Saturday, April 4, 2026
Saturday, April 4, 2026

Death News ಸುಟ್ಟಕಾರಿನ ನಂಬರ್ ಪ್ಲೇಟ್ ಸುಳಿವಿನ ಮೂಲಕಕೊಲೆಗಡುಕರ ಬೆನ್ನುಬಿದ್ದ ಪೊಲೀಸ್

Date:

Death News ಕುಚ್ಚಂಗಿ ಕೆರೆಯಲ್ಲಿ ಸಿಕ್ಕ ಕಾರಿನಲ್ಲಿ ಮೂರು ಮೃತದೇಹ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಗಾರದ ಆಸೆಗೆ ಬಿದ್ದು ಪ್ರಾಣ ಕಳೆದುಕೊಂಡಿರುವಿದು ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ತುಮಕೂರಿನ ಕುಚ್ಚಂಗಿ ಕೆರೆ ಸಮೀಪ ಸುಟ್ಟುಕರಕಲಾದ ಸ್ಥಿತಿಯಲ್ಲಿ ಕಾರೊಂದು ಪತ್ತೆಯಾಗಿತ್ತು. ಕಾರಿನಲ್ಲಿ ಮೂರು ಮೃತದೇಹಗಳೂ ಕೂಡ ಪತ್ತೆಯಾಗಿದ್ದವು. ಮೃತರನ್ನು ಇಸಾಕ್ (56), ಸಾಹುಲ್ (45), ಇಮ್ಮಿಯಾಜ್ (34) ಎಂದು ಗುರ್ತಿಸಲಾಗಿದೆ. ಪ್ರಕರಣದ ತನಿಖೆ ಕೈಗೊಂಡ ಪೊಲೀಸರು 6 ಮಂದಿ ಆರೋಪಿಗಳನ್ನು ಬಂಧಿಸಿದ್ದು, ಆರೋಪಿಗಳು ಮೂವರನ್ನು ಚಿನ್ನದಾಸೆ ತೋರಿಸಿ ಹತ್ಯೆ ಮಾಡಿದ್ದಾರೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಜಮೀನಿನಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದ್ದು, ಕಡಿಮೆ ಬೆಲೆಗೆ ಚಿನ್ನ ಕೊಡಿಸುವುದಾಗಿ ಆರೋಪಿಗಳು ಮೂವರನ್ನು ಕರೆಸಿಕೊಂಡಿದ್ದಾರೆ.
ಚಿನ್ನದ ಆಸೆಗೆ ಬಿದ್ದಿದ್ದ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯಿಂದ ತುಮಕೂರಿಗೆ ರಿಯಲ್ ಎಸ್ಟೇಟ್ ಕೆಲಸ ಮಾಡುತ್ತಿದ್ದ ಮೃತ ಇಸಾಕ್ ಹಾಗೂ ಆತನ ಸ್ನೇಹಿತರಾದ ಸಾಹುಲ್ ಹಾಗೂ ಇಮ್ಮಿಯಾಜ್ ಬಂದಿದ್ದಾರೆ. ಆರೋಪಿಗಳು ಮೃತರ ನಡುವೆ 1ಕೋಟಿ ರೂ ನಷ್ಟು ವಹಿವಾಟು ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಇದರಂತೆ ಒಪ್ಪಂದ ಮಾಡಿಕೊಳ್ಳಲು ಗುರುವಾರ ರಾತ್ರಿಯೇ ಮೃತರ ಆರೋಪಿಗಳನ್ನು ಭೇಟಿ ಮಾಡಲು ಬಂದಿದ್ದಾರೆ. ಈ ವೇಳೆ ಹಂತಕರು ನಕಲಿ ಚಿನ್ನ ತೋರಿಸಿ, ಹಣ ದೋಚಲು ಮುಂದಾಗಿದ್ದರು. ಈ ಮೂವರನ್ನು ಜನರಿಲ್ಲದ ಪ್ರದೇಶಕ್ಕೆ ಕರೆದೊಯ್ದು ಅಲ್ಲಿ ಕೈ ಕಾಲು ಕಟ್ಟಿ ಕೊಲೆ ಮಾಡಿದ್ದಾರೆ. ನಂತರ ಅದೇ ಕಾರಿನ ಡಿಕ್ಕಿಯಲ್ಲಿ ಇಬ್ಬರ ಮೃತದೇಹ ಹಾಗೂ ಕಾರಿನ ಮಧ್ಯಭಾಗದ ಸೀಟಿನಲ್ಲಿ ಮತ್ತೊಬ್ಬನ ಮೃತದೇಹ ಇಟ್ಟು ಕುಚ್ಚಂಗಿ ಕೆರೆಯ ಬಳಿ ತಂದಿರಿಸಿ ಕಾರಿಗೆ ಬೆಂಕಿ ಹಚ್ಚಿದ್ದಾರೆ. ಶವ ಸಹಿತ ಸುಟ್ಟು ಹೋದರೆ ಗುರುತು ಪತ್ತೆ ಸಾಧ್ಯವಾಗದು ಎಂಬ ಲೆಕ್ಕ ಹಾಕಿದ್ದರು.

