Monday, March 23, 2026
Monday, March 23, 2026

Arun Yogiraj ಜನರನ್ನು ಮೆಚ್ಚಿಸುವುದು ಕಷ್ಟ, ರಾಮಲಲ್ಲಾ ಮೂರ್ತಿ ಮೆಚ್ಚುಗೆಯಾಗುವದೋ ಇಲ್ಲವೋ ಅನುಮಾನವಿತ್ತು- ಶಿಲ್ಪಿ ಅರುಣ್ ಯೋಗಿರಾಜ್

Date:

Arun Yogiraj ನನ್ನ ಕುಲಕಸುಬು ಕೆತ್ತನೆ. ಇದು ನನಗೆ ಬಹಳ ಇಷ್ಟ. ಶಿಲ್ಪಿ ಕೆತ್ತಿದರೆ ಸಾಲದು. ಅದು ಸಾರ್ವಜನಿಕರು ಮೆಚ್ಚುಗೆಗೆ ಪಾತ್ರವಾಗಬೇಕು. ಇದು ನನಗೆ ಅಯೋಧ್ಯೆ ರಾಮಮಂದಿರದಲ್ಲಿ ಬಾಲರಾಮನ ಕೆತ್ತನೆ ಅನಾವರಣ ಆದನಂತರ ಹುಟ್ಟಿದ ವಿಚಾರ ಎಂದು ರಾಮಲ್ಲಾ ವಿಗ್ರಹದ ಶಿಲ್ಪಿ ಅರುಣ್ ಯೋಗಿರಾಜ್ ಹೇಳಿದರು.

ಅಂಬೇಡ್ಕರ್ ಭವನದಲ್ಲಿ ಜಿಲ್ಲಾ ವಿಶ್ವಕರ್ಮ ಮಹಾಸಭಾ, ಜಿಲ್ಲಾ ವಿಶ್ವ ಬ್ರಾಹ್ಮಣರ ಸಂಘ, ಶ್ರೀಕಾಳಿಕಾಪರಮೇಶ್ವರಿ ದೇವಸ್ಥಾನ ಸೇವಾ ಸಮಿತಿ, ಹರಕೆರೆ ಕಾಳಿಕಾಂಬ ದೇವಸ್ಥಾನ ಸಮಿತಿ ಹಾಗೂ ಜಿಲ್ಲಾ ವಿವಿಧ ಸಂಘಸಂಸ್ಥೆಗಳ ಸಹಯೋಗದೊಂದಿಗೆ ಅಯೋಧ್ಯೆಯ ಶ್ರೀರಾಮಲಲ್ಲಾ ವಿಗ್ರಹದ ಶಿಲ್ಪಿಗಳಾದ ಅರುಣ್ ಯೋಗಿರಾಜ್‌ಗೆ ಏರ್ಪಡಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ರಾಮಲಲ್ಲಾನ ವಿಗ್ರಹದ ಕೆತ್ತನೆಯ ಆದೇಶ ಬರುವ ಮುಂಚೆ ಮೊದಲಿಗೆ ಶಂಕರಾಚಾರ್ಯರ ಪ್ರತಿಮೆ ಕೆತ್ತನೆ ಕೆಲಸ ಮಾಡಿದ್ದೆ. ಶಂಕರಾಚಾರ್ಯರ ವಿಗ್ರಹ ಕೆತ್ತನೆಯ ನಂತರ ತನ್ನ ಜೀವನವೇ ಬದಲಾಯಿತು. ಭಗವಂತ ಅವಕಾಶ ಕಲ್ಪಿಸಿಕೊಡ್ತಾನೆ. ಅದರ ಸದುಪಯೋಗ ಹೇಗೆ ಮಾಡಿಕೊಳ್ಳುತ್ತೇವೆ ಎಂಬುದರ ಮೇಲೆ ನಮ್ಮ ಜೀವನ ನಡೆಯುತ್ತದೆ ಎಂದರು.

ಶಂಕರಾಚಾರ್ಯರ ಪ್ರತಿಮೆ ಕೆತ್ತನೆ ಕೆತ್ತುವ ಮೂಲಕ ದಕ್ಷಿಣದಿಂದ ಉತ್ತರಕ್ಕೆ ನಮ್ಮ ಕಲೆ ಪರಿಚಯವಾಯಿತು ಎಂದರು.

Arun Yogiraj ಕಷ್ಟದ ನಂತರ ಸುಖ ಇರುತ್ತದೆ. ಎಷ್ಟೇ ಕಷ್ಟ ಎನಿಸಿದರೂ ಮಾಡುವ ಕರ್ಮ ಬಿಡಬಾರದು. ಕಷ್ಟದ ನಂತರ ಬರುವುದೇ ಸುಖ ಅದಕ್ಕೆ ನಾನೇ ಉದಾಹರಣೆ ಎಂದ ಯೋಗಿರಾಜ್, ಜನರನ್ನು ಮೆಚ್ಚಿಸುವುದು ಕಷ. ಹಾಗಾಗಿ ದೇಶದ ಜನರಿಗೆ ರಾಮಲಲ್ಲಾನ ಮೂರ್ತಿ ಮೆಚ್ಚಿಗೆ ಆಗುವುದೇ ಎಂಬ ಆತಂಕ ಮತ್ತು ಕುತೂಹಲವಿತ್ತು. ಆದರೆ ದೇವರ ಕೃಪೆ ಜನ ಮೆಚ್ಚಿಕೊಂಡರು ಎಂದರು.

