Wednesday, September 16, 2026
Wednesday, September 16, 2026

Lok Sabha Election ಲೋಕಸಭಾ ಚುನಾವಣೆಯಲ್ಲಿ ಸಿದ್ಧರಾಮಯ್ಯನವರ ಗರ್ವಭಂಗ ಆಗಬೇಕು- ಮಾಜಿ ಪ್ರಧಾನಿ ದೇವೇಗೌಡರು

Date:

Lok Sabha Election ಬೆಂಗಳೂರಿನಲ್ಲಿ ನಡೆದ ಲೋಕಸಭಾ ಚುನಾವಣಾ ಮುಖಂಡರ ಸಭೆಯಲ್ಲಿ ಪಾಲ್ಗೊಂಡಿದ್ದ ಜಾತ್ಯತೀತ ಜನತಾದಳ (ಜೆಡಿಎಸ್) ರಾಷ್ಟ್ರೀಯ ಅಧ್ಯಕ್ಷರಾದ ಎಚ್‌ಡಿ ದೆವೇಗೌಡ ಅವರು, ಮಂಡ್ಯ ಜೆಡಿಎಸ್ ಅಭ್ಯರ್ಥಿ ಹಾಗೂ ಮೈಸೂರು ಮತ್ತು ಚಾಮರಾಜನಗರ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡುವಂತೆ ಮುಖಂಡರಲ್ಲಿ ಮನವಿ ಮಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ ಅವರು, ನರೇಂದ್ರ ಮೋದಿ ಅವರು ದುರ್ಬಲ ಪ್ರಧಾನಮಂತ್ರಿ, ನಾನು ಪ್ರಬಲ ಸಿಎಂ ಎಂದು ಕೊಚ್ಚಿಕೊಂಡ ಸಿದ್ದರಾಮಯ್ಯ ಅವರ ಗರ್ವಭಂಗ ಈ ಲೋಕಸಭೆ ಚುನಾವಣೆಯಲ್ಲಿ ಆಗಬೇಕು ಎಂದು ಗುಡುಗಿದ್ದಾರೆ.

Lok Sabha Election ಜೆಡಿಎಸ್-ಬಿಜೆಪಿ ಸಮನ್ವಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ನರೇಂದ್ರ ಮೋದಿಯಂತಹ ಜಗಮೆಚ್ಚಿದ ನಾಯಕರ ಬಗ್ಗೆ ಲಘುವಾಗಿ ಮಾತನಾಡಿರುವ ಸಿದ್ದರಾಮಯ್ಯ ಅವರಿಗೆ ಈ ಚುನಾವಣೆಯಲ್ಲಿ ಪಾಠ ಕಲಿಸಬೇಕು. ಮೈಸೂರಿನಲ್ಲಿ ಮೈತ್ರಿ ಅಭ್ಯರ್ಥಿ ಗೆಲ್ಲಿಸಿ, ಸಿದ್ದರಾಮಯ್ಯ ಗರ್ವಭಂಗ ಮಾಡಿ’ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕರು, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾದ ಜಿಟಿ ದೇವೇಗೌಡರಿಗೆ ನಿರ್ದೇಶನ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...