Voter Awareness ಸೊರಬ ತಾಲ್ಲೂಕಿನ ಎಣ್ಣೆಕೊಪ್ಪ ಹಾಗೂ ಭಾರಂಗಿ ಗ್ರಾಮ ಪಂಚಾಯತ್ ನಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕೆರೆ ಹೂಳೆತ್ತುವ ಕಾಮಗಾರಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಕೂಲಿಕಾರರಿಗೆ ಜಿಲ್ಲಾ ಪಂಚಾಯತ್ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆಯವರು ಮತದಾನದ ಮಹತ್ವ ಮತ್ತು ಕಡ್ಡಾಯ ಮತದಾನದ ಕುರಿತು ಜಾಗೃತಿ ಮೂಡಿಸಿದರು. ಹಾಗೂ ಇದೇ ವೇಳೆ ನೆರೆದಿದ್ದವರಿಗೆ ಮತದಾನದ ಪ್ರತಿಜ್ಞಾವಿಧಿ ಯನ್ನು ಬೋಧಿಸಲಾಯಿತು.
ಈ ವೇಳೆ ಸೊರಬದ ಸಹಾಯಕ ನಿರ್ದೇಶಕರು (ಗ್ರಾ. ಉ ), ಪಿಡಿಓ ಹಾಗೂ ಇತರೆ ಸಿಬ್ಬಂದಿಗಳು ಹಾಜರಿದ್ದರು.