ಸನ್ಮಾನ ಸಿಗಲಿದೆ ಎಂಬ ಕಾರಣಕ್ಕೆ ಬಾಲರಾಮನ ವಿಗ್ರಹ ಕೆತ್ತನೆಮಾಡಲಿಲ್ಲ. ಆದರೆ ಕೆತ್ತನೆಯ ಮೂಲಕ ಜನ ನನ್ನನ್ನು ಮೆಚ್ಚಿಕೊಂಡಿದ್ದಾರೆ. ೨೦ ವರ್ಷದಿಂದ ಕೆತ್ತನೆ ಮಾಡಿಕೊಂಡು ಬಂದಿರುವೆ. ಆದರೆ ನಮ್ಮಪ್ಪ ನನ್ನ ಕೆಲಸವನ್ನು ಮೆಚ್ಚಿಕೊಂಡಿರಲಿಲ್ಲ. ಆದರೆ ಜನರು ನಿನ್ನ ತಾತನ ಹಾಗೆ ಕೆತ್ತನೆ ಮಾಡುತ್ತಿರುವೆ ಎನ್ನುತ್ತಿದ್ದರು. ಆದರೆ ತಂದೆ ಒಪ್ಪಿರಲಿಲ್ಲ. ಆದರೆ ರಾಮಲಲ್ಲನ ವಿಗ್ರಹ ಅನಾವರಣಗೊಂಡಾಗ ಅಪ್ಪ ಒಪ್ಪಿಕೊಂಡರು. ತಾತನ ಹೆಸರು ಉಳಿಸಿದೆ ಎಂದರು.

ಹಾಸನ ಜಿಲ್ಲೆಯ ಅರೆಮಾದನಹಳ್ಳಿಯ ಶಿವಸುಜ್ಞಾನ ಸ್ವಾಮೀಜಿ, ಚನ್ನಗಿರಿ ತಾಲೂಕಿನ ವಡ್ನಾಳ್ ಮಟದ ಶಂಕರ ಆತ್ಮಾನಂದ ಸರಸ್ವತಿ ಮಹಾಸ್ವಾಮಿಜಿ ದಿವ್ಯಸಾನಿಧ್ಯ ವಹಿಸಿದ್ದರು.

ವಿಶ್ವಕರ್ಮ ಮಹಾಸಭಾದ ನಿರಂಜನ ಮೂರ್ತಿ ಅಧ್ಯಕ್ಷತೆ ವಹಿಸಿದ್ದರು.
ಈ ವೇಳೆ ಶಿಲ್ಪಿ ಅರುಣ್ ಯೋಗಿರಾಜ್ ಗೆ ದೇವಶಿಲ್ಪಿ ಬಿರುದನ್ನು ನೀಡಿ ಗೌರವಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sagara News ಸಾಗರದಲ್ಲಿ “ಕ್ಯಾಂಪಸ್ ಕಟ್ಟೆ”.ಸಾಧಕಿಯರ ಬಗ್ಗೆ ವಿದ್ಯಾರ್ಥಿನಿಯರಿಂದ ಪರಿಚಯ.

Sagara News ಮಹಿಳಾ ಸಬಲೀಕರಣ ಪ್ರಾಮುಖ್ಯತೆ ಪಡೆಯುತ್ತಿರುವ ಅದೂ ಮಹಿಳಾ ದಿನಾಚರಣೆಯ...

Bakkeshwara Swamy Rathotsava ದಾವಣಗೆರೆ ಹೃದಯಭಾಗದ ರಾಜಬೀದಿಯ ಏಕೈಕವಾದ ಶ್ರೀಬಕ್ಕೇಶ್ವರ ಮಹಾರಥೋತ್ಸವ. ...

Bakkeshwara Swamy Rathotsava ದಾವಣಗೆರೆಯು ಅನಾದಿಕಾಲದಿಂದಲೂ ವ್ಯಾಪಾರೋದ್ಯಮಕ್ಕೆ ಪ್ರಸಿದ್ಧವಾದ ಕೇಂದ್ರವಾಗಿದ್ದು 1801...

KFD ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಮಂಗನ ಕಾಯಿಲೆಗೆ ಈ ವರ್ಷಎರಡನೇ ಬಲಿ.

KFD ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತಟ್ಟಿಕೇವಿಯಲ್ಲಿ ಮಂಗನ ಕಾಯಿಲೆಗೆ ಈ...

Cheetah Attack ಮುತ್ತಗಿ ಗ್ರಾಮದ ರೈತನ ಮೇಲೆ ಚಿರತೆ ಹಠಾತ್ ದಾಳಿ. ಮೆಗ್ಗಾನ್ ಆಸ್ಪತ್ರೆಗೆ ರೈತ ದಾಖಲು.

Cheetah Attack ಶಿಕಾರಿಪುರ ತಾಲ್ಲೂಕಿನ ತಡಸನಹಳ್ಳಿ, ಅಡಗಂಟಿ, ಮುತ್ತಗಿ ಗ್ರಾಮದ ರೈತರ...