Friday, September 27, 2024
Friday, September 27, 2024

Kuvempu University ಕುವೆಂಪು ವೈಚಾರಿಕತೆ, ಆದರ್ಶಗಳೇ ನನಗೆ ಮಾರ್ಗದರ್ಶಿ-ಪ್ರೊ.ಶರತ್ ಅನಂತಮೂರ್ತಿ.ನೂತನ ಕುಲಪತಿ ಕುವೆಂಪು ವಿವಿ

Date:

Kuvempu University ಕುವೆಂಪು ವಿವಿಯ ನೂತನ ಕುಲಪತಿಯಾಗಿ ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ಭೌತಶಾಸ್ತ್ರ ಪ್ರಾಧ್ಯಾಪಕರಾಗಿದ್ದ ಡಾ. ಶರತ್ ಅನಂತಮೂರ್ತಿ ಅವರು ಗುರುವಾರ ಬೆಳಿಗ್ಗೆ ಅಧಿಕಾರ ಸ್ವೀಕಾರ ಮಾಡಿದ್ದಾರೆ.

ರಾಜ್ಯಪಾಲ ಡಾ. ತಾವರ್ ಚಂದ್ ಗೆಹ್ಲೋಟ್ ಅವರು ಫೆಬ್ರವರಿ 05ರಂದು ಡಾ. ಶರತ್ ಅವರನ್ನು ಪೂರ್ಣಾವಧಿ ಕುಲಪತಿಯಾಗಿ ನಿಯುಕ್ತಿಗೊಳಿಸಿ ಆದೇಶ ಹೊರಡಿಸಿದ್ದರು.

ಪ್ರೊ. ಶರತ್ ಅನಂತಮೂರ್ತಿ ಕರ್ನಾಟಕದ ಖ್ಯಾತ ಸಾಹಿತಿ ಹಾಗೂ ಜ್ಞಾನಪೀಠ ಪುರಸ್ಕೃತ ಡಾ. ಯು ಆರ್ ಅನಂತಮೂರ್ತಿ ಅವರ ಪುತ್ರರಾಗಿದ್ದಾರೆ. ಇವರು ಅಮೆರಿಕಾದ ಪ್ರತಿಷ್ಠಿತ ಅಯೋವಾ ಸ್ಟೇಟ್ ವಿಶ್ವವಿದ್ಯಾಲಯದಿಂದ ಪಿಹೆಚ್. ಡಿ. ಪದವಿ ಪಡೆದಿದ್ದಾರೆ. ಪ್ರೊ. ಶರತ್ ಬೆಂಗಳೂರು ವಿವಿಯಲ್ಲಿ 2017ರವರೆಗೆ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ನಂತರ ಹೈದರಾಬಾದ್ ವಿಶ್ವವಿದ್ಯಾಲಯದ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿ ನೇಮಕಗೊಂಡಿದ್ದರು.

ಅವರು 35ಕ್ಕೂ ಅಧಿಕ ಸಂಶೋಧನಾ ಲೇಖನಗಳನ್ನು ವಿವಿಧ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸಂಶೋಧನಾ ಜರ್ನಲ್ ಗಳಲ್ಲಿ ಪ್ರಕಟಿಸಿದ್ದಾರೆ. ಇವರ ಲೇಖನಗಳು 350ಕ್ಕೂ ಹೆಚ್ಚು ಸಂಶೋಧನಾ ಮರು ಉಲ್ಲೇಖಗಳನ್ನು ಪಡೆದುಕೊಂಡಿವೆ. 2006ರಲ್ಲಿ ಇವರ ಶೈಕ್ಷಣಿಕ ಸಾಧನೆಗಾಗಿ ಕಾಮನ್ವೆಲ್ತ್ ವಿಶ್ವವಿದ್ಯಾಲಯಗಳು ಒಕ್ಕೂಟದ ವತಿಯಿಂದ ‘ಕಾಮನ್ವೆಲ್ತ್ ಶೈಕ್ಷಣಿಕ ಸಿಬ್ಬಂದಿ ಫೆಲೋಶಿಪ್’ ಗೌರವವನ್ನು ನೀಡಲಾಗಿದೆ.

ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು, ಕುವೆಂಪು ಹೆಸರಿನ ವಿಶ್ವವಿದ್ಯಾಲಯದ ಕುಲಪತಿಯಾಗಿ ನೇಮಕಗೊಂಡಿರುವುದು ಅತ್ಯಂತ ಹೆಮ್ಮೆಯ ವಿಷಯ. ಅವರ ವೈಚಾರಿಕತೆ, ಆದರ್ಶಗಳೇ ನನಗೆ ಮಾರ್ಗದರ್ಶಿ. ವಿಶ್ವವಿದ್ಯಾಲಯದಲ್ಲಿ ಶೈಕ್ಷಣಿಕ ವಾತಾವರಣವನ್ನು ಬಲಪಡಿಸುವ ನಿಟ್ಟಿನಲ್ಲಿ ಚರ್ಚೆ, ಸಂವಾದಗಳು ನಡೆಯಬೇಕು. ವಿವಿಯನ್ನು ವಿದ್ಯಾರ್ಥಿಗಳು ಮತ್ತು ಅಧ್ಯಾಪಕ ಕೇಂದ್ರಿತವನ್ನಾಗಿಸಿ ಮುಕ್ತ ಮತ್ತು ನಿರ್ಭಿಡೆಯ ವಾತಾವರಣ ನಿರ್ಮಿಸುವುದರತ್ತ ಗಮನಹರಿಸುವುದಾಗಿ ತಿಳಿಸಿದರು.

Kuvempu University ಈ ಸಂದರ್ಭದಲ್ಲಿ ವಿವಿಯ ನಿಕಟಪೂರ್ವ ಪ್ರಭಾರ ಕುಲಪತಿ ಪ್ರೊ. ಎಸ್ ವಿ ಕೃಷ್ಣಮೂರ್ತಿ, ಕುಲಸಚಿವ ಎ ಎಲ್ ಮಂಜುನಾಥ್, ಪರೀಕ್ಷಾಂಗ ಕುಲಸಚಿವ ಪ್ರೊ. ಎಸ್ ಎಂ ಗೋಪಿನಾಥ್, ಹಣಕಾಸು ಅಧಿಕಾರಿ ಜಿ.‌ ಬಂಗಾರಪ್ಪ, ಪ್ರೊ.‌ ಗುರುಲಿಂಗಯ್ಯ, ಡಾ. ಸತ್ಯಪ್ರಕಾಶ್. ಎಂ. ಆರ್ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Hassan Manikya Prakashana ಶಿವಮೊಗ್ಗದ ಕವಿ ಶಿ.ಜು.ಪಾಶಾ ಅವರಿಗೆ “ಜನ್ನ ಕಾವ್ಯ ಪ್ರಶಸ್ತಿ”

Hassan Manikya Prakashana ಹಾಸನದ ಮಾಣಿಕ್ಯ ಪ್ರಕಾಶನ(ರಿ) ರಾಜ್ಯಮಟ್ಟದ ಜನ್ನ ಕಾವ್ಯ...

Vajreshwari Co Operative Society ಶ್ರೀವಜ್ರೇಶ್ವರಿ ಸಹಕಾರ ಸಂಘದಿಂದ ಪ್ರತಿಭಾ ಪುರಸ್ಕಾರ

Vajreshwari Co Operative Society ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯ ಶ್ರೀ...

Inner Wheel Shivamogga ದುರ್ಬಲರಿಗೆ ನೆರವು ನೀಡಿದಾಗ ಸೇವೆ ಸಾರ್ಥಕ- ಶಿಲ್ಪ ಗೋಪಿನಾಥ್

Inner Wheel Shivamogga ನಾವು ಮಾಡುವ ಸೇವೆ ಸಾರ್ಥಕಗೊಳ್ಳಬೇಕಾದರೆ...

National Education Committee ಬೆಳಗುತ್ತಿ & ಮಲ್ಲಿಗೇನಹಳ್ಳಿಯಲ್ಲಿ ಗಮನ ಸೆಳೆದ ಎನ್.ಎಸ್.ಎಸ್. ವಾರ್ಷಿಕ ಶಿಬಿರ

National Education Committee ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದಲ್ಲಿರಂಗಪ್ರಯೋಗದ...