Wednesday, July 8, 2026
Wednesday, July 8, 2026

Lok Sabha Elections 2024 ಮಾಜಿ ಸಚಿವ ಕಾಂಗ್ರೆಸ್ ನ ಶಿವಶಂಕರ ರೆಡ್ಡಿ ರಾಜಿನಾಮೆ ಇಂಗಿತ

Date:

Lok Sabha Elections 2024 ಮಾಜಿ ಕೃಷಿ ಸಚಿವ, ಕಾಂಗ್ರೆಸ್ ನ ನಾಯಕ ಎನ್ ಹೆಚ್ ಶಿವಶಂಕರ ರೆಡ್ಡಿ ಕಾಂಗ್ರೆಸ್ ಪಕ್ಷ ತೊರೆಯಲು ನಿರ್ಧರಿಸಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ತಮಗೆ ಟಿಕೆಟ್ ಸಿಗದೇ ಇದ್ದಲ್ಲಿ ಪಕ್ಷ ತೊರೆಯುವುದಕ್ಕೆ ಶಿವಶಂಕರ ರೆಡ್ಡಿ ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಮಾತನಾಡಿರುವ ಮಾಜಿ ಸಚಿವರು, ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುವವರೆಗೂ ಕಾಯುವುದಾಗಿ ತಿಳಿಸಿದ್ದಾರೆ.

ಟಿಕೆಟ್ ವಿಷಯವಾಗಿ ರಾಜಿಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ಟಿಕೆಟ್ ಸಿಗದೇ ಇದ್ದಲ್ಲಿ ಪಕ್ಷ ತೊರೆಯುತ್ತೇನೆ ಎಂದು ಹೇಳಿದ್ದಾರೆ.

ದಶಕಗಳಿಂದ ತಾವು ಕಾಂಗ್ರೆಸ್ ಪಕ್ಷದ ನಿಷ್ಠಾವಂತರಾಗಿರುವುದಾಗಿ ಹೇಳಿರುವ ಶಿವಶಂಕರ ರೆಡ್ಡಿ, ತಾಲೂಕು ಪಂಚಾಯತ್ ಸದಸ್ಯರಾಗಿದ್ದಾಗಿನಿಂದ ಗೌರಿಬಿದನೂರು ವಿಧಾನಸಭಾ ಕ್ಷೇತ್ರದಿಂದ 5 ಬಾರಿ ಆಯ್ಕೆಗೊಂಡಾಗಿನವರೆಗೂ ನಾನು ಕಾಂಗ್ರೆಸ್ ನಲ್ಲಿಯೇ ಇದ್ದೇನೆ, ಪಕ್ಷ ನನ್ನನ್ನು ಕೃಷಿ ಸಚಿವನನ್ನಾಗಿ, ಉಪಸಭಾಧ್ಯಕ್ಷನನ್ನಾಗಿ ಗುರುತಿಸಿದೆ.

Lok Sabha Elections 2024 ಎಲ್ಲಾ ಸಮಯಗಳಲ್ಲೂ ನಾನು ಪಕ್ಷದ ನಿಷ್ಠಾವಂತನಾಗಿದ್ದೆನೆ ಎಂದು ಶಿವಶಂಕರ ರೆಡ್ಡಿ ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...

B.Y. Raghavendra ಮನೆ ಬಾಗಿಲಿಗೆ ಬರುವ ಬೂತ್ ಮಟ್ಟದ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ಮತ್ತು ದಾಖಲೆಗಳನ್ನುನೀಡಿ- ಬಿ.ವೈ.ರಾಘವೇಂದ್ರ

B.Y. Raghavendra ರಾಜ್ಯಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ...