Thursday, August 13, 2026
Thursday, August 13, 2026

Breaking News ಭೇಟಿಗೆ ಟೈಮಿಲ್ಲ ಎಂದ ಅಮಿತ್ ಶಾ: ಈಶ್ವರಪ್ಪ ವಾಪಸ್

Date:

Breaking News ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಚುನಾವಣಾ ಎದುರಿಸಲು ನಿರ್ಧರಿಸಿರುವ ಮಾಜಿ ಸಚಿವ ಕೆಎಸ್ ಈಶ್ವರಪ್ಪನವರಿಗೆ ದೆಹಲಿಗೆ ಬಂದು ಮಾತುಕತೆ ನಡೆಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೂಚಿಸಿದ್ದರು.

ಅದರಂತೆ, ಈಶ್ವರಪ್ಪನವರು ಏ. 4ರಂದು ಬೆಳಗ್ಗೆಯೇ ದೆಹಲಿಗೆ ಪ್ರಯಾಣ ಬೆಳೆಸಿದ್ದರು. ಆದರೆ, ದೆಹಲಿಗೆ ಹೋದ ನಂತರ ಅಮಿತ್ ಶಾ ಅವರು ಈಶ್ವರಪ್ಪನವರನ್ನು ಭೇಟಿಯಾಗಲು ಸಮಯ ಕೊಡಲಿಲ್ಲ ಎಂದು ಹೇಳಲಾಗಿದೆ. ದೆಹಲಿಗೆ ಆಹ್ವಾನ ನೀಡಿದ ನಂತರವೂ ಈಶ್ವರಪ್ಪನವರು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದೇ ಅದಕ್ಕೆ ಕಾರಣವಿರಬಹುದು ಎಂದು ಅಂದಾಜಿಸಲಾಗಿದೆ.

ಮಂಗಳವಾರ ದೂರವಾಣಿ ಕರೆ ಮಾಡಿದ್ದ ಅಮಿತ್‌ ಶಾ ಅವರು ಬುಧವಾರ ದಿಲ್ಲಿಗೆ ಬರುವಂತೆ ಸೂಚಿಸಿದ್ದಾರೆ ಎಂಬುದಾಗಿ ಈಶ್ವರಪ್ಪ ಹೇಳಿದ್ದರು. ಬುಧವಾರ ದಿಲ್ಲಿಗೆ ತೆರಳುವ ಮುನ್ನವೂ ಅಲ್ಲಿನ ಬೆಳವಣಿಗೆಗಳನ್ನೆಲ್ಲಾ ನೇರವಾಗಿ ಹೇಳುವುದಾಗಿ ತಿಳಿಸಿದ್ದರು. ಆದರೆ ದಿಲ್ಲಿಗೆ ತೆರಳಿದ ಈಶ್ವರಪ್ಪ ಅವರಿಗೆ ಭೇಟಿ ಸಾಧ್ಯವಿಲ್ಲ ಎಂಬುದಾಗಿ ಅಮಿತ್‌ ಶಾ ಕಚೇರಿಯಿಂದ ಸಂದೇಶ ರವಾನೆಯಾಗಿದ್ದರಿಂದ ನಿರಾಸೆಯಾಗಿದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...