Monday, August 24, 2026
Monday, August 24, 2026

B. Y. Raghavendra ಕಾಂತೇಶ್ ಗೆ ಹಾವೇರಿ ಟಿಕೆಟ್ ಗೆ ಪ್ರಯತ್ನಿಸುವೆ- ಬಿಎಸ್ ವೈ

Date:

B. Y. Raghavendra ಭಾನುವಾರದಂದು ನಡೆಯಬೇಕಾಗಿದ್ದ ದೆಹಲಿಯಲ್ಲಿ ಚುನಾವಣಾ ಸಮಿತಿ ಸಭೆ ಮುಂದೂಡಿಕೆ ಆಗಿದೆ. ಆದರಿಂದ ನಾನು ದೆಹಲಿಗೆ ಹೋಗುತ್ತಿಲ್ಲ. ಇದರಿಂದ ನಾಳೆ ಶಿವಮೊಗ್ಗದಲ್ಲೇ ಚುನಾವಣೆ ತಯಾರಿ‌ ನಡೆಸುತ್ತೇನೆ ಎಂದು ಬಿಜೆಪಿ ಕೇಂದ್ರೀಯ ಸಂಸದಿಯ ಮಂಡಳಿಯ ಸದಸ್ಯ ಬಿ.ಎಸ್.ಯಡಿಯೂರಪ್ಪ ಶಿವಮೊಗ್ಗದಲ್ಲಿ ತಿಳಿಸಿದ್ದಾರೆ.

ಲೋಕಸಭ ಚುನಾವಣೆ ಬಿಜೆಪಿಗೆ ವಾತಾವರಣ ತುಂಬಾ ಚೆನ್ನಾಗಿದೆ. 28 ಲೋಕಸಭ ಕ್ಷೇತ್ರದಲ್ಲಿ 25 ರಲ್ಲಿ ಗೆಲ್ಲಲು ಶ್ರಮ ಹಾಕುತ್ತೇವೆ. ಅದರಲ್ಲಿ ಯಶಸ್ವಿ ಆಗುವ ವಿಶ್ವಾಸವಿದೆ‌. ರಾಜಕೀಯ ಪಕ್ಷದಲ್ಲಿ ಸ್ವಾಭಾವಿಕ ಟಿಕೆಟ್ ಹಂಚಿಕೆಗೂ ಮುನ್ನ ಗೊಂದಲ ಇರುತ್ತದೆ. ಒಂದು ಸಲ ಪಟ್ಟಿ ಬಿಡುಗಡೆಯಾದ ಮೇಲೆ ಎಲ್ಲರೂ ಹೊಂದಿಕೊಂಡು ಹೋಗುತ್ತೇವೆ. ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನ ಮಂತ್ರಿ ಆಗಬೇಕು ಎಂಬುದು ನಮ್ಮ ಬಯಕೆ.

B. Y. Raghavendra ಇದರಿಂದ ಯಾರೂ ಸಹ ಟಿಕೆಟ್ ಹಂಚಿಕೆ ನಂತರ ವಿರೋಧ ವ್ಯಕ್ತಪಡಿಸುವುದಿಲ್ಲ. ಯಾರಾದರೂ ಬೇಸರ ವ್ಯಕ್ತಪಡಿಸಿದರೆ ಅದನ್ನು ಸರಿದೂಗಿಸುತ್ತೇವೆ. ಕಾಂತೇಶ್ ರವರಿಗೆ ಟಿಕೆಟ್ ಕೊಡಿಸಲು ಪ್ರಯತ್ನ ಮಾಡ್ತಾ ಇದ್ದೇವೆ. ಮತ್ತೊಮ್ಮೆ ದೆಹಲಿಗೆ ಹೋಗಿ ಪ್ರಯತ್ನ ಮುಂದುವರೆಸುತ್ತೇನೆ. ನನ್ನ ಕಡೆಯಿಂದ ಪ್ರಮಾಣಿಕ ಪಯತ್ನ ಮಾಡುತ್ತೇನೆ. ಟಿಕೆಟ್ ಯಾರಿಗೆ ನೀಡಬೇಕೆಂದು ಚುನಾವಣಾ ಸಮಿತಿ ತೀರ್ಮಾನ ಮಾಡಲಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...