Wednesday, December 17, 2025
Wednesday, December 17, 2025

Pradhan Mantri Suraksha Bima Yojana ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆ- ಅಪಘಾತ ಪರಿಹಾರಕ್ಕೆ ಅರ್ಜಿ ಸಲ್ಲಿಕೆಗೆ ಮಾ.31 ಗಡುವು

Date:

Pradhan Mantri Suraksha Bima Yojana ಇ-ಶ್ರಮ ಪೋರ್ಟಲ್ ಮೂಲಕ ನೊಂದಣಿಯಾದ ಅಸಂಘಟಿತ ಕಾರ್ಮಿಕ ಫಲಾನುಭವಿಗಳಿಗೆ ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ ಅಡಿ ರೂ.2 ಲಕ್ಷಗಳ ಅಪಘಾತ ಪರಿಹಾರಕ್ಕೆ ಅರ್ಜಿ ಸಲ್ಲಿಸಲು ಮಾ.31 ಅಂತಿಮ ದಿನವಾಗಿದೆ.

ಕೇಂದ್ರ ಸರ್ಕಾರವು ಅಸಂಘಟಿತ ಕಾರ್ಮಿಕರ ಸಮಗ್ರ ರಾಷ್ಟ್ರೀಯ ದತ್ತಾಂಶ(ಎನ್‍ಡಿಯುಡಬ್ಲ್ಯು) ಕ್ರೋಢೀಕರಿಸುವ ಉದ್ದೇಶದಿಂದ 379 ವರ್ಗಗಳ ಎಲ್ಲಾ ಅಸಂಘಟಿತ ಕಾರ್ಮಿಕರನ್ನು ಇ-ಶ್ರಮ ಪೋರ್ಟಲ್ ಮೂಲಕ ದಿ: 26-08-2021 ರಿಮದ ನೋಂದಾಯಿಸಲಾಗುತ್ತಿದ್ದು ದಿ: 31-03-2022 ರವರೆಗೆ ನೋಂದಣಿಯಾದ ಮತ್ತು ಸದರಿ ದಿನಾಂಕದೊಳಗೆ ಅಪಘಾತಕ್ಕೀಡಾದ ಫಲಾನುಭವಿಗಳಿಗೆ ಪರಿಹಾರಕ್ಕೆ ಅರ್ಜಿ ಸಲ್ಲಿಸಲು ಮಾ.31 ಅಂತಿಮ ದಿನವಾಗಿರುತ್ತದೆ.

Pradhan Mantri Suraksha Bima Yojana ಫಲಾನುಭವಿ ಆಧಾರ್ ಸಂಖ್ಯೆ, ಯುಎಎನ್ ಕಾರ್ಡ್(ಇ-ಶ್ರಮ್) ಸಂಖ್ಯೆ, ಮರಣ ಪ್ರಮಾಣ ಪತ್ರ, ಮರಣಕ್ಕೆ ಕಾರಣದ ವೈದ್ಯಕೀಯ ಪ್ರಮಾಣ ಪತ್ರ, ಎಫ್‍ಐಆರ್, ಪಂಚನಾಮ, ಇತರೆ ಸೂಕ್ತ ದಾಖಲಾತಿಗಳನ್ನು ಕಾರ್ಮಿಕ ಅಧಿಕಾರಿಗಳ ಕಚೇರಿ ಶಿವಮೊಗ್ಗ ಉಪ ವಿಭಾಗ, ಶಿವಮೊಗ್ಗ ಇಲ್ಲಿ ನೀಡಿ ಅರ್ಜಿ ಸಲ್ಲಿಸುವ ಮೂಲಕ ಈ ಯೋಜನೆ ಸದುಪಯೋಗ ಪಡೆಯಬೇಕೆಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಹೆಚ್ ಎಸ್ ಸುಮ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಡಿಸೆಂಬರ್ 18. ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಛೇರಿ,...

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...