Death News ಆದರೆ ಕಾರಿನ ನಂಬರ್ ಆಧರಿಸಿ ಮಾಲೀಕನನ್ನು ಪೊಲೀಸರು ಸಂಪರ್ಕಸಿದಾಗ, 15 ದಿನಗಳ ಹಿಂದೆ ಕಾರು ಕೊಟ್ಟಿದ್ದಾಗಿ ತಿಳಿಸಿದ್ದ. ಇಸಾಕ್ ವಿಷಯ ತಿಳಿಯುತ್ತಲೇ ಮೂವರ ಗುರುತು ಪತ್ತೆಯಾಗಿತ್ತು. ಸದ್ಯ ಪ್ರಕರಣ ಸಂಬಂಧಿಸಿ ಪ್ರಮುಖ ಆರೋಪಿ ಸ್ವಾಮಿ ಸೇರಿ 6 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತುಮಕೂರು ತಾಲೂಕಿನ ಕೋರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ನಗರದ ಜನತೆಗೆ ಕುಡಿಯುವ ನೀರಿನ ಸೌಲಭ್ಯದಲ್ಲಿ ಯಾವುದೇ ವ್ಯತ್ಯಯವಾಗಬಾರದು- ಎಸ್.ಎನ್.ಚನ್ನಬಸಪ್ಪ

S.N. Channabasappa ಕುಡಿಯುವ ನೀರಿನ ಪಂಪ್ ಹೌಸ್‌ಗೆ ಶಾಸಕ ಎಸ್.ಎನ್. ಚನ್ನಬಸಪ್ಪ...

Klive Special Article ಶ್ರೀಬಿಷ್ಟಪ್ಪಯ್ಯನವರು

ಲೇ: ಪ್ರಸಾದ್ ಶ್ರೀವತ್ಸ. Klive Special Article ಭಾರತವೆಂದರೆ ಅದು ಕೇವಲ ದೇಶವಲ್ಲ ಅದೆಷ್ಟೋ...

B.Y. Vijayendra ದಾವಣಗೆರೆ ಚುನಾವಣೆ: ಬಿಜೆಪಿ ಅಭ್ಯರ್ಥಿಗೇ ಗೆಲುವು- ಬಿ.ವೈ.ವಿಜಯೇಂದ್ರ.

B.Y. Vijayendra  ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಾಧ್ಯಮ ಮಿತ್ರರೊಂದಿಗೆ...

Drinking water supply ಗಮನಿಸಿ!.ಏಪ್ರಿಲ್ 4 & 5 ರಂದುಶಿವಮೊಗ್ಗ ನಗರದಲ್ಲಿ ಹಲವೆಡೆ ನೀರು ಸರಬರಾಜು ವ್ಯತ್ಯಯ.

Drinking water supply ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ವಿದ್ಯುತ್ ಸರಬರಾಜು ಮಾಡುವ...