Monday, March 23, 2026
Monday, March 23, 2026

B.Y.Vijayendra ಈಶ್ವರಪ್ಪನವರೇ ಪಕ್ಷದ ಹಿತದೃಷ್ಟಿಯಿಂದ ಕೈಜೋಡಿಸಬೇಕು- ಬಿ.ವೈ.ವಿಜಯೇಂದ್ರ

Date:

B.Y.Vijayendra ಕೆ.ಎಸ್‌. ಈಶ್ವರಪ್ಪನವರೆ ಇನ್ನೂ ಕಾಲ ಮಿಂಚಿಲ್ಲ, ಕೈ ಜೋಡಿಸಿ ತಮಗೆ ವಿನಂತಿ ಮಾಡುತ್ತೇನೆ. ನಿಮ್ಮ ಸಮಸ್ಯೆ ಇದ್ದರೆ ದೆಹಲಿ ನಾಯಕರ ಜೊತೆ ಮಾತನಾಡಿ, ನಾವಂತೂ ನಿಮ್ಮ ಜೊತೆ‌ ಇರುತ್ತೇವೆ, ನೀವು ಸಹ ನಮ್ಮ ಜೊತೆ ಇರಬೇಕು ಎಂಬುದು ನಮ್ಮ ಆಸೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಚುನಾವಣಾ ಪ್ರಚಾರ ಸಂಬಂಧ ಮಾತನಾಡಿದ ಅವರು, ಮನೆ ಮನೆಯಲ್ಲಿ ‌ಮೋದಿ ಬಗ್ಗೆ ಮಾತನಾಡ್ತಿದ್ದಾರೆ. ಮೋದಿ ಮತ್ತೊಮ್ಮೆ ಪ್ರಧಾನಮಂತ್ರಿ ಆಗಬೇಕು ಅಂತಾ ಹರಸುತ್ತಿದ್ದಾರೆ. ರಾಜ್ಯದಲ್ಲಿ 28 ಸ್ತಾನ ಬರುತ್ತವೆ. ಇದರಲ್ಲಿ ಯಾವುದೇ ಅನುಮಾನ ‌ಇಲ್ಲ, ಕಾಂಗ್ರೆಸ್ ಪಕ್ಷ ದಿಕ್ಕಾಪಾಲಾಗುತ್ತದೆ. ಯಾವುದೇ ಸ್ಥಾನ ಗೆಲ್ಲಲ್ಲ, ರಾಜ್ಯದಲ್ಲಿ ಕಾಂಗ್ರೆಸ್‌ ಗೆದ್ದರೇ ಅದು ಪ್ರಪಂಚದಲ್ಲಿ 8 ನೇ ಅದ್ಬುತ ಎಂದರು.
B.Y.Vijayendra ಈಶ್ವರಪ್ಪರವರೇ ನೀವು ಹಿರಿಯರು ಪಕ್ಷ ಕಟ್ಟಲು ನಿಮ್ದು‌ ದೊಡ್ಡ ಪಾಲಿದೆ, ಯಾವುದೋ ಪರಿಸ್ಥಿತಿ ಸಂದರ್ಭ ಈ ಸನ್ನಿವೇಶಕ್ಕೆ ತಮ್ಮನ್ನು ದೂಡಿದೆ. ಮೋದಿ ಪ್ರಧಾನಮಂತ್ರಿ ಆಗಲು ಪಕ್ಷದ ಹಿತದೃಷ್ಟಿಯಿಂದ ತಾವು ಕೈಜೋಡಿಸಬೇಕು, ನಿಮ್ಮ ಸಮಸ್ಯೆಗಳನ್ನು ದೆಹಲಿ ನಾಯಕರ ಜೊತೆ ಮಾತನಾಡಿ ಸರಿಪಡಿಸಿಕೊಳ್ಳಿ ನಿಮ್ಮೊಂದಿಗೆ ನಾವು ಇರುತ್ತೇವೆ ಎಂದಿದ್ದಾರೆ. ಈಶ್ವರಪ್ಪ ಅವರಿಗೆ ಇನ್ನು ಕಾಲ ಮಿಂಚಿಲ್ಲ ಎಂದರು
ರಾಘವೇಂದ್ರ ಅಭಿವೃದ್ಧಿ ಬಗ್ಗೆ ಜನ ಮಾತನಾಡ್ತಿದ್ದಾರೆ. ಅವರು ಈ ಸಲ 2 ಲಕ್ಷ ಮತಗಳ ಅಂತರ ನೀಡಿದರು. ಗೆಲ್ಲುತ್ತಾರೆ. ಪ್ರೀತಂಗೌಡ ಜೊತೆ ಮಾತನಾಡಿದ್ದೇನೆ. ಅವರಿಗೆ ಮೈಸೂರು ಚಾಮರಾಜನಗರ ‌ಜವಾಬ್ದಾರಿ ಕೊಟ್ಟಿದ್ದೇವೆ, ಎಲ್ಲವೂ ಸರಿ ಹೋಗುತ್ತದೆ ಎಂದರು.
ಪ್ರಜ್ವಲ್ ರೇವಣ್ಣ ಹೆಚ್ಚಿನ ಬಹುಮತದಿಂದ ಗೆಲ್ಲುತ್ತಾರೆ, ಪ್ರಧಾನಮಂತ್ರಿ, ಅಮಿತ್ ಶಾ ಇನ್ನು ನಾಲ್ಕೈದು ಬಾರಿ ರಾಜ್ಯಕ್ಕೆ ಪ್ರಚಾರಕ್ಕೆ ಬರುತ್ತಾರೆ. ಯೋಗಿ ಆದಿತ್ಯನಾಥ್ ಸಹ ರಾಜ್ಯಕ್ಕೆ ಪ್ರಚಾರಕ್ಕೆ ಬರುತ್ತಾರೆ ಎಂದು ಮಾಹಿತಿ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sagara News ಸಾಗರದಲ್ಲಿ “ಕ್ಯಾಂಪಸ್ ಕಟ್ಟೆ”.ಸಾಧಕಿಯರ ಬಗ್ಗೆ ವಿದ್ಯಾರ್ಥಿನಿಯರಿಂದ ಪರಿಚಯ.

Sagara News ಮಹಿಳಾ ಸಬಲೀಕರಣ ಪ್ರಾಮುಖ್ಯತೆ ಪಡೆಯುತ್ತಿರುವ ಅದೂ ಮಹಿಳಾ ದಿನಾಚರಣೆಯ...

Bakkeshwara Swamy Rathotsava ದಾವಣಗೆರೆ ಹೃದಯಭಾಗದ ರಾಜಬೀದಿಯ ಏಕೈಕವಾದ ಶ್ರೀಬಕ್ಕೇಶ್ವರ ಮಹಾರಥೋತ್ಸವ. ...

Bakkeshwara Swamy Rathotsava ದಾವಣಗೆರೆಯು ಅನಾದಿಕಾಲದಿಂದಲೂ ವ್ಯಾಪಾರೋದ್ಯಮಕ್ಕೆ ಪ್ರಸಿದ್ಧವಾದ ಕೇಂದ್ರವಾಗಿದ್ದು 1801...

KFD ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಮಂಗನ ಕಾಯಿಲೆಗೆ ಈ ವರ್ಷಎರಡನೇ ಬಲಿ.

KFD ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತಟ್ಟಿಕೇವಿಯಲ್ಲಿ ಮಂಗನ ಕಾಯಿಲೆಗೆ ಈ...

Cheetah Attack ಮುತ್ತಗಿ ಗ್ರಾಮದ ರೈತನ ಮೇಲೆ ಚಿರತೆ ಹಠಾತ್ ದಾಳಿ. ಮೆಗ್ಗಾನ್ ಆಸ್ಪತ್ರೆಗೆ ರೈತ ದಾಖಲು.

Cheetah Attack ಶಿಕಾರಿಪುರ ತಾಲ್ಲೂಕಿನ ತಡಸನಹಳ್ಳಿ, ಅಡಗಂಟಿ, ಮುತ್ತಗಿ ಗ್ರಾಮದ ರೈತರ...