Monday, May 4, 2026
Monday, May 4, 2026

Kerebete Movie ಮಲೆನಾಡಿನ ವಿಶೇಷತೆ ಬಿಂಬಿಸುವ ಸಿನಿಮಾ” ಕೆರೆಬೇಟೆ”

Date:

Kerebete Movie ಕೆರೆಬೇಟೆ ಮಾರ್ಚ್ 15ರಂದು ರಾಜ್ಯಾದ್ಯಂತ ಬಿಡುಗಡೆಗೊಂಡಿದೆ.

ಈಗಾಗಲೇ ಫಸ್ಟ್ ಲುಕ್ ಮತ್ತು ಟೀಸರ್ ಮೂಲಕ ಕುತೂಹಲ ಹೆಚ್ಚಿಸಿದೆ.

ಮಲೆನಾಡ ಬೊಂಬೆ ಪ್ರಾರಂಭವಾಗುವ ಈ ಹಾಡು ಅದ್ಭುತವಾಗಿ ಮೂಡಿ ಬಂದಿದೆ. ಹಾಡನ್ನು ನೋಡಿ ರಿಯಲ್ ಸ್ಟಾರ್ ಉಪೇಂದ್ರ ಕೂಡ ಫಿದಾ ಆಗಿದ್ದಾರೆ.

ಮಲೆನಾಡಿನ ಸುತ್ತಮುತ್ತಲಿನ ಪ್ರದೇಶದಲ್ಲಿ ಈ ಹಾಡಿನ ಚಿತ್ರೀಕರಣ ಮಾಡಿದ್ದಾರೆ. ಸ್ಯಾಂಡಲ್ ವುಡ್ ನಲ್ಲಿ ಜೋಕಾಲಿ, ರಾಜಹಂಸ ಚಿತ್ರಗಳಲ್ಲಿ ನಾಯಕರಾಗಿ ನಟಿಸಿದ್ದ ಗೌರಿಶಂಕರ್ ಕೆರೆ ಬೇಟೆ ಸಿನಿಮಾದಲ್ಲಿ ನಾಯಕನಾಗಿ ನಟಿಸಿದ್ದಾರೆ.

ಇನ್ನು ಕೆರೆ ಬೇಟೆ ಸಿನಿಮಾದ ಬಗ್ಗೆ ಗೌರಿಶಂಕರ್ ಅವರು ತಮ್ಮ ಅಭಿಪ್ರಾಯವನ್ನು ಹೀಗೆ ವ್ಯಕ್ತಪಡಿಸಿದ್ದಾರೆ. ನನಗೆ ಸಿನಿಮಾ ಮಾಡಬೇಕೆಂಬ ಶ್ರದ್ದೆ ಬಹಳ ವರ್ಷಗಳಿಂದ ಇದೆ. ಜೋಕಾಲಿ ಹಾಗೂ ರಾಜಹಂಸ ಸಿನಿಮಾಗಳಲ್ಲಿ ನಾನು ಅಂದುಕೊಂಡ ಮಟ್ಟಿಗೆ ಯಶಸ್ಸು ಕಾಣಲಿಲ್ಲ. ಅದಾದ ನಂತರ ಒಳ್ಳೆಯ ಸಿನಿಮಾ ಮಾಡಬೇಕೆಂಬ ಆಲೋಚನೆ ನನ್ನಲ್ಲಿತ್ತು. ಆಗ ನನಗೆ ನನ್ನ ಸ್ನೇಹಿತರು ನಿರ್ದೇಶಕ ರಾಜಗುರು ಅವರನ್ನು ಪರಿಚಯ ಮಾಡಿಕೊಟ್ಟರು. ಅವರು ಈ ಕಥೆಯ ಒಂದು ಎಳೆ ಹೇಳಿದರು. ನನಗೆ ಈ ಕಥೆ ಕೇಳಿದ ನಂತರ ಈ ಚಿತ್ರವನ್ನು ಮಾಡಬೇಕು ಎಂದೆನಿಸಿತು. ನಂತರದಲ್ಲಿ ನಾನು ಈ ಚಿತ್ರಕ್ಕೆ ಬಂಡವಾಳ ಕೂಡ ಕೂಡಲು ಸಿದ್ದನಾದೆನು ಎಂದು ಹೇಳಿದ್ದಾರೆ.

Kerebete Movie ಕೆರೆ ಬೇಟೆ ಸಿನಿಮಾದಲ್ಲಿ ಮಲೆನಾಡಿನ ವಿಶೇಷತೆಯನ್ನ ಹೆಚ್ಚಾಗಿ ಪ್ರದರ್ಶಿಸಲಾಗಿದೆ. ಬಹಳ ಮುಖ್ಯವಾಗಿ ಮಲೆನಾಡಿನ ಸೊಬಗ ನ್ನು ವರ್ಣಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...