಕರಾಗಿ ಅವರು ನಿರ್ದೇಶಿಸಿದ ಮೊದಲ ಚಲನಚಿತ್ರವಾದ ಹಕೀಕತ್ ‘ಫಿಲ್ಮ್ ಫೇರ್ ಪ್ರಶಸ್ತಿ’ಯನ್ನು ಪಡೆದಿತ್ತು. ದಾರಾಶೀಕೋ ನಾಟಕವು ಆಧುನಿಕ ಉತ್ಕೃಷ್ಟ ನಾಟಕವೆಂದು ಗುರುತಿಸಲ್ಪಟ್ಟಿದ್ದು ಅವರ ಇನ್ನೊಂದು ಸಾಧನೆಯಾಗಿದೆ.

Siddaramaiah ಹೀಗೆ ನಮ್ಮೂರಿನಲ್ಲಿ ಹುಟ್ಟಿದ ಮೇರು ಸಾಧಕ, ಹಿರಿಯ ರಂಗಕರ್ಮಿಯೊಬ್ಬರು ಈ ಪ್ರಶಸ್ತಿಗೆ ಆಯ್ಕೆಯಾಗಿರುವುದು ಅತ್ಯಂತ ಖುಷಿಯ ವಿಚಾರ. ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...