Thursday, March 19, 2026
Thursday, March 19, 2026

Siddaramaiah ಲಡಾಖ್ ನ ಪ್ರದೇಶ ಚೀನಾ ಅತಿಕ್ರಮ:ಪ್ರಧಾನಿ ಆಘಾತಕಾರಿ ಮೌನ- ಸಿದ್ಧರಾಮಯ್ಯ ಟೀಕಾಸ್ತ್ರ

Date:

Siddaramaiah ನೆರೆಯ ರಾಷ್ಟ್ರವಾದ ಚೀನಾ ಭಾರತದ ಗಡಿಭಾಗಗಳನ್ನು ಅತಿಕ್ರಮಿಸಿ ಭಾರತದ ನೆಲದಲ್ಲಿ ಸೇನಾ ನೆಲೆಗಳು, ಬಂಕರ್‌ಗಳು, ಹಳ್ಳಿಗಳನ್ನು ನಿರ್ಮಿಸಿದ್ದರೂ ಸಹ ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಚಕಾರವೆತ್ತಿಲ್ಲ. ತಮ್ಮನ್ನು ವಿಶ್ವಗುರು, ಜಾಗತಿಕ ನೇತಾರ ಎಂದು ಬಿಂಬಿಸಿಕೊಳ್ಳುವ ಮೋದಿಯವರು ಲಡಾಖ್‌ನಲ್ಲಿ ಸುಮಾರು ನಾಲ್ಕು ಸಾವಿರ ಚ.ಕಿಮೀ ಪ್ರದೇಶವನ್ನು ಚೀನಾ ಆತಿಕ್ರಮಿಸಿ ಕೂತಿದ್ದರೂ ಚೀನಾದ ಪಡೆಗಳನ್ನು ಹಿಂದೆ ಕಳುಹಿಸುವ ಧೈರ್ಯ ತೋರಿಲ್ಲ. ಮೋದಿಯವರ ಆಘಾತಕಾರಿ ಮೌನದಿಂದಾಗಿ ನಮ್ಮ ಸೇನಾ ಪಡೆಗಳು ಗಸ್ತು ತಿರುಗುತ್ತಿದ್ದ ಅನೇಕ ಪ್ರದೇಶಗಳನ್ನು, ಗಸ್ತುಠಾಣೆಗಳಿದ್ದ ಆಯಕಟ್ಟಿನ ಜಾಗಗಳನ್ನು ಚೀನಾಗೆ ಬಿಟ್ಟುಕೊಡಲಾಗಿದೆ.

Siddaramaiah ಅರುಣಾಚಲ ಪ್ರದೇಶದಲ್ಲಿಯಂತೂ ಚೀನಾ ಭಾರತದ ನೆಲದಲ್ಲಿ ಹೆದ್ದಾರಿಗಳನ್ನು ಮಾಡಿ, ಹಳ್ಳಿಗಳನ್ನು ನಿರ್ಮಿಸಿದೆ. ಉಪಗ್ರಹ ಚಿತ್ರಗಳು ಈ ಎಲ್ಲದಕ್ಕೂ ದಾಖಲೆ ನೀಡುತ್ತಿವೆ. ಆದರೆ, ಕಾಗದದ ಹುಲಿ ಮೋದಿ ಮಾತ್ರ ಕಣ್ಣುಮುಚ್ಚಿ ಕೂತಿದ್ದಾರೆ. ಮೋದಿ ಆಡಳಿತದಲ್ಲಿ ಭಾರತದ ಸಾರ್ವಭೌಮತೆ, ಅಖಂಡತೆಗೆ ಇನ್ನಿಲ್ಲದ ಧಕ್ಕೆ ಒದಗಿದೆ. ಬಡಾಯಿ ವೀರ ಮೋದಿಯವರ ಹೇಡಿತನದಿಂದಾಗಿ ಭಾರತದ ವೀರ ಸೈನಿಕರು ಇಂದು ಎದುರಾಳಿಗಳ ಮುಂದೆ ತಮ್ಮದೇ ನೆಲದಲ್ಲಿ ಕೈಕಟ್ಟಿ ನಿಲ್ಲುವ ಪರಿಸ್ಥಿತಿ ಬಂದಿದೆ. ಚೀನಾ ಅತಿಕ್ರಮಣ ವಿಚಾರದಲ್ಲಿ ತಮ್ಮ ವೈಫಲ್ಯತೆ, ಹುಳುಕುಗಳನ್ನು ಮುಚ್ಚಿಟ್ಟುಕೊಳ್ಳುವ ಸಲುವಾಗಿ ಹೇಡಿ ಮೋದಿ ದೇಶದ ಜನತೆಯಿಂದ ಸತ್ಯವನ್ನು ಮುಚ್ಚಿಟ್ಟು ದ್ರೋಹ ಎಸಗಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...