Monday, February 2, 2026
Monday, February 2, 2026

National Education Society ವಿದ್ಯಾರ್ಥಿ ವೇತನವನ್ನ ಸದ್ಬಳಕೆ ಮಾಡಿಕೊಳ್ಳಿ- ಜಿ.ಎಸ್.ನಾರಾಯಣ ರಾವ್

Date:

National Education Society ವಿದ್ಯಾರ್ಥಿ ವೇತನಗಳನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳುವುದರ ಮೂಲಕ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನದ ಮೌಲ್ಯ ಹೆಚ್ಚಿಸಬೇಕಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣರಾವ್ ಹೇಳಿದರು.
ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ಎನ್‌ಇಎಸ್ ಎಜುಕೇಷನ್ ಅಸಿಸ್ಟಾನ್ಸ್ ಟ್ರಸ್ಟ್ ವತಿಯಿಂದ ಸಂಸ್ಥೆಯ ಸಭಾಂಗಣದಲ್ಲಿ ಏರ್ಪಡಿಸಿದ್ದ ವಿವಿಧ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಆರ್ಥಿಕವಾಗಿ ಹಿಂದುಳಿದ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ 2023-24ನೇ ಸಾಲಿನ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ವೇತನ ವಿತರಿಸಿ ಮಾತನಾಡಿದರು.
ಸಾಧಿಸುವ ಕನಸಿಗಿಂತ, ಗೆಲ್ಲುವ ಮನಸ್ಸು ಮಾಡಬೇಕಿದೆ. ಸಾಧನೆಯ ಜೊತೆಯಲ್ಲಿ ಇತರರನ್ನು ಗೆಲ್ಲಿಸುವ ಹಂಬಲ ನಮ್ಮದಾಗಬೇಕಿದೆ. ವಿದ್ಯಾರ್ಥಿ ವೇತನ ಪಡೆದ ವಿದ್ಯಾರ್ಥಿಗಳು ಅವಕಾಶಗಳನ್ನು ಸದುಪಯೋಗ ಪಡಿಸಿಕೊಳಿ ಎಂದರು.


National Education Society ಎನ್‌ಇಎಸ್ ಎಜುಕೇಷನ್ ಅಸಿಸ್ಟಾನ್ಸ್ ಟ್ರಸ್ಟ್ ಅಧ್ಯಕ್ಷ ಟಿ.ಆರ್.ಅಶ್ವಥ ನಾರಾಯಣಶೆಟ್ಟಿ ಮಾತನಾಡಿ, ಕಳೆದ ಅನೇಕ ವರ್ಷಗಳಿಂದ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದ್ದು, ಸಣ್ಣ ಇಡಿಗಂಟಿನಿ0ದ ಪ್ರಾರಂಭವಾಗಿ ಇಂದು ಒಟ್ಟು ಇಪ್ಪತ್ತು ಲಕ್ಷ ರೂಪಾಯಿವರೆಗೆ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ ಎಂದು ಹೇಳಿದರು.
ಈ ಸಾಲಿನಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿಯ ವಿವಿಧ ವಿದ್ಯಾಸಂಸ್ಥೆಗಳ ಪ್ರಾಥಮಿಕದಿಂದ ಪದವಿಯ ವರೆಗಿನ ೩೨೦ ವಿದ್ಯಾರ್ಥಿಗಳಿಗೆ ಒಟ್ಟು ೨೦ ಲಕ್ಷ ರೂಪಾಯಿ ಮೊತ್ತದ ವಿದ್ಯಾರ್ಥಿ ವೇತನ ವಿತರಿಸಲಾಯಿತು.
ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ, ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್, ಖಜಾಂಚಿ ಡಿ.ಜಿ.ರಮೇಶ್, ನಿರ್ದೇಶಕರಾದ ಎನ್.ಟಿ.ನಾರಾಯಣರಾವ್, ಅನಂತದತ್ತ, ಕುಲಸಚಿವ ಪ್ರೊ.ಎನ್.ಕೆ.ಹರಿಯಪ್ಪ, ಶೈಕ್ಷಣಿಕ ಆಡಳಿತಾಧಿಕಾರಿ ಎ.ಎನ್.ರಾಮಚಂದ್ರ, ಲೆಕ್ಕಪತ್ರ ವಿಭಾಗದ ಸಂಜಯ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...