Wednesday, March 25, 2026
Wednesday, March 25, 2026

K. S. Eshwarappa ಈಶ್ವರಪ್ಪ ಜೊತೆಗಿನ ಮಾತುಕತೆ ವಿಫಲ: ಮಧ್ಯದಲ್ಲೇ ಎದ್ದುಹೋದ ಈಶ್ವರಪ್ಪ

Date:

K. S. Eshwarappa ಬಂಡೆದ್ದಿರುವ ಮಾಜಿ ಸಚಿವ ಈಶ್ವರಪ್ಪನವರ ಜೊತೆ ಸಂಧಾನ ಮಾತುಕೆಗೆ ಬಂದಿದ್ದ ಬಿಜೆಪಿಯ ಕೇಂದ್ರ ನಾಯಕರಿಗೆ ಹಿನ್ನಡೆಯಾಗಿದೆ.
ಸಭೆಯ ನಡುವೆ ಎದ್ದು ಹೋಗಿದ್ದಾರೆ. ಇದರಿಂದ
ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ರಾಧಾರಾಮ್ ಅಗರ್ ವಾಲ್ ಅವರೊಂದಿನ ಮಾತುಕತೆ ಮುರಿದು ಬಿದ್ದಿದೆ.ಮಧ್ಯಾಹ್ನ
12 ಕ್ಕೆ ರಾಧಾರಾಮ್ ಅಗರ್ ವಾಲ್ ಈಶ್ವರಪ್ಪನವರೊಂದಿಗೆ ಮಾತನಾಡಲು ಅವರ ಮನೆಗೆ ಬಂದಿದ್ದರು. ಅವರೊಂದಿಗೆ ಮಾತುಕತೆಗೆ ಕುಳಿತಿದ್ದ ಈಶ್ವರಪ್ಪ ಸಭೆಯ ನಡುವೆ ಕಾರ್ಯಕ್ರಮದ ಹಿನ್ನಲೆಯಲ್ಲಿ ಎದ್ದು ಹೋಗಿದ್ದರು. ತೆರಳಿ ಸುಮಾರು 1 ಗಂಟೆಯ ವರೆಗೆ ಈಶ್ವರಪ್ಪನವರಿಗೆ ಕಾಯ್ದ ಅಗರ್ವಾಲ್ ತಂಡ ಈಶ್ವರಪ್ಪನವರ ಮನೆಯಿಂದ ಹೊರನಡೆದರು.
ಇದರಿಂದ ಈಶ್ವರಪ್ಪ ಜೊತೆಗಿನ ಸಂಧಾನ ಮಾತುಕತೆ ಮುರಿದುಬಿದ್ದಿದೆ.
ಈ ಬಗ್ಗೆ ಮಾತನಾಡಿದ ಸಂಘನಾ ಕಾರ್ಯದರ್ಶಿ ಒಂದು ತಿಂಗಳು ಕರ್ನಾಟಕಲ್ಲಿಯೇ ಇರುವೆ. ಸ್ನೇಹ ಮಾತುಕತೆಗಾಗಿ ಬಂದಿರುವೆ. ಈಶ್ವರಪ್ಪ ಮನೆಯವರ ಜೊತೆ ಚುನಾವಣೆ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಮಾತನಾಡಿರುವೆ ಎಂದು ಮಾತ್ರ ತಿಳಿಸಿದ್ದಾರೆ. ವಿಫಲವಾಗಿರುವ ಬಗ್ಗೆ ಮಾಹಿತಿ ನೀಡಿಲ್ಲ. ಈಶ್ವರಪ್ಪನವರು ಸಭೆಯ ನಡುವೆ ಎದ್ದು ಹೋಗಿರುವುದು ಮತ್ತು ಕಾದರೂ ಈಶ್ವರಪ್ಪ ಬಾರದ ಹಿನ್ನಲೆಯಲ್ಲಿ ಸಂಧಾನದ ಮಾತುಕತೆ ಉರಿದು ಬಿದ್ದಿದೆ ಎಂದೇ ಬಣ್ಣಿಸಲಾಗುತ್ತಿದೆ.
ಜಿಲ್ಲಾ ಬಿಜೆಪಿ ಸಂಘನಾ ಕಾರ್ಯದರ್ಶಿ ನಟರಾಜ್, ಎಂಎಲ್ ಸಿ ಅರುಣ್, ರಾಧಾರಾಮ್ ಅಗರ್ವಾಲ್ ರಿಗೆ ಸಾಥ್ ನೀಡಿದ್ದರು. ಸಂಧಾನ K. S. Eshwarappa ಮಾತುಕತೆ ಮುರಿದು ಬಿದ್ದ ಹಿನ್ನಲೆಯಲ್ಲಿ ಈಶ್ವರಪ್ಪನವರ ಸ್ಪರ್ಧೆ ಗಟ್ಟಿಯಾಗುತ್ತಿದೆ. ಇದುಬಿಎಸ್ ವೈ ಕುಟುಂಬಕ್ಕೆ ತಲೆನೋವಾಗಿ ಪರಿಣಮಿಸುತ್ತಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Prabhuling Kavalikatti ಅಸ್ಪೃಶ್ಯತೆ ನಿರ್ಮೂಲನೆಗೆ ಒತ್ತು ಜೊತೆಗೆ ಕಾಯಿದೆಯಡಿ ಕಟ್ಟುನಿಟ್ಟಿನ ಕ್ರಮ- ಪ್ರಭುಲಿಂಗ ಕವಳಿಕಟ್ಟಿ.

Prabhuling Kavalikatti ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲಿನ ದೌರ್ಜನ್ಯ ತಡೆ...

MESCOM ಮಾರ್ಚ್ 26. ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...

World Tuberculosis Day ಕ್ಷಯರೋಗಿಗಳು ದುಶ್ಚಟಗಳಿಂದ ದೂರವಿದ್ದು ,ಪೌಷ್ಠಿಕ ಆಹಾರ ಸೇವಿಸಿದರೆ ರೋಗ ವಾಸಿ- ಡಾ.ಕೆ.ಎಸ್.ನಟರಾಜ್.

World Tuberculosis Day ಸೂಕ್ತ ಚಿಕಿತ್ಸೆಯಿಂದ ಕ್ಷಯರೋಗದಿಂದ ಸಂಪೂರ್ಣರಾಗಿ ಗುಣಮುಖರಾಗಬಹುದಾಗಿದ್ದು, ಎಲ್ಲಾ...

Shimoga News ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳಿಸಿಕೊಳ್ಳಬೇಕು- ಎನ್.ಪ್ರಕಾಶ್

Shivamogga News ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸಲು ಮತ್ತು ಉನ್ನತ...