Monday, May 4, 2026
Monday, May 4, 2026

Rotary Club Shivamogga ಸಾಧಕರಿಗೆ ರೋಟರಿ ಮಲೆನಾಡು ವತಿಯಿಂದ ಸನ್ಮಾನ

Date:

Rotary Club Shivamogga ವೈದ್ಯರಾಗಬೇಕೆಂಬ ಕನಸು ಕಂಡಿರುವ ಮಲೆನಾಡು ಭಾಗದ ವಿದ್ಯಾರ್ಥಿಗಳಿಗೆ ಅನುಕೂಲ ಆಗಲು ಶಿವಮೊಗ್ಗ ನಗರದಲ್ಲಿ ಆರಂಭವಾಗುತ್ತಿರುವ ಶಿಕ್ಷಣ ಸಂಸ್ಥೆ ದೇಶ್ ನೀಟ್ ಅಕಾಡೆಮಿಯ ರೂವಾರಿ ಅವಿನಾಶ್ ಅವರನ್ನು ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ವತಿಯಿಂದ ಸನ್ಮಾನಿಸಲಾಯಿತು.

ಮಲೆನಾಡಿನಲ್ಲೇ ಜನಿಸಿದ ಅವಿನಾಶ್ ಅವರು ಸ್ವತಃ ಭೌತಶಾಸ್ತ ಉಪನ್ಯಾಸಕರಾಗಿದ್ದು, ಸಾವಿರಾರು ವಿದ್ಯಾರ್ಥಿಗಳ ಮನಗೆದ್ದಿರುವ ಉಪನ್ಯಾಸಕರಾಗಿದ್ದು, ಶಿವಮೊಗ್ಗದ ವಿದ್ಯಾರ್ಥಿಗಳಿಗೆ ಅನುಕೂಲವಾಗಲು ತರಬೇತಿ ಸಂಸ್ಥೆ ಸ್ಥಾಪಿಸಿದ್ದಾರೆ ಎಂದು ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ಸಂಸ್ಥೆ ಅಧ್ಯಕ್ಷ ಸಿ.ರಾಜು ಹೇಳಿದರು.

ನೀಟ್ ತರಬೇತಿಗಾಗಿ ಲಕ್ಷಾಂತರ ರೂಪಾಯಿ ವ್ಯಯಿಸಿ ಬೆಂಗಳೂರು, ಮಂಗಳೂರು, ಕೋಟ ಮುಂತಾದ ಸ್ಥಳಗಳಿಗೆ ಹೋಗಿ ಅನೇಕ ಅನಾನುಕೂಲತೆಗಳನ್ನು ಅನುಭವಿಸುವ ಬದಲು ನೀಟ್ ಪರೀಕ್ಷಾರ್ಥಿಗಳಿಗೆ ಶಿವಮೊಗ್ಗದಲ್ಲೇ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಕೋಟಾದ ಸಂಸ್ಥೆಗಳಿಂದಲೇ ನುರಿತ ತರಬೇತುದಾರರನ್ನು ಕರೆಸಿ ತರಬೇತಿ ಕೊಡುವ ಸದಾಶಯದೊಂದಿಗೆ ದೇಶ್ ಅಕಾಡೆಮಿ ಆರಂಭಿಸುತ್ತಿದ್ದಾರೆ ಎಂದು ತಿಳಿಸಿದರು.

Rotary Club Shivamogga ದಶಕಕ್ಕೂ ಹೆಚ್ಚು ಕಾಲದಿಂದ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಇವರು ಹೊಸ ಆಲೋಚನೆಗಳೊಂದಿಗೆ ಮಲೆನಾಡಿನ ಭಾಗದ ವಿದ್ಯಾರ್ಥಿಗಳಿಗೆ ವಿಶಿಷ್ಠ ಕೊಡುಗೆ ನೀಡುತ್ತಿದ್ದಾರೆ. ಸಂಸ್ಥೆಯ ಸದಾಶಯಗಳನ್ನು ಶೀಘ್ರದಲ್ಲೇ ಜನಮನ ತಲುಪುವಂತೆ ಮಾಡಲು ವಿನೂತನ ಕಾರ್ಯಕ್ರಮವನ್ನು ಸಹ ಆಯೋಜಿಸಲಿದ್ದಾರೆ. ಇದರ ಜೊತೆಯಲ್ಲಿ ಅವಿನಾಶ್ ಅವರು ‘ವಿಧಾತ್ರಿ ಭವನ್’ ಹೋಟೆಲ್ ಉದ್ಯಮವನ್ನು ಸ್ಥಾಪಿಸಿ ಶಿವಮೊಗ್ಗದ ಆಹಾರ ಪ್ರಿಯರ ಮನವನ್ನು ಗೆದ್ದಿರುವುದು ಕೂಡ ಶ್ಲಾಘನೀಯ ಎಂದರು.

ಸನ್ಮಾನ ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ಸಂಸ್ಥೆ ಅಧ್ಯಕ್ಷ ಸಿ.ರಾಜು, ಕಾರ್ಯದರ್ಶಿ ಪ್ರಕಾಶ್ ಮೂರ್ತಿ, ರೋಟರಿ ಮಂಜುಳಾ ರಾಜು ಹಾಗೂ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...