Thursday, June 18, 2026
Thursday, June 18, 2026

GH Srinivasa ತರೀಕೆರೆ ವಕ್ಫ್ ಸಮಿತಿಯ ವಿವಿಧ ಕಾಮಗಾರಿ ಯೋಜನೆಗಳಿಗೆ ₹3 ಕೋಟಿ ಅನುದಾನ- ಶಾಸಕ ಶ್ರೀನಿವಾಸ್

Date:

GH Srinivasa ರಾಜ್ಯ ಸರ್ಕಾರ ವಕ್ಪ್ ಸಂಸ್ಥೆಗಳ ಕಾಂಪೌoಡ್ ನಿರ್ಮಾಣ, ದುರಸ್ಥಿ, ಜೀ ರ್ಣೋದ್ದಾರ, ನವೀಕರಣ ಸೇರಿದಂತೆ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಜಿಲ್ಲೆಯಾದ್ಯಂತ ಒಟ್ಟಾರೆ 6 ಕೋಟಿ ರೂ. ಅನುದಾನ ಮಂಜೂರಾಗಿದೆ ಎಂದು ತರೀಕೆರೆ ಶಾಸಕ ಜಿ.ಹೆಚ್.ಶ್ರೀನಿವಾಸ್ ತಿಳಿಸಿದರು.

ಅಜ್ಜಂಪುರ ಪಟ್ಟಣದ ಜಾಮೀಯಾ ಮಸೀದಿಯಲ್ಲಿ ತಾಲ್ಲೂಕು ಮುಸ್ಲೀಂ ಸಮಾಜ ವತಿಯಿಂದ ಏರ್ಪಡಿಸಿದ್ದ ಅಭಿನಂ ದನಾ ಕಾರ್ಯಕ್ರಮದಲ್ಲಿ ಸೋಮವಾರ ಪಾಲ್ಗೊಂಡು ಅವರು ಮಾತನಾಡಿದರು.

ಜಿಲ್ಲೆಗೆ ಒಟ್ಟು 6 ಕೋಟಿ ವಕ್ಫ್ ಅನುದಾನ ಮಂಜೂರಾಗಿದ್ದು ಅವುಗಳಲ್ಲಿ ತರೀಕೆರೆ ಒಂದೇ ಕ್ಷೇತ್ರಕ್ಕೆ ಬರೋ ಬ್ಬರಿ 3 ಕೋಟಿ ರೂ. ಅನುದಾನ ಒದಗಿಸಿದೆ. ಈ ಅನುದಾನದಲ್ಲಿ ವಕ್ಫ್ ಸಂಸ್ಥೆಗಳು ಹಾಗೂ ಮುಸ್ಲಿಂ ಸಮುದಾ ಯದ ಅಭಿವೃದ್ಧಿಗೆ ಶ್ರಮಿಸಲಾಗುವುದು. ಇನ್ನೂ ಹೆಚ್ಚಿನ ಅನುದಾನ ಅವಶ್ಯವಿದ್ದಲ್ಲಿ ಒದಗಿಸಿ ಕೊಡಲಾಗುವುದು ಎಂದು ಭರವಸೆ ನೀಡಿದರು.

ಜಿಲ್ಲಾ ವಕ್ಫ್ ಮಂಡಳಿ ಅಧ್ಯಕ್ಷ ಮೊಹಮ್ಮದ್ ಶಾಹೀದ್ ರಜ್ವಿ ಮಾತನಾಡಿ ಮುಸ್ಲೀಂ ಸಮುದಾಯದ ವಕ್ಫ್ ಸಮಿತಿಗೆ ಅನುದಾನ ಒದಗಿಸಿರುವುದು ಶ್ಲಾಘನೀಯ. ಈ ಅನುದಾನದಿಂದ ಮುಂಬರುವ ದಿನಗಳಲ್ಲಿ ಸಂಸ್ಥೆಗೆ ಅನುಕೂಲವಾಗುವ ಎಲ್ಲಾ ಸವಲತ್ತುಗಳನ್ನು ಒದಗಿಸಲಾಗುವುದು ಎಂದರು.

ಇದೇ ವೇಳೆ ಶಾಸಕ ಜಿ.ಹೆಚ್.ಶ್ರೀನಿವಾಸ್ ಅವರಿಗೆ ಮುಸ್ಲೀಂ ಸಮುದಾಯದಿಂದ ಅಭಿನಂದನೆ ಸಲ್ಲಿಸಲಾಯಿತು.

GH Srinivasa ಸಂದರ್ಭದಲ್ಲಿ ಜಾಮೀಯಾ ಮಸೀದಿ ಅಧ್ಯಕ್ಷ ಮಸೂದ್ ಅಹ್ಮದ್, ಕೆಪಿಸಿಸಿ ಸದಸ್ಯ ರಿಜ್ವಾನ್, ಅಲ್ತಾ ಫ್, ಪಾಷ, ಜಿ.ನಟರಾಜ್, ಮುಸ್ತಾಕ್ ಅಹಮ್ಮದ್ ಮತ್ತಿತರರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...