Thursday, October 3, 2024
Thursday, October 3, 2024

ಬಗರ್ ಹುಕುಂ ಸಾಗುವಳಿ ರೈತರ ಪ್ರತಿಭಟನೆ

Date:

ಶಿವಮೊಗ್ಗದ, ಅಗಸವಳ್ಳಿ ಗ್ರಾಮದ ರೈತರು ಹಲವು ವರ್ಷಗಳಿಂದ ಬಗರ್ ಹುಕುಂ ಸಾಗುವಳಿ ಮಾಡಿಕೊಂಡು ಬರುತ್ತಿದ್ದಾರೆ. ಬಗರ್ ಹುಕುಂ ರೈತರಿಗೆ ಸಾಗುವಳಿ ಚೀಟಿ ನೀಡುವಂತೆ ಆಗ್ರಹಿಸಿ, ಇಲ್ಲಿನ ರೈತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಅಗಸವಳ್ಳಿಯ ರೈತರು ಸುಮಾರು ಐವತ್ತು ವರ್ಷಗಳಿಂದ ಬಗರ್ ಹುಕುಂ ಸಾಗುವಳಿ ಮಾಡಿಕೊಂಡು ಬರುತ್ತಿದ್ದಾರೆ. ಸರ್ಕಾರಕ್ಕೆ ಈ ಬಗ್ಗೆ ಫಾರಂ ನಂ.50,53 ಹಾಗೂ 57 ರಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಸಾಗುವಳಿದಾರರು ಎಲ್ಲಾ ಹಿಂದುಳಿದ ವರ್ಗಗಳಿಗೆ ಸೇರಿದವರಾಗಿದ್ದಾರೆ. ಬಗರ್ ಹುಕುಂ ಸಾಗುವಳಿಯಿಂದಲೇ ರೈತರ ಜೀವನ ನಡೆಯಬೇಕಾಗಿದೆ. ಕೆಲವರು ಸುಳ್ಳು ಹೇಳಿ ನಿವೇಶನ ಪಡೆದುಕೊಂಡಿದ್ದಾರೆ. ಆದ್ದರಿಂದ ನಿಜವಾದ ಸಾಗುವಳಿದಾರರಿಗೆ ಸಾಗುವಳಿ ಚೀಟಿ ಕೊಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಸರ್ಕಾರವು ಈ ಹಿಂದೆ ಬಗರ್ ಹುಕುಂ ಜಮೀನುಗಳನ್ನು ಸರ್ವೆ ಮಾಡಲು ಆದೇಶವನ್ನು ನೀಡಿತ್ತು. ಆದರೆ, ಸರ್ವೆ ನಡೆಯಲಿಲ್ಲ. 2008ರಲ್ಲಿ ಸರ್ವೆ ನಡೆದಿದೆ. ಅದರ ಪ್ರಕಾರವೇ ಸಾಗುವಳಿ ಚೀಟಿ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಟಿ. ಪೆರುಮಾಳ್, ಗಂಗಾಧರ್, ಓಂಕಾರಪ್ಪ ಹೀಗೆ ಹಲವಾರು ಮಂದಿ ಉಪಸ್ಥಿತರಿದ್ದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Navaratri Festival ಬಂಗಾರಮಕ್ಕಿಯಲ್ಲಿ ಶರನ್ನವರಾತ್ರಿ ಉತ್ಸವ

Navaratri Festival ಬಂಗಾರಮಕ್ಕಿಯ ಹೇಮಪುರ ಮಹಾಪೀಠದ ಶ್ರೀ ವಿಶ್ವ ವೀರಾಂಜನೇಯ...

Klive Special Article ನವರಾತ್ರಿಯ ಮೊದಲ ದಿನ. ಶೈಲಪುತ್ರಿ ದೇವಿರೂಪ ಆರಾಧನೆ

ಲೇ; ಎನ್.ಜಯಭೀಮ ಜೊಯಿಸ್. ಶಿವಮೊಗ್ಗ Navaratri Festival ವಂದೇ ವಾಂಛಿತ ಲಾಭಾಯಚಂದ್ರಾರ್ಧಕೃತಶೇಖರಂ/ವೃಷಾರೂಢಂ...

Gandhi Jayanthi ನಗರದ ರೋವರ್ಸ್ ಕ್ಲಬ್ ನಲ್ಲಿ ಗಾಂಧಿ ಜಯಂತಿ ಆಚರಣೆ

Gandhi Jayanthi ನಗರದ ರೋವರ್ಸ್ ಕ್ಲಬ್ ಆವರಣದಲ್ಲಿ ಮಹಾತ್ಮ ಗಾಂಧೀಜಿಯವರ...

B.Y.Raghavendra ಸಾರ್ವಜನಿಕ ಉದ್ಯಮಗಳು & ಗೃಹ ಇಲಾಖೆ ಸಂಬಂಧಿತ ಸ್ಥಾಯಿ ಸಮಿತಿಗೆ ನೇಮಕವಾಗಿರುವ ಸಂಸದ ರಾಘವೇಂದ್ರರಿಗೆ ಅಭಿನಂದನೆ

B.Y.Raghavendra ಕೇಂದ್ರ ಸರ್ಕಾರದ ಸಂಸದೀಯ ಸಂಸ್ಥೆಗಳಾದ ಸಾರ್ವಜನಿಕ ಉದ್ಯಮಗಳ ಸಮಿತಿ,...