Monday, February 2, 2026
Monday, February 2, 2026

Lok Sabha Election ಲೋಕಸಭೆಗೆ ಪಕ್ಷೇತರನಾಗಿ ಮಂಜಪ್ಪ ಹಿರೇನೆಲ್ಲೂರು ಕಣಕ್ಕೆ

Date:

Lok Sabha Election ನಾನೊಬ್ಬ ರೈತನಾಗಿ, ರೈತ ಹೋರಾಟಗಾರನಾಗಿ ಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತೇನೆ ಎಂದು ರೈತ ಸಂಘದ ತಾಲ್ಲೂಕು ಅಧ್ಯಕ್ಷ ಎಚ್.ಬಿ.ಮಂಜಪ್ಪ ಹಿರೇನೆಲ್ಲೂರು ತಿಳಿಸಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೊಡ್ಡವರು ಎಂದು ಹೇಳಿಕೊಂಡವರಿಂದ ಯಾವುದೇ ಗ್ರಾಮೀಣ ಭಾಗದ ಸಮಸ್ಯೆ ಬಗೆಹರಿಯುವುದಿಲ್ಲ. ಅವರಿಗೆ ಕೇವಲ ಪಟ್ಟಣದ ಸಮಸ್ಯೆ ಮಾತ್ರ ಗೊತ್ತು. ನನಗೆ ಪ್ರತಿ ರೈತನ ಮನೆಯ ಸಮಸ್ಯೆಯ ಅರಿವಿದೆ. ಗ್ರಾಮೀಣ ರೈತರ ದನಿಯಾಗಿ ನಾನು ಸ್ಪರ್ಧಿಸುತ್ತಿದ್ದೇನೆ ಎಂದರು.
ಚುನಾವಣೆ ಪ್ರಜಾಪ್ರಭುತ್ವದ ಹಬ್ಬ ಅಲ್ಲ, ಇದೊಂದು ಪ್ರಜಾಪ್ರಭುತ್ವಕ್ಕೆ, ಸಂವಿಧಾನಕ್ಕೆ ಧಕ್ಕೆ ಬಾರದ ಹಾಗೆ ನಡೆಯುವ ಜಾಗೃತಿ ಕಾರ್ಯಕ್ರಮ. ಮತದಾರರು ಸಮಾಲೋಚನೆ ಮಾಡಿ ಮತ ಚಲಾಯಿಸಬೇಕು. ಒಂದೇ ಪಕ್ಷಕ್ಕೆ ನಿರಂತರ ಮತ ಕೊಡುವುದು ಅಪಾಯಕಾರಿ ಬೆಳವಣಿಗೆ. ಪಕ್ಷೇತರ ಅಭ್ಯರ್ಥಿಯಾದರೆ ಯಾವುದೇ ತೊಂದರೆಯಿಲ್ಲ ಎಂದರು.
Lok Sabha Election ರೈತರ, ಕೂಲಿ ಕಾರ್ಮಿಕರ ಕಷ್ಟಗಳು ನನಗೆ ಗೊತ್ತಿವೆ. ಪ್ರತಿ ಪ್ರಜೆಯೂ ವಿಶ್ವ ಮಾನವನಾಗಬೇಕು. ಭಾರತದ ೧೪೦ ಕೋಟಿ ಜನರು ಸಮೃದ್ಧವಾಗಿ ಬದುಕಲು ಆರ್ಥಿಕ ಮಟ್ಟ ಹೆಚ್ಚಿಸುವ ಪ್ರಯತ್ನ ಮಾಡುತ್ತೇನೆ ಎಂದರು.
ಗ್ರಾಮ ಮಟ್ಟದಲ್ಲಿ ಕೆಲಸ ಮಾಡುವ ಅಗತ್ಯವಿದೆ
ಸಂಘದ ಪ್ರಮುಖರಾದ ಎಂದರು.
ದೇವು, ರಾಜು ತೊರಗೋಡು, ದಿನೇಶ್ ಕಾನುಗೋಡು, ಮಂಜಯ್ಯ ಕರೂರು, ರಮೇಶ್ ಐಗಿನಬೈಲು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...