Monday, February 2, 2026
Monday, February 2, 2026

Vadiraja Tirtha ಏಪ್ರಿಲ್ 10 ರಿಂದ ಸೋದೆ “ವಾದಿರಾಜ”ರ ದರ್ಶನಕ್ಕೆ ಸಮಯ ನಿರ್ಬಂಧ- ಶ್ರೀವಿಶ್ವ ವಲ್ಲಭ ತೀರ್ಥರು

Date:

Vadiraja Tirtha ಭಾವಿಸಮೀರ ಶ್ರೀವಾದಿರಾಜ ಗುರುಸಾರ್ವಭೌಮರ ಮೂಲವೃಂದಾವನ ಸನ್ನಿಧಿ ಸೋದಾ ಕ್ಷೇತ್ರವು ಬಹು ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಳ್ಳುತ್ತಿದ್ದು, ಈಗಾಗಲೇ ಹಲವಾರು ಕಾಮಗಾರಿಗಳು ನಡೆದಿದೆ.

ಪ್ರಕೃತ ಶ್ರೀ ವಾದಿರಾಜರ ಮಂದಿರ ನಿರ್ಮಾಣ ಕಾರ್ಯವು ಆರಂಭಗೊಳ್ಳಲಿದ್ದು ಹಳೆಯ ಕಟ್ಟಡವನ್ನು ತೆರವು ಗೊಳಿಸುವ ಕೆಲಸ ಆರಂಭಗೊಳ್ಳಲಿದೆ. ಒಟ್ಟು ಮಂದಿರ ನಿರ್ಮಾಣ ಪೂರ್ಣಗೊಳ್ಳಲು ಎರಡು ವರ್ಷಗಳ ಅವಧಿ ಬೇಕಾಗಿದೆ. ಆದ್ದರಿಂದ ಶ್ರೀ ಗುರುರಾಜರ ಹಾಗೂ ಭೂತರಾಜರ ದರ್ಶನಕ್ಕೆ ಈ ಸಂದರ್ಭದಲ್ಲಿಯೂ ಎಲ್ಲರಿಗೂ ಅವಕಾಶ ಮಾಡಿಕೊಡಬೇಕೆಂಬ ಉದ್ದೇಶದಿಂದ ಸೀಮಿತ ಅವಧಿಯಲ್ಲಿ ಅವಕಾಶ ಕಲ್ಪಿಸಲಾಗಿದೆ. 2024 ಏಪ್ರಿಲ್ 10 ನೇ ತಾರೀಕಿನಿಂದ ಪ್ರಾತಃ ಕಾಲ 5 ರಿಂದ 8 ರವರೆಗೆ ಹಾಗೂ ಸಂಜೆ 5.30 ರಿಂದ 7.30 ರವರೆಗೆ ಮಾತ್ರ ದರ್ಶನಕ್ಕೆ ಅವಕಾಶವಿದೆ. ಉಳಿದ ಸಮಯದಲ್ಲಿ ಮಂದಿರ ನಿರ್ಮಾಣ ಕಾಮಗಾರಿ ನಡೆಯಲಿರುವದರಿಂದ ದರ್ಶನಕ್ಕೆ ಅವಕಾಶವಿಲ್ಲ .

Vadiraja Tirtha ಬಂದ ಎಲ್ಲಾ ಭಕ್ತರಿಗೆ ತೀರ್ಥಪ್ರಸಾದ ಹಾಗೂ ವಸತಿ ವ್ಯವಸ್ಥೆ ಎಂದಿನಂತೆ ಇರುತ್ತದೆ. ಇಷ್ಟಾರ್ಥ ಸಿದ್ಧಿ ಸೇವೆಯೂ ಇನ್ನು ಮಂದಿರ ನಿರ್ಮಾಣ ಪೂರ್ಣಗೊಳ್ಳುವವರೆಗೆ ಇರುವುದಿಲ್ಲ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...