Breaking News ವಿಜಯಪುರ ಜಿಲ್ಲೆ ಲಚ್ಯಾಣಗ್ರಾಮದಲ್ಲಿ ಕೊಳವೆಬಾವಿಗೆ ಬಿದ್ದಿದ್ದ 2 ವರ್ಷದ ಸಾತ್ವಿಕ್ ಸಾವು ಗೆದ್ದು ಬಂದಿದ್ದಾನೆ. 20 ಅಡಿಯ ಕೊಳವೆಬಾವಿಯಿಂದ ಬಾಲಕನನ್ನು ಯಶಸ್ವಿಯಾಗಿ ರಕ್ಷಿಸಲಾಗಿದೆ.
ಕೊನೆಯ ಹಂತದ ಕಾರ್ಯಾಚರಣೆ ವೇಳೆ ಬಾಲಕ ಅಳುತ್ತಿರುವ ಧ್ವನಿಯು ಸಿಬ್ಬಂದಿಗೆ ಕೇಳಿಸಿದೆ. ಈ ಕುರಿತು ಅಧಿಕಾರಿಗಳೇ ಮಾಹಿತಿ ನೀಡಿದರು.
Breaking News ವಿಜಯಪುರದಲ್ಲಿ ತಂದೆ-ತಾಯಿ ಸೇರಿ ಲಕ್ಷಾಂತರ ಜನರು ಸಲ್ಲಿಸಿದ ಪ್ರಾರ್ಥನೆ ಫಲಿಸಿದೆ. ಸುಮಾರು 15 ಗಂಟೆಗೂ ಹೆಚ್ಚು ಕಾಲ ಎನ್ಡಿಆರ್ಎಫ್ ಹಾಗೂ ಎಸ್ಡಿಆರ್ಎಫ್ ತಂಡಗಳು ನಡೆಸಿದ ರಕ್ಷಣಾ ಕಾರ್ಯಾಚರಣೆಯು ಫಲಿಸಿದೆ.
