Friday, May 15, 2026
Friday, May 15, 2026

B. Y. Raghavendra ಕಾಂತೇಶ್ ಗೆ ಹಾವೇರಿ ಟಿಕೆಟ್ ಗೆ ಪ್ರಯತ್ನಿಸುವೆ- ಬಿಎಸ್ ವೈ

Date:

B. Y. Raghavendra ಭಾನುವಾರದಂದು ನಡೆಯಬೇಕಾಗಿದ್ದ ದೆಹಲಿಯಲ್ಲಿ ಚುನಾವಣಾ ಸಮಿತಿ ಸಭೆ ಮುಂದೂಡಿಕೆ ಆಗಿದೆ. ಆದರಿಂದ ನಾನು ದೆಹಲಿಗೆ ಹೋಗುತ್ತಿಲ್ಲ. ಇದರಿಂದ ನಾಳೆ ಶಿವಮೊಗ್ಗದಲ್ಲೇ ಚುನಾವಣೆ ತಯಾರಿ‌ ನಡೆಸುತ್ತೇನೆ ಎಂದು ಬಿಜೆಪಿ ಕೇಂದ್ರೀಯ ಸಂಸದಿಯ ಮಂಡಳಿಯ ಸದಸ್ಯ ಬಿ.ಎಸ್.ಯಡಿಯೂರಪ್ಪ ಶಿವಮೊಗ್ಗದಲ್ಲಿ ತಿಳಿಸಿದ್ದಾರೆ.

ಲೋಕಸಭ ಚುನಾವಣೆ ಬಿಜೆಪಿಗೆ ವಾತಾವರಣ ತುಂಬಾ ಚೆನ್ನಾಗಿದೆ. 28 ಲೋಕಸಭ ಕ್ಷೇತ್ರದಲ್ಲಿ 25 ರಲ್ಲಿ ಗೆಲ್ಲಲು ಶ್ರಮ ಹಾಕುತ್ತೇವೆ. ಅದರಲ್ಲಿ ಯಶಸ್ವಿ ಆಗುವ ವಿಶ್ವಾಸವಿದೆ‌. ರಾಜಕೀಯ ಪಕ್ಷದಲ್ಲಿ ಸ್ವಾಭಾವಿಕ ಟಿಕೆಟ್ ಹಂಚಿಕೆಗೂ ಮುನ್ನ ಗೊಂದಲ ಇರುತ್ತದೆ. ಒಂದು ಸಲ ಪಟ್ಟಿ ಬಿಡುಗಡೆಯಾದ ಮೇಲೆ ಎಲ್ಲರೂ ಹೊಂದಿಕೊಂಡು ಹೋಗುತ್ತೇವೆ. ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನ ಮಂತ್ರಿ ಆಗಬೇಕು ಎಂಬುದು ನಮ್ಮ ಬಯಕೆ.

B. Y. Raghavendra ಇದರಿಂದ ಯಾರೂ ಸಹ ಟಿಕೆಟ್ ಹಂಚಿಕೆ ನಂತರ ವಿರೋಧ ವ್ಯಕ್ತಪಡಿಸುವುದಿಲ್ಲ. ಯಾರಾದರೂ ಬೇಸರ ವ್ಯಕ್ತಪಡಿಸಿದರೆ ಅದನ್ನು ಸರಿದೂಗಿಸುತ್ತೇವೆ. ಕಾಂತೇಶ್ ರವರಿಗೆ ಟಿಕೆಟ್ ಕೊಡಿಸಲು ಪ್ರಯತ್ನ ಮಾಡ್ತಾ ಇದ್ದೇವೆ. ಮತ್ತೊಮ್ಮೆ ದೆಹಲಿಗೆ ಹೋಗಿ ಪ್ರಯತ್ನ ಮುಂದುವರೆಸುತ್ತೇನೆ. ನನ್ನ ಕಡೆಯಿಂದ ಪ್ರಮಾಣಿಕ ಪಯತ್ನ ಮಾಡುತ್ತೇನೆ. ಟಿಕೆಟ್ ಯಾರಿಗೆ ನೀಡಬೇಕೆಂದು ಚುನಾವಣಾ ಸಮಿತಿ ತೀರ್ಮಾನ ಮಾಡಲಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga Postal Department ಅಂಚೆ ಇಲಾಖೆ ಜೀವವಿಮಾ ಏಜೆಂಟ್ ಆಗ ಬಯಸುವಿರ? ಈ ಮಾಹಿತಿ ನಿಮಗಾಗಿ

Shimoga Postal Department ಶಿವಮೊಗ್ಗ ಅಂಚೆ ಇಲಾಖೆಯಲ್ಲಿ ಅಂಚೆ ಜೀವ ವಿಮೆ...

Karnataka Forest Department ವಾಹನ ಸಂಚಾರದ ಹೆಚ್ಚಳ: ವನ್ಯಜೀವಿಗಳ ಮುಕ್ತ ಓಡಾಟಕ್ಕೆ ಅಡ್ಡಿಯಾಗಿ ಮಾನವ- ವನ್ಯಪ್ರಾಣಿ ಸಂಘರ್ಷ ಹೆಚ್ಚುತ್ತಿದೆ- ಕುಮಾರ್ ಪುಷ್ಕರ್

Karnataka Forest Department ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮಾನವ–ವನ್ಯಜೀವಿ...