Thursday, March 19, 2026
Thursday, March 19, 2026

Arvind Kejriwal ಅಬಕಾರಿ ನೀತಿ ಪರಿಷ್ಕರಣೆ ಅಕ್ರಮ ಸಂಬಂಧ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬಂಧನ

Date:

Arvind Kejriwal ಅಬಕಾರಿ ನೀತಿ ಪರಿಷ್ಕರಣೆಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಬಂಧನದಿಂದ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್ ಗುರುವಾರ ನಿರಾಕರಿಸಿದ್ದು ಇದರ ಬೆನ್ನಲ್ಲೇ ಇಡಿ ಅಧಿಕಾರಿಗಳ ತಂಡ ದೆಹಲಿ ಮುಖ್ಯಮಂತ್ರಿ ನಿವಾಸಕ್ಕೆ ತೆರಳಿ ಮತ್ತೊಂದು ಸಮನ್ಸ್ ಜಾರಿ ಮಾಡಿ, ವಿಚಾರಣೆ ನಡೆಸಿ ಇದೀಗ ಬಂಧಿಸಿದೆ.

ಅರವಿಂದ್ ಕೇಜ್ರಿವಾಲ್ ಬಂಧನ
ಇಡಿಯಿಂದ ಕೇಜ್ರಿವಾಲ್ ವಿಚಾರಣೆ; ಬಂಧನ ಸಾಧ್ಯತೆ: ‘ಸುಪ್ರೀಂ’ ಮೊರೆ ಹೋದ ದೆಹಲಿ ಸಿಎಂ, ಭದ್ರತೆ ಹೆಚ್ಚಳ
ಇಡಿ ಅಧಿಕಾರಿಗಳ ತಂಡ ದೆಹಲಿ ಸಿಎಂ ನಿವಾಸಕ್ಕೆ ಆಗಮಿಸಿದ ಕಾರಣ, ಮುನ್ನೆಚ್ಚರಿಕೆ ಕ್ರಮವಾಗಿ ದೆಹಲಿ ಪೊಲೀಸರು ಭದ್ರತೆ ಹೆಚ್ಚಿಸಿದ್ದಾರೆ ಮತ್ತು ಸಿವಿಲ್ ಲೈನ್ಸ್‌ನಲ್ಲಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಬಳಿ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಿದ್ದಾರೆ. ಬ್ಯಾರಿಕೇಡ್‌ಗಳನ್ನು ಹಾಕಲಾಗಿದ್ದು, ಸಹಾಯಕ ಪೊಲೀಸ್ ಆಯುಕ್ತರ ಶ್ರೇಣಿಯ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.

Arvind Kejriwal ದೆಹಲಿ ಸಿಎಂ ನಿವಾಸದ ಬಳಿ ಮತ್ತು ಇಡಿ ಕಚೇರಿ ಬಳಿ ದೆಹಲಿ ಪೊಲೀಸ್ ಸಿಬ್ಬಂದಿಯೊಂದಿಗೆ RAF ಮತ್ತು CRPF ಪಡೆಗಳನ್ನು ನಿಯೋಜಿಸಲಾಗಿದೆ. ಸಿಎಂ ನಿವಾಸದ ಬಳಿ ಮತ್ತು ಇಡಿ ಕಚೇರಿ ಬಳಿ ಎಎಪಿ ಕಾರ್ಯಕರ್ತರು ಸೇರುವ ನಿರೀಕ್ಷೆ ಇರುವು ಹಿನ್ನೆಲೆಯಲ್ಲಿ ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇಡಿ ಹೆಚ್ಚುವರಿ ಭದ್ರತಾ ಕ್ರಮಗಳನ್ನು ಕೋರಿದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...