Thursday, September 17, 2026
Thursday, September 17, 2026

Chennai Police ತಾಂಬರಂ ರೈಲು ನಿಲ್ದಾಣದಲ್ಲಿ ನಾಲ್ಕು ಕೋಡಿ ರೂಪಾಯಿ ನಗದು ಸಾಗಿಸುತ್ತಿದ್ದ ಬಿಜೆಪಿ ಕಾರ್ಯಕರ್ತರ ಅರೆಸ್ಟ್

Date:

Chennai Police ಚೆನ್ನೈ ತಾಂಬರಂ ರೈಲು ನಿಲ್ದಾಣದಲ್ಲಿ 4 ಕೋಟಿ ರೂ.ನಗದು ಸಾಗಾಟಬ ಮಾಡುವಾಗ ಬಿಜೆಪಿ ಕಾರ್ಯಕರ್ತರು ಪೊಲೀಸರಿಗೆ ಸಿಕ್ಕಿಬಿದ್ದಿರುವ ಘಟನೆ ನಡೆದಿದೆ.

ಆರೋಪಿಗಳನ್ನು ಬಿಜೆಪಿ ಸದಸ್ಯ ಹಾಗೂ ಅಗರಂ ಮೂಲದ ಎಸ್ ಸತೀಶ್ (33), ಆತನ ಸಹೋದರ ಎಸ್ ನವೀನ್ (31), ತೂತುಕುಡಿಯ ಎಸ್ ಪೆರುಮಾಳ್ (26) ಎಂದು ಗುರುತಿಸಲಾಗಿದೆ. ಎರಡನೇ ದರ್ಜೆಯ ಎಸಿ ಕೋಚ್‌ನಲ್ಲಿ ಶೋಧ ನಡೆಸಿದಾಗ ಅವರು ಸಾಗಿಸುತ್ತಿದ್ದ ಬ್ಯಾಗ್‌ಗಳಲ್ಲಿ 500ರ ನೋಟುಗಳ ಕಂತೆ ಪತ್ತೆಯಾಗಿತ್ತು. ಇವರು ಆರು ಬ್ಯಾಗ್‌ಗಳಲ್ಲಿ 4 ಕೋಟಿ ರೂ.ಹಣವನ್ನು ಸಾಗಿಸುತ್ತಿದ್ದರು ಎನ್ನಲಾಗಿದೆ.

Chennai Police ಮೂವರು ರೈಲಿನಲ್ಲಿ ತಿರುನಲ್ವೇಲಿಗೆ ತೆರಳುತ್ತಿದ್ದಾಗ ಫ್ಲೈಯಿಂಗ್ ಸ್ಕ್ವಾಡ್ ಅವರನ್ನು ವಶಕ್ಕೆ ಪಡೆದಿದೆ. ಈ ವಿಷಯದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

ಈ ಕುರಿತು ಮಾಹಿತಿಯನ್ನು ಸ್ವೀಕರಿಸಿದ ನಂತರ, ಪೊಲೀಸರು ಮತ್ತು ತಾಂಬರಂನಲ್ಲಿ ಬೀಡುಬಿಟ್ಟಿದ್ದ ಫ್ಲೈಯಿಂಗ್ ಸ್ಕ್ವಾಡ್ ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಚೆನ್ನೈನ ತಾಂಬರಂ ರೈಲು ನಿಲ್ದಾಣಕ್ಕೆ ತೆರಳಿದ್ದರು.

ನಂತರ ಪೊಲೀಸರು ಮೂವರೂ ಶಂಕಿತರನ್ನು ಬಂಧಿಸಿ ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಿದ್ದಾರೆ. ವರದಿಗಳ ಪ್ರಕಾರ, ಐಟಿ ತಂಡಗಳು ಆರೋಪಿಗಳನ್ನು ವಿಚಾರಣೆ ನಡೆಸಲಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...