Friday, March 20, 2026
Friday, March 20, 2026

World Theatre Day  ವಿಶ್ವರಂಗಭೂಮಿ ದಿನಾಚರಣೆ ಪ್ರಯುಕ್ತ ಶಿವಮೊಗ್ಗದಲ್ಲಿ ರಂಗಚಿಂತನ ಕಾರ್ಯಕ್ರಮ

Date:

World Theatre Day  ವಿಶ್ವರಂಗಭೂಮಿ ದಿನಾಚರಣೆಯ ಪ್ರಯುಕ್ತ ರಂಗಾಯಣ ಶಿವಮೊಗ್ಗದಲ್ಲಿ ರಂಗಚಿಂತನ ಕಾರ್ಯಕ್ರಮ ನಡೆಯಿತು.

ಈ ಕಾರ್ಯಕ್ರಮವನ್ನು ಹಿರಿಯ ರಂಗಕರ್ಮಿಗಳಾದ ಪುರುಷೋತ್ತಮ ತಲವಾಟರವರು ಮೇಕಪ್ ಮಾಡುವ ಮೂಲಕ ವಿಭಿನ್ನವಾಗಿ ಉದ್ಘಾಟಿಸಿದರು.

ಈ ವರ್ಷದ ವಿಶ್ವರಂಗಭೂಮಿ ಸಂದೇಶವನ್ನು ರಂಗಸಮಾಜದ ಮಾಜಿ ಸದಸ್ಯ, ರಂಗಕರ್ಮಿ ಆರ್.ಎಸ್. ಹಾಲಸ್ವಾಮಿ ವಾಚನ ಮಾಡಿದರು.

ರಂಗಾಯಣದ ಆಡಳಿತಾಧಿಕಾರಿ ಡಾ.ಶೈಲಜಾರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಆಂಗಿಕಾ ಅಭಿನಯದ ಕುರಿತು ನೃತ್ಯಗುರು ಸಹನ ಚೇತನ್, ವಾಚಿಕ ಕುರಿತು ರಂಗಕರ್ಮಿ ಚೇತನ್ ಕುಮಾರ್ ಸಿ.ರಾಯನಹಳ್ಳಿ, ಆಹಾರ್ಯ ಕುರಿತು ಹಿರಿಯ ರಂಗಕರ್ಮಿ ಪುರುಷೋತ್ತಮ ತಲವಾಟ, ಸಾತ್ವಿಕ ಕುರಿತು ಶ್ರೀಹರ್ಷ ಗೋಭಟ್ ಪ್ರಾತ್ಯಕ್ಷಿಕೆ ನೀಡಿದರು.

World Theatre Day  ಕಾರ್ಯಕ್ರಮದ ಅಂತ್ಯದಲ್ಲಿ ಡಾ.ಸಾಸ್ವೆಹಳ್ಳಿ ಸತೀಶ್ ನಿರ್ದೇಶನದಲ್ಲಿ ಸದಭಿರುಚಿ ತಂಡದವರು ‘ಆನು ಒಲಿದಂತೆ ಹಾಡುವೆ’ ನಾಟಕ ಪ್ರದರ್ಶನ ನೀಡಿದರು. ರಂಗಾಯಣದ ಆಡಳಿತಾಧಿಕಾರಿಗಳಾದ ಡಾ.ಶೈಲಜಾ, ರಂಗಸಮಾಜದ ಮಾಜಿ ಸದಸ್ಯ ಹಾಲಸ್ವಾಮಿ ಆರ್.ಎಸ್. ನೃತ್ಯ ಗುರು ಸಹನಾ ಚೇತನ್, ನಮ್ಮ ಹಳ್ಳಿ ಥಿಯೇಟರ್ ನ ಅದ್ಯಕ್ಷ ಚೇತನ್ ಸಿ.ರಾಯನಹಳ್ಳಿ, ಕತ ತಂಡದ ಶ್ರಿಹರ್ಷ, ರಂಗಕರ್ಮಿ ಮಂಜುನಾಥ ಸ್ವಾಮಿ.ಎಸ್, ಪ್ರತೀಕ್.ಸಿ.ಎಂ ಹಾಗೂ ರಂಗಾಯಣ ಶಿವಮೊಗ್ಗದ ಸಿಬ್ಬಂದಿ ವರ್ಗದವರು ಮತ್ತು ಹಲವು ಬಿ.ಇಡಿ ಕಾಲೇಜಿನ ಪ್ರಶಿಕ್ಷಣಾರ್ಥಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...