Saturday, October 5, 2024
Saturday, October 5, 2024

Apoorva Sangama ಓದುವ ಹವ್ಯಾಸ ಬೆಳೆಸುತ್ತಿರುವ “ಅಪೂರ್ವ ಸಂಗಮ”

Date:

Apoorva Sangama ಅಪೂರ್ವ ಸಂಗಮ ಎಂಬ ತಂಡವು ಶಿವಮೊಗ್ಗ ನಗರದ ಗಾಂಧಿ ಪಾರ್ಕ್ ನಲ್ಲಿ ಸಾಹಿತ್ಯಾಸಕ್ತ ಅಪರಿಚಿತರೆಲ್ಲ ನಿಗದಿತ ಕಾಲದಲ್ಲಿ ಸೇರಿ ಪರಿಚಿತರಾಗಿ ಓದುವ ಹವ್ಯಾಸವನ್ನು ಕೆಲವು ತಿಂಗಳುಗಳಿಂದ ನಡೆಸಿಕೊಂಡು ಬರುತ್ತಿದೆ. ಈ ಒಂದು ಭೇಟಿ ಕೇವಲ ಓದಿಗೆ ಮೀಸಲಾಗದೆ ಪ್ರಬಂಧ ಸ್ಪರ್ಧೆ, ಅಂಕಣ ಬರೆಯುವುದು, ಕಥೆ, ಕವನ ರಚನೆ ಹೀಗೆ ಸಾಹಿತ್ಯದ ಹಲವು ಮಗ್ಗಲುಗಳ ಮೇಲೆ ಸ್ಪರ್ಧೆ ಏರ್ಪಡಿಸಲಾಗುತ್ತದೆ. ತೀರ್ಪುಗಾರರಾಗಿ ಪರಿಣಿತಿ ಹೊಂದಿರುವ ವ್ಯಕ್ತಿಗಳಿಂದ ವಿಜೇತರನ್ನು ಆಯ್ಕೆ ಮಾಡಲಾಗುತ್ತದೆ. ವಿಜೇತರಿಗೆ ಪುಸ್ತಕವನ್ನು ಬಹುಮಾನವಾಗಿ ನೀಡಲಾಗುತ್ತಿದೆ. ಇದು ಒಂದು ಸ್ಪರ್ಧೆಯಾಗಿ ಉಳಿಯದೆ ತಂಡದ ಅನೇಕರಲ್ಲಿ ಬರೆಯುವ ಹುಮ್ಮಸ್ಸು ಹಾಗೂ ಧೈರ್ಯದಿಂದ ತಮ್ಮ ಅನುಭವಗಳನ್ನು ಬರೆಯಲು ಪ್ರೇರೇಪಿಸುತ್ತದೆ. ಪ್ರತಿ ಭೇಟಿಯಿಂದ ಭೇಟಿಗೆ ಹೊಸತನ ಹೊಸ ಹುರುಪಿನಿಂದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಈ ಬಾರಿಯ ಭೇಟಿಯಲ್ಲಿ ಸಾಹಿತ್ಯಾಸಕ್ತ ಓದುಗರು ಸೇರಿ ತಮ್ಮ ಆಸಕ್ತಿಯ ಪುಸ್ತಕವನ್ನು ಕೆಲಕಾಲ ಓದಿ ನಂತರ ಎಲ್ಲಾ ಸೇರಿ ತಮ್ಮ ಪರಿಚಯ ಮಾಡಿಕೊಂಡು ತಮ್ಮ ಅನುಭವಗಳನ್ನು ಹಂಚಿಕೊಂಡರು.

ಇದೇ ಸಂದರ್ಭದಲ್ಲಿ ಜನಪದ ಸಾಹಿತ್ಯದಲ್ಲಿ ಜೀವನದ ಮೌಲ್ಯಗಳು ಎಂಬ ವಿಷಯದ ಕುರಿತ ಲೇಖನ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಗೌಸ್ ಪೀರ್, ದ್ವಿತೀಯ ಬಹುಮಾನ ನವೀನ್ ಚಂದ್ರ ಹಾಗೂ ಅಕ್ಷತಾ ಜೊತೆಗೆ ಹಳ್ಳಿಗಳ ವಿಕಾಸ ಯೋಜನೆಯಲ್ಲಿ ಪರಿಸರ ನಾಶ ಎಂಬ ವಿಷಯದ ಕುರಿತ ಲೇಖನ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ನವೀನ್ ಚಂದ್ರ, ದ್ವಿತೀಯ ಬಹುಮಾನ ಗೌಸ್ ಪೀರ್, ತೃತೀಯ ಬಹುಮಾನವನ್ನು ಅಕ್ಷತಾರವರಿಗೆ ಪುಸ್ತಕ ರೂಪದಲ್ಲಿ ಅಪೂರ್ವ ಸಂಗಮ ತಂಡದ ಮುಖ್ಯಸ್ಥರಾದ ಹಾಗೂ ಕಾರ್ಯಕ್ರಮದ ಆಯೋಜಕರಾದ ಗುರುದತ್ತ್ ನೀಡಿದರು.

Apoorva Sangama ನಂತರ ಶುಚಿತ್ವ ಕಾಪಾಡುವ ನಿಟ್ಟಿನಲ್ಲಿ ನದಿ ತೀರದಲ್ಲಿ ಸ್ವಚ್ಛತೆ ಮಾಡುವ ಬಗ್ಗೆ ಹಾಗೂ ಜನರಿಗೆ ನದಿಯ ಪ್ರಾಮುಖ್ಯತೆಯ ಅರಿವು ಮೂಡಿಸುವ ಬಗ್ಗೆ ಚರ್ಚೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಹಲವು ಕಾಲೇಜಿನ ವಿದ್ಯಾರ್ಥಿಗಳು, ಸಾಹಿತ್ಯಾಸಕ್ತರು ಹಾಗೂ ಅನೇಕ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಓದುಗರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಅಕ್ಟೋಬರ್ 7 ರಂದು ಆಲ್ಕೊಳ‌ ಸುತ್ತಮುತ್ತ ವಿದ್ಯುತ್ ಸರಬರಾಜು ಇರುವುದಿಲ್ಲ

MESCOM ಶಿವಮೊಗ್ಗ ಅಕ್ಟೋಬರ್ 05 (ಕರ್ನಾಟಕ ವಾರ್ತೆ): ಶಿವಮೊಗ್ಗ...

Nehru Stadium Shimoga ಪ್ರಾಥಮಿಕ ಶಾಲಾಮಕ್ಕಳ ಕ್ರೀಡಾಕೂಟ ಉದ್ಘಾಟನೆ

Nehru Stadium Shimoga ನೆಹರು ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಪನಿರ್ದೇಶಕರ...

Shimoga Dasara 2024 ಶಿವಮೊಗ್ಗ ರಂಗದಸರಾದಲ್ಲಿ ಅ.5 ರಿಂದ ನಾಟಕ ಪ್ರದರ್ಶನಗಳ ಸುಗ್ಗಿ

Shimoga Dasara 2024 ಈ ಬಾರಿ ಶಿವಮೊಗ್ಗ ಮಹಾನಗರ ಪಾಲಿಕೆಯು ಆಯೋಜನೆ...

Shivamogga News ಕೆರೆ,ಕಟ್ಟೆ,ಹಳ್ಳ ಜಮೀನು ಇತರೆ ಸರ್ಕಾರದ ಸ್ವತ್ತು ಒತ್ತುವರಿ ಗಮನಕ್ಕೆ ಬಂದಾಕ್ಷಣ ಕ್ರಮ ಕೈಗೊಳ್ಳಿ-ನ್ಯಾ.ಬಿ.ಎ.ಪಾಟೀಲ್

Shivamogga News ಸರ್ಕಾರದ ಸ್ವತ್ತಿನ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದ್ದು